Homeಎಕಾನಮಿಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು...

ಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು…

- Advertisement -
- Advertisement -

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಮತ್ತು ಅಭಿವೃದ್ಧಿ ಪಾತಾಳಕ್ಕೆ ಕುಸಿಯುತ್ತಿದೆ. ವ್ಯಾಪಾರ ಹಾಗೂ ಉದ್ಯಮ ನೆಲಕಚ್ಚಿದ್ದು, ಆರ್ಥಿಕ ಅಭಿವೃದ್ಧಿಗಾಗಿ ಹರಸಾಹಸ ಮಾಡಲಾಗ್ತಿದೆ. ಈ ಮಧ್ಯೆ ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಸಭೆ (RCEP) ನಡೆಯಲಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ಥಿಕ ಸಭೆಗೂ ಮೊದಲು ಭಾರತದ ಮಂತ್ರಿಗಳು, ಭಾರತೀಯ ಉದ್ಯಮದ ಹಿತಾಸಕ್ತಿಗಳನ್ನು ಕಾಪಾಡಬೇಕು ಎಂದು ಆರ್‌ಎಸ್‌ಎಸ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

ಬ್ಯಾಂಕಾಕ್ ನಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಆರ್‌ಸಿಇಪಿ ಸಭೆ ನಡೆಯಲಿದೆ. ಈಗಾಗಲೇ ಆರ್ಥಿಕ ತಜ್ಞರು ಮತ್ತು ಮಂತ್ರಿಗಳು ಸಭೆಯಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಹಾಗೂ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳುವ ಮೊದಲು ಸೂಕ್ತವಾಗಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್‌ಸಿಇಪಿ ಅಡಿಯಲ್ಲಿ 10 ಏಷಿಯನ್ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ. ಬ್ರುನೇ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮಯನ್ಮಾರ್, ಪಿಲಿಪ್ಪೈನ್ಸ್, ಸಿಂಗಾಪೂರ್, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸದಸ್ಯ ರಾಷ್ಟ್ರಗಳಾಗಿವೆ. ಇದರ ಜತೆಗೆ ಆರು ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಅವುಗಳೆಂದರೆ ಚೀನಾ, ಭಾರತ, ಜಪಾನ್, ಕೋರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್.

ನವೆಂಬರ್ ತಿಂಗಳಲ್ಲಿ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಈಗಾಗಲೇ 16 ಸದಸ್ಯರನ್ನು ಒಳಗೊಂಡಿರುವ ಟ್ರೇಡ್ ಬ್ಲಾಕ್ ಸಭೆಯಲ್ಲಿ ಭಾಗವಹಿಸಲು ಸದಸ್ಯ ರಾಷ್ಟ್ರಗಳು ಉತ್ಸುಕವಾಗಿದೆ. ಭಾರತಕ್ಕೆ ಸೀಮಿತ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಅವಕಾಶ ಕೈತಪ್ಪಿ ಹೋಗದಂತೆ ಶ್ರಮಿಸಲಾಗುತ್ತಿದೆ. ಅದಾಗ್ಯೂ ಒಪ್ಪಂದಕ್ಕೆ ಮುಂದಿನ ವರ್ಷವೇ ಸಹಿ ಬೀಳುವ ನಿರೀಕ್ಷೆಯಿದೆ.

ಆರ್ಥಿಕತೆಯ ಕುರಿತ ಭೇಟಿ ವಿಚಾರವಾಗಿ ಸೋಮವಾರದಿಂದಲೇ ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ, ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೆ ಮತ್ತು ಉದ್ಯಮ ವಲಯ ಸಚಿವ ಪಿಯೂಷ್ ಗೋಯಲ್, ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮುಂದಿನ ಸಭೆ ಗೃಹ ಸಚಿವಾಲಯದಲ್ಲಿ ನಡೆಯಲಿದೆ.

ಇನ್ನು ಬಿಜೆಪಿ ನಾಯಕರೂ ಸಹ ಆರ್ಥಿಕತೆಯ ವಿಚಾರವಾಗಿ ಸಭೆ ನಡೆಸಿದ್ದಾರೆ. ಅಮಿತ್ ಶಾ, ಪಿಯೂಷ್ ಗೋಯಲ್, ಬಿಜೆಪಿಯ ಬಿ.ಎಲ್. ಸಂತೋಷ್ ಹಾಗೂ ಆರ್‌ಎಸ್‌ಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆ ಮತ್ತು ಉದ್ಯಮ ವಲಯದ ಸಮಸ್ಯೆಗಳ ಕುರಿತು ಗೋಪಾಲ್ ಅಗರ್ವಾಲ್, ವಿಜಯ್ ಚೌತೇವಾಲ್ ಮತ್ತು ಮಧ್ಯಸ್ಥಿಕೆದಾರರು ಮಾತುಕತೆ ನಡೆಸಿದರು. ಚೀನಾ ಮತ್ತು ಭಾರತದ ನಡುವೆ ನಡೆಯಲಿರುವ ಆರ್ಥಿಕ ಒಪ್ಪಂದ, ದೇಶೀಯ ಉತ್ಪಾದಕರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಸಮತೋಲನದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷಿ ವ್ಯಾಪಾರ, ಮುಕ್ತ ವ್ಯಾಪಾರ ಒಪ್ಪಂದ, ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ಕಡಿಮೆ ತೆರಿಗೆ ವಿಧಿಸುವುದು, ನಿತ್ಯ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ತೆರಿಗೆ, ವ್ಯಾಪಾರ ಸೇವಾ ವಲಯದಲ್ಲಿ ವಿಧಿಸುತ್ತಿರುವ ತೆರಿಗೆ ವಿಚಾರವಾಗಿ ಚೀನಾ, ಭಾರತದೊಂದಿಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ವ್ಯಾಪಾರ ಕೊರತೆಯು ಏಷಿಯನ್ ರಾಷ್ಟ್ರಗಳನ್ನು ಅಲ್ಲೋಲಕಲ್ಲೋಲ ಮಾಡಿದೆ. ಕೋರಿಯಾ, ಜಪಾನ್ ರಾಷ್ಟ್ರಗಳ ಮಧ್ಯಸ್ಥಿಕೆದಾರರು ಸಹ ಚಿಂತೆಗೀಡಾಗಿದ್ದಾರೆ. 2011ರ ಹಣಕಾಸು ವರ್ಷದಲ್ಲಿ 15 ಬಿಲಿಯನ್ ನಿಂದ 2017ರ ಹಣಕಾಸು ವರ್ಷದವರೆಗೆ 21 ಬಿಲಿಯನ್ ನಷ್ಟು ವ್ಯಾಪಾರ ಕೊರತೆಯ ಮಟ್ಟ ಏರಿಕೆ ಕಂಡಿದೆ. ರಾಸಾಯನಿಕಗಳು, ರಬ್ಬರ್, ಖನಿಜ, ಚರ್ಮ ಸೇರಿದಂತೆ 21 ಕ್ಷೇತ್ರಗಳಲ್ಲಿ ಅಸಮತೋಲನ ಹೆಚ್ಚಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರತ್ನ, ಆಭರಣ, ಲೋಹ ಮತ್ತು ವೈದ್ಯಕೀಯ ಉಪಕರಣಗಳ ಮಧ್ಯೆಯೂ ಅಸಮತೋಲನವಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದು, ದೇಶದ ಹಿತಾಸಕ್ತಿಗೆ ಅನುಗುಣವಾಗಿ, ಆರ್ಥಿಕತೆಯ ರಕ್ಷಣೆ ಮತ್ತು ದೇಶದ ನಿಯಮಗಳಿಗನುಸಾರವಾಗಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವಂತೆ ಕರೆ ನೀಡಿದ್ದಾರೆ. ಇನ್ನು ಭಾರತದೊಂದಿಗೆ ಚೀನಾದ ವ್ಯಾಪಾರ 2001 ರ ಹಣಕಾಸು ವರ್ಷದಲ್ಲಿ 0.6 ಬಿಲಿಯನ್ ಡಾಲರ್‌ ಆಗಿತ್ತು. 2017ರ ಹಣಕಾಸು ವರ್ಷದಲ್ಲಿ 52 ಬಿಲಿಯನ್ ತಲುಪಿದೆ. ಹೀಗಾಗಿ ಭಾರತದ ಒಟ್ಟು ವ್ಯಾಪಾರ ಕೊರತೆಯ ಅರ್ಧದಷ್ಟು ಭಾಗವನ್ನು ಚೀನಾ ಹೊಂದಿದೆ. ಕೃಷಿಕರು ಮತ್ತು ದೇಶೀಯ ಉತ್ಪಾದಕರಿಗೆ ತೊಂದರೆಯಾಗದಂತೆ ಒಪ್ಪಂದ ರೂಪಿಸಬೇಕು ಎಂಬುದನ್ನು ಬಿಜೆಪಿ ಸಭೆಯಲ್ಲಿ ನಿರ್ಣಯಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲ ರಾಷ್ಟ್ರಗಳು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ ಭಾರತದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳು ಭಾರಿ ಪರಿಣಾಮ ಬೀರಲಿವೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವತ್ತಲೂ ಗಮನಹರಿಸುವಂತೆ ಆಲೋಚಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...