Homeಮುಖಪುಟಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ, ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವು “ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ” ಎಂದು ಕೊಂಡಾಡಿದ್ದಾರೆ.

“ಸಂಘದ ಶತಮಾನೋತ್ಸವ ವರ್ಷದಂತಹ ಅದ್ಬುತ ಸಂದರ್ಭವನ್ನು ವೀಕ್ಷಿಸುವ ಅವಕಾಶ ನಮಗೆ ದೊರೆತಿರುವುದು ನಮ್ಮ ಪೀಳಿಗೆಯ ಸ್ವಯಂಸೇವಕರ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಸಮಾಜದ ವಿವಿಧ ವರ್ಗಗಳೊಂದಿಗೆ ಕೆಲಸ ಮಾಡಿದೆ. ಆದರೆ, ಅದರ ವಿವಿಧ ವಿಭಾಗಗಳ ನಡುವೆ ಯಾವುದೇ ಸಂಘರ್ಷ ಉಂಟಾಗಿಲ್ಲ. ಏಕೆಂದರೆ, ಅವರೆಲ್ಲರೂ ‘ರಾಷ್ಟ್ರ ಮೊದಲು’ ಎಂಬ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿತ್ತು. ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

1942ರಲ್ಲಿ ಮಹಾರಾಷ್ಟ್ರದ ಚಿಮೂರ್‌ನಲ್ಲಿ ನಡೆದ ಆಂದೋಲನದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬ್ರಿಟಿಷರ ಕೈಯಲ್ಲಿ ನರಳಿದ್ದರು. ಸ್ವಾತಂತ್ರ್ಯದ ನಂತರ, ಆರ್‌ಎಸ್‌ಎಸ್ ಹೈದರಾಬಾದ್‌ನ ನಿಜಾಮರ ಕೈಯಲ್ಲಿ ನರಳಿತ್ತು. ಗೋವಾ, ದಾದ್ರಾ ಮತ್ತು ನಗರ ಹವೇಲಿಯ ಸ್ವಾತಂತ್ರ್ಯದ ಸಮಯದಲ್ಲಿ ಆರ್‌ಎಸ್‌ಎಸ್ ಕೂಡ ತ್ಯಾಗ ಮಾಡಿತ್ತು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಅದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪಿತೂರಿಗಳನ್ನು ರೂಪಿಸಲಾಗಿದೆ. ನಿಷೇಧಗಳು ಮತ್ತು ಪಿತೂರಿಗಳನ್ನು ಎದುರಿಸುತ್ತಿದ್ದರೂ ಕೂಡ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಎಂದಿಗೂ ಕಹಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಮಹಾತ್ಮ ಗಾಂಧಿಯವರ ಹತ್ಯೆ ಬಳಿಕ, 1975 ರಿಂದ 1977 ರವರೆಗಿನ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಹೀಗೆ ಆರ್‌ಎಸ್‌ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ನೆನಪಿಗೆ ಮೋದಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಿದ್ದಾರೆ.

ಆರೆಸ್ಸೆಸ್ ದೇಶವನ್ನು ವಿಭಜಿಸುತ್ತಿದೆ: ಕಾಂಗ್ರೆಸ್

ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ’ ಎಂದು ಹೇಳಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅದರ ನಾಯಕರು ಜೈಲಿಗೆ ಹೋಗಿದ್ದರು ಎಂಬ ಹೇಳಿಕೆ ಸುಳ್ಳು ಎಂದಿದೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ ಎಂದು ಕಾಂಗ್ರೆಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...