Homeಕರ್ನಾಟಕಭಾಗವಧ್ವಜ ಹಾರಿಸಿದ RSS : ದಲಿತ ಸಂಘಟನೆಗಳಿಂದ ತೀವ್ರ ಪ್ರತಿಭಟನೆಯ ನಂತರ ತೆರವು..

ಭಾಗವಧ್ವಜ ಹಾರಿಸಿದ RSS : ದಲಿತ ಸಂಘಟನೆಗಳಿಂದ ತೀವ್ರ ಪ್ರತಿಭಟನೆಯ ನಂತರ ತೆರವು..

- Advertisement -
- Advertisement -

ಆರ್.ಎಸ್.ಎಸ್ ಸಂಘಟನೆಯ ಕಾರ್ಯಕರ್ತರು ಸ್ವಾತಂತ್ರ್ಯೋತ್ಸವದ ದಿನ ತ್ರಿವರ್ಣ ಧ್ಚಜಕ್ಕೆ ಬದಲಾಗಿ ನಂಜನಗೂಡಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ಕೇಸರಿ ಭಾಗವಧ್ವಜ ಹಾರಿಸಿದ್ದಾರೆ. ಹೆಡಗೆವಾರ್, ಗೋಳ್ವಾಲ್ಕರ್ ಫೋಟೊ ಇದ್ದು ಅಮಾಯಕ ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ಆರ್.ಎಸ್.ಎಸ್ ಭಾಷಣ ಬಿಗಿಯಲು ಮುಂದಾಗಿದ್ದಾರೆ. ವಿಷಯ ಗೊತ್ತಾಗಿದ್ದೆ ಸ್ಥಳಕ್ಕಾಗಮಿಸಿದ ದಲಿತ ಸಂಘಟನೆಯ ಕಾರ್ಯಕರ್ತರು ತಹಶಿಲ್ದಾರ್ ಮತ್ತು ಪೋಲೀಸ್ ಇನ್ಸ್ ಪೆಕ್ಟರ್ ರವರ ಗಮನಕ್ಕೆ ತಂದು ಪ್ರತಿಭಟನೆ ನಡೆಸಿದ್ದಾರೆ.

ತಹಶಿಲ್ದಾರ್ ಮತ್ತು ಪೋಲೀಸ್ ಇನ್ಸ್ ಪೆಕ್ಟರ್ ಸ್ಥಳಕ್ಕೆ ಬಂದ ಕೂಡಲೇ ತಮ್ಮ ವರಸೆ ಬದಲಿಸಿದ ಆರ್.ಎಸ್.ಎಸ್ ಸಂಘಟನೆಯ ಕಾರ್ಯಕರ್ತರು ನಾವು ಸ್ವಾತಂತ್ರ್ಯ ದಿನ ಆಚರಿಸುತ್ತಿಲ್ಲ ಬದಲಗೆ ರಕ್ಷಾಬಂಧನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಅಲ್ಲಿಂದ ದಲಿತ ಸಂಘಟನೆಯ ಕಾರ್ಯಕರ್ತರು ಸರ್ಕಾರಿ ಜಾಗದಲ್ಲಿ ಸ್ವಾತಂತ್ರ್ಯೋತ್ಸವದ ದಿನ ತ್ರಿವರ್ಣ ಧ್ವಜ ಬಿಟ್ಟು ಬೇರೆ ಧ್ವಜ ಹಾರಿಸಬಾರದೆಂಬ ಸಾಮಾನ್ಯ ಜ್ಞಾನ ಇಲ್ಲವೇ? ರಕ್ಷಾ ಬಂಧನಕ್ಕೂ ನೀವು ಇಲ್ಲಿ ಇಟ್ಟಿರುವ ಹೆಡಗೆವಾರ್, ಗೋಳ್ವಾಲ್ಕರ್ ಫೋಟೋಗೂ, ಈ ಧ್ವಜಕ್ಕೂ ಏನು ಸಂಬಂಧ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನಂತರ ಪೋಲೀಸ್ ಇನ್ಸ್ ಪೆಕ್ಟರ್ ರವರು ಸರ್ಕಾರಿ ಜಾಗದಲ್ಲಿ ನೀವು ಈ ಕಾರ್ಯಕ್ರಮ ಮಾಡಲು ಅನುಮತಿ ಪಡೆದಿದ್ದೀರಾ? ಈ ಮೈದಾನದಲ್ಲಿ ಬೆಳಿಗ್ಗೆಯೇ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದೇವೆ ಮತ್ತೆ ನೀವ್ಯಾಕೆ ಈ ರೀತಿ ಕೋಮು ಸಾಮರಸ್ಯ ಕೆಡಿಸುತ್ತೀದ್ದೀರಿ ಎಂದು ತರಾಟೆಗೆ ತೆಗೆದುಕೊಂಡು ತೆರವುಗೊಳಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

ಆದರೆ ಜಗ್ಗದ ಆರ್.ಎಸ್.ಎಸ್ ಕಾರ್ಯಕರ್ತರು ಇದು ಸಾರ್ವಜನಿಕ ಜಾಗ ನಾವು ಆಚರಿಸುತ್ತೇವೆ ಎಂದಾಗ ದಲಿತ ಸಂಘಟನೆಯ ಕಾರ್ಯಕರ್ತರು ಮುಗಿಬಿದ್ದಿದ್ದಾರೆ. ವಿಭಿನ್ನ ಕೋಮಿನವರು ಬಂದು ತಮ್ಮ ತಮ್ಮ ಧ್ವಜವನ್ನು ಇಲ್ಲಿ ನೆಟ್ಟರೆ ಪರಿಸ್ಥಿತಿ ಹೇಗಿರುತ್ತದೆ? ದೇಶಕ್ಕೆ ಮತ್ತು ಸಂವಿಧಾನಕ್ಕೆ ಗೌರವ ಕೊಡಿ ಎಂದು ಆಗ್ರಹಿಸಿದ್ದಾರೆ.

ನಂತರ ಫೋಟೊಗಳನ್ನು ತೆರವುಗೊಳಿಸಿದರೂ ಆರ್.ಎಸ್.ಎಸ್ ಕಾರ್ಯಕರ್ತರು ಪ್ರಾರ್ಥನೆ ಮಾಡುತ್ತೇವೆಂದು ಪಟ್ಟು ಹಿಡಿದಿದ್ದಾರೆ. ರಕ್ಷಾ ಬಂಧನ ಬೇರೆ ದಿನ ಬರುತ್ತದೆಯೇ ಎಂದರು. ಆಗ ಕೆರಳಿದ ದಲಿತ ಸಂಘಟನೆಯ ಕಾರ್ಯಕರ್ತರು ಸಂವಿಧಾನಕ್ಕೆ, ಡಾ.ಅಂಬೇಡ್ಕರ್ ರವರಿಗೆ ಜೈಕಾರಗಳನ್ನು ಮೊಳಗಿಸಿದರು.

ಪೊಲೀಸ್ ಮಧ್ಯಪ್ರವೇಶಿಸಿ ನಿಮ್ಮ ಖಾಸಗಿ ಸ್ಥಳಗಳಲ್ಲಿ ಏನಾದರೂ ಮಾಡಿಕೊಳ್ಳಿ ಇಲ್ಲಿ ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲದೇ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಆಗಿ ಹೇಳಿದರು. ನಂತರ ದಲಿತ ಸಂಘಟನೆಯ ಕಾರ್ಯಕರ್ತರು ರಾಷ್ಟ್ರಧ್ವಜಕ್ಕೆ ಬೆಲೆ ಕೊಡದೇ ಕೇಸರಿ ಧ್ವಜ ಹಾರಿಸುವವರು ದೇಶದ್ರೋಹಿಗಳಲ್ಲವೇ? ಎಂದು ಪ್ರಶ್ನಿಸಿದರು. ನಂತರ ಕೇಸರಿ ಧ್ವಜವನ್ನು ತೆರವುಗೊಳಿಸಲಾಯಿತು ಮತ್ತು ಪೊಲೀಸರು ಅಲ್ಲಿದ್ದವರನ್ನು ಹೊರಗೆ ಕಳಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. Not only in that field, RSS hoisted Bhagwadhwaj in lakhs of fields yesterday. Every year RSS celebrates Raksha Bandhan festival, which is a festival of brotherhood. It hoists Bhagwadhwaj and garlands the photos if Dr.Hedgewar and Guruji Golwalkar, ties rakhi to all those present and concludes by singing prarthana. This year the raksha bandhan coincided with independence day. It was also upakarma for some section of society. You can not accuse them that, you are celebrating upakarma instead of independence day. Private organizations and sections of society have different occasions which can coincide with national festivals. You should not find fault in everything. As long as you are not forced to participate in these, there is nothing wrong. If they commit anti-national activities or commit crimes or violence (by sacrificing thousands of goats or murdering cows, etc), then it can be objectionable and police should take action.
    What happened in Nanjungud was a program to unite all sections of society. It is a festival of brotherhood. You could have also participated in the act of uniting the society.

  2. First, know what RSS really mean. It doesn’t not make violence and will not support casteism. It’s the truthful volunteer organization. They are celebrating their fest from decades, Raksha Bandhan is one of the main fest of India. They respect only truthful people. They know the contribution of Dr. Ambedkar, but those dalit sangatan and this news article publishing people don’t know the true value of it. Actually, this dalit sangatan is creating casteism not RSS. RSS always aims to make strong unity in India. UNDERSTAND!

  3. Ee lekhanadalli bharatada bagge adesto ninja bhakti bhava kochhikolluttiddiya! Ade reeti bharatada samskruti viruddha matanadidavara paravagi ninja blog open madidiya Andre neenestu nirlajji manushya entha chanchala manasssinava , entha chanchala bhuddi anta illi arthavagutte. Ninja kelsa aagabekadre entha keelumattakke ilitiya Andre nachike annode ilva? Nachike annodu ninnantha patrikodhyamarige barabeku? Yava journalist ninja thara bhikshe bedilla, eethara noo bhikshe bedabahudu antha jagattige torisikotta moadala mahaneeya neenu. Patrikodhyama ilakkhege apamana madiro nimge beleyalu prothsahisa beka? Neenu Gouriya hage deshadrohi aagu

  4. ಅಯ್ಯೋ ಮೂರ್ಖರೇ ನಡೆದ ಘಟನೆಯನ್ನು ನಿಮಗೆ ಬೇಕಾದ ಹಾಗೆ ತಿರುಚಿ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಾ ನಿಮ್ಮ ಪುಟದ ಹೆಸರಿಗೆ ನೀವೇ ಮಸಿ ಬಳಿಯುತ್ತಿದ್ದಿರಿ. ಭಗವಾ ದ್ವಜವನ್ನು ನೆಟ್ಟು ಹಬ್ಬಗಳನ್ನು , ಪ್ರಾರ್ಥನೆಗಳನ್ನು ಆಚರಿಸುವುದು RSS ಸಂಪ್ರದಾಯ. ಆ ಮೈದಾನದಲ್ಲಿದ್ದ ಭಾರತದ ದ್ವಜಕ್ಕಿಂತ ಕೆಳಗೆ ಭಗವಾ ದ್ವಜ ಇಟ್ಟಿರುವುದು RSS ದೇಶಭಕ್ತಿಯನ್ನು ತೋರಿಸುತ್ತದೆ. ನಿಮ್ಮಿಂದ RSS ರಾಷ್ಟ್ರಭಕ್ತಿಯನ್ನು ಕಲಿಯಬೇಕಿಲ್ಲ. ಸುಳ್ಳು ಸುದ್ದಿಯನ್ನು ಬಿತ್ತರಿಸಿದರೆ ನಿಮ್ಮ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ ಎಚ್ಚರ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...