Homeಎಕಾನಮಿಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು...

ಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು…

- Advertisement -
- Advertisement -

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಮತ್ತು ಅಭಿವೃದ್ಧಿ ಪಾತಾಳಕ್ಕೆ ಕುಸಿಯುತ್ತಿದೆ. ವ್ಯಾಪಾರ ಹಾಗೂ ಉದ್ಯಮ ನೆಲಕಚ್ಚಿದ್ದು, ಆರ್ಥಿಕ ಅಭಿವೃದ್ಧಿಗಾಗಿ ಹರಸಾಹಸ ಮಾಡಲಾಗ್ತಿದೆ. ಈ ಮಧ್ಯೆ ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಸಭೆ (RCEP) ನಡೆಯಲಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ಥಿಕ ಸಭೆಗೂ ಮೊದಲು ಭಾರತದ ಮಂತ್ರಿಗಳು, ಭಾರತೀಯ ಉದ್ಯಮದ ಹಿತಾಸಕ್ತಿಗಳನ್ನು ಕಾಪಾಡಬೇಕು ಎಂದು ಆರ್‌ಎಸ್‌ಎಸ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

ಬ್ಯಾಂಕಾಕ್ ನಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಆರ್‌ಸಿಇಪಿ ಸಭೆ ನಡೆಯಲಿದೆ. ಈಗಾಗಲೇ ಆರ್ಥಿಕ ತಜ್ಞರು ಮತ್ತು ಮಂತ್ರಿಗಳು ಸಭೆಯಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಹಾಗೂ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳುವ ಮೊದಲು ಸೂಕ್ತವಾಗಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್‌ಸಿಇಪಿ ಅಡಿಯಲ್ಲಿ 10 ಏಷಿಯನ್ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ. ಬ್ರುನೇ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮಯನ್ಮಾರ್, ಪಿಲಿಪ್ಪೈನ್ಸ್, ಸಿಂಗಾಪೂರ್, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸದಸ್ಯ ರಾಷ್ಟ್ರಗಳಾಗಿವೆ. ಇದರ ಜತೆಗೆ ಆರು ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಅವುಗಳೆಂದರೆ ಚೀನಾ, ಭಾರತ, ಜಪಾನ್, ಕೋರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್.

ನವೆಂಬರ್ ತಿಂಗಳಲ್ಲಿ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಈಗಾಗಲೇ 16 ಸದಸ್ಯರನ್ನು ಒಳಗೊಂಡಿರುವ ಟ್ರೇಡ್ ಬ್ಲಾಕ್ ಸಭೆಯಲ್ಲಿ ಭಾಗವಹಿಸಲು ಸದಸ್ಯ ರಾಷ್ಟ್ರಗಳು ಉತ್ಸುಕವಾಗಿದೆ. ಭಾರತಕ್ಕೆ ಸೀಮಿತ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಅವಕಾಶ ಕೈತಪ್ಪಿ ಹೋಗದಂತೆ ಶ್ರಮಿಸಲಾಗುತ್ತಿದೆ. ಅದಾಗ್ಯೂ ಒಪ್ಪಂದಕ್ಕೆ ಮುಂದಿನ ವರ್ಷವೇ ಸಹಿ ಬೀಳುವ ನಿರೀಕ್ಷೆಯಿದೆ.

ಆರ್ಥಿಕತೆಯ ಕುರಿತ ಭೇಟಿ ವಿಚಾರವಾಗಿ ಸೋಮವಾರದಿಂದಲೇ ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ, ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೆ ಮತ್ತು ಉದ್ಯಮ ವಲಯ ಸಚಿವ ಪಿಯೂಷ್ ಗೋಯಲ್, ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮುಂದಿನ ಸಭೆ ಗೃಹ ಸಚಿವಾಲಯದಲ್ಲಿ ನಡೆಯಲಿದೆ.

ಇನ್ನು ಬಿಜೆಪಿ ನಾಯಕರೂ ಸಹ ಆರ್ಥಿಕತೆಯ ವಿಚಾರವಾಗಿ ಸಭೆ ನಡೆಸಿದ್ದಾರೆ. ಅಮಿತ್ ಶಾ, ಪಿಯೂಷ್ ಗೋಯಲ್, ಬಿಜೆಪಿಯ ಬಿ.ಎಲ್. ಸಂತೋಷ್ ಹಾಗೂ ಆರ್‌ಎಸ್‌ಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆ ಮತ್ತು ಉದ್ಯಮ ವಲಯದ ಸಮಸ್ಯೆಗಳ ಕುರಿತು ಗೋಪಾಲ್ ಅಗರ್ವಾಲ್, ವಿಜಯ್ ಚೌತೇವಾಲ್ ಮತ್ತು ಮಧ್ಯಸ್ಥಿಕೆದಾರರು ಮಾತುಕತೆ ನಡೆಸಿದರು. ಚೀನಾ ಮತ್ತು ಭಾರತದ ನಡುವೆ ನಡೆಯಲಿರುವ ಆರ್ಥಿಕ ಒಪ್ಪಂದ, ದೇಶೀಯ ಉತ್ಪಾದಕರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಸಮತೋಲನದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷಿ ವ್ಯಾಪಾರ, ಮುಕ್ತ ವ್ಯಾಪಾರ ಒಪ್ಪಂದ, ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ಕಡಿಮೆ ತೆರಿಗೆ ವಿಧಿಸುವುದು, ನಿತ್ಯ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ತೆರಿಗೆ, ವ್ಯಾಪಾರ ಸೇವಾ ವಲಯದಲ್ಲಿ ವಿಧಿಸುತ್ತಿರುವ ತೆರಿಗೆ ವಿಚಾರವಾಗಿ ಚೀನಾ, ಭಾರತದೊಂದಿಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ವ್ಯಾಪಾರ ಕೊರತೆಯು ಏಷಿಯನ್ ರಾಷ್ಟ್ರಗಳನ್ನು ಅಲ್ಲೋಲಕಲ್ಲೋಲ ಮಾಡಿದೆ. ಕೋರಿಯಾ, ಜಪಾನ್ ರಾಷ್ಟ್ರಗಳ ಮಧ್ಯಸ್ಥಿಕೆದಾರರು ಸಹ ಚಿಂತೆಗೀಡಾಗಿದ್ದಾರೆ. 2011ರ ಹಣಕಾಸು ವರ್ಷದಲ್ಲಿ 15 ಬಿಲಿಯನ್ ನಿಂದ 2017ರ ಹಣಕಾಸು ವರ್ಷದವರೆಗೆ 21 ಬಿಲಿಯನ್ ನಷ್ಟು ವ್ಯಾಪಾರ ಕೊರತೆಯ ಮಟ್ಟ ಏರಿಕೆ ಕಂಡಿದೆ. ರಾಸಾಯನಿಕಗಳು, ರಬ್ಬರ್, ಖನಿಜ, ಚರ್ಮ ಸೇರಿದಂತೆ 21 ಕ್ಷೇತ್ರಗಳಲ್ಲಿ ಅಸಮತೋಲನ ಹೆಚ್ಚಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರತ್ನ, ಆಭರಣ, ಲೋಹ ಮತ್ತು ವೈದ್ಯಕೀಯ ಉಪಕರಣಗಳ ಮಧ್ಯೆಯೂ ಅಸಮತೋಲನವಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದು, ದೇಶದ ಹಿತಾಸಕ್ತಿಗೆ ಅನುಗುಣವಾಗಿ, ಆರ್ಥಿಕತೆಯ ರಕ್ಷಣೆ ಮತ್ತು ದೇಶದ ನಿಯಮಗಳಿಗನುಸಾರವಾಗಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವಂತೆ ಕರೆ ನೀಡಿದ್ದಾರೆ. ಇನ್ನು ಭಾರತದೊಂದಿಗೆ ಚೀನಾದ ವ್ಯಾಪಾರ 2001 ರ ಹಣಕಾಸು ವರ್ಷದಲ್ಲಿ 0.6 ಬಿಲಿಯನ್ ಡಾಲರ್‌ ಆಗಿತ್ತು. 2017ರ ಹಣಕಾಸು ವರ್ಷದಲ್ಲಿ 52 ಬಿಲಿಯನ್ ತಲುಪಿದೆ. ಹೀಗಾಗಿ ಭಾರತದ ಒಟ್ಟು ವ್ಯಾಪಾರ ಕೊರತೆಯ ಅರ್ಧದಷ್ಟು ಭಾಗವನ್ನು ಚೀನಾ ಹೊಂದಿದೆ. ಕೃಷಿಕರು ಮತ್ತು ದೇಶೀಯ ಉತ್ಪಾದಕರಿಗೆ ತೊಂದರೆಯಾಗದಂತೆ ಒಪ್ಪಂದ ರೂಪಿಸಬೇಕು ಎಂಬುದನ್ನು ಬಿಜೆಪಿ ಸಭೆಯಲ್ಲಿ ನಿರ್ಣಯಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲ ರಾಷ್ಟ್ರಗಳು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ ಭಾರತದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳು ಭಾರಿ ಪರಿಣಾಮ ಬೀರಲಿವೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವತ್ತಲೂ ಗಮನಹರಿಸುವಂತೆ ಆಲೋಚಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...