Homeಮುಖಪುಟಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ, ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವು “ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ” ಎಂದು ಕೊಂಡಾಡಿದ್ದಾರೆ.

“ಸಂಘದ ಶತಮಾನೋತ್ಸವ ವರ್ಷದಂತಹ ಅದ್ಬುತ ಸಂದರ್ಭವನ್ನು ವೀಕ್ಷಿಸುವ ಅವಕಾಶ ನಮಗೆ ದೊರೆತಿರುವುದು ನಮ್ಮ ಪೀಳಿಗೆಯ ಸ್ವಯಂಸೇವಕರ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಸಮಾಜದ ವಿವಿಧ ವರ್ಗಗಳೊಂದಿಗೆ ಕೆಲಸ ಮಾಡಿದೆ. ಆದರೆ, ಅದರ ವಿವಿಧ ವಿಭಾಗಗಳ ನಡುವೆ ಯಾವುದೇ ಸಂಘರ್ಷ ಉಂಟಾಗಿಲ್ಲ. ಏಕೆಂದರೆ, ಅವರೆಲ್ಲರೂ ‘ರಾಷ್ಟ್ರ ಮೊದಲು’ ಎಂಬ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿತ್ತು. ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

1942ರಲ್ಲಿ ಮಹಾರಾಷ್ಟ್ರದ ಚಿಮೂರ್‌ನಲ್ಲಿ ನಡೆದ ಆಂದೋಲನದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬ್ರಿಟಿಷರ ಕೈಯಲ್ಲಿ ನರಳಿದ್ದರು. ಸ್ವಾತಂತ್ರ್ಯದ ನಂತರ, ಆರ್‌ಎಸ್‌ಎಸ್ ಹೈದರಾಬಾದ್‌ನ ನಿಜಾಮರ ಕೈಯಲ್ಲಿ ನರಳಿತ್ತು. ಗೋವಾ, ದಾದ್ರಾ ಮತ್ತು ನಗರ ಹವೇಲಿಯ ಸ್ವಾತಂತ್ರ್ಯದ ಸಮಯದಲ್ಲಿ ಆರ್‌ಎಸ್‌ಎಸ್ ಕೂಡ ತ್ಯಾಗ ಮಾಡಿತ್ತು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಅದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪಿತೂರಿಗಳನ್ನು ರೂಪಿಸಲಾಗಿದೆ. ನಿಷೇಧಗಳು ಮತ್ತು ಪಿತೂರಿಗಳನ್ನು ಎದುರಿಸುತ್ತಿದ್ದರೂ ಕೂಡ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಎಂದಿಗೂ ಕಹಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಮಹಾತ್ಮ ಗಾಂಧಿಯವರ ಹತ್ಯೆ ಬಳಿಕ, 1975 ರಿಂದ 1977 ರವರೆಗಿನ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಹೀಗೆ ಆರ್‌ಎಸ್‌ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ನೆನಪಿಗೆ ಮೋದಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಿದ್ದಾರೆ.

ಆರೆಸ್ಸೆಸ್ ದೇಶವನ್ನು ವಿಭಜಿಸುತ್ತಿದೆ: ಕಾಂಗ್ರೆಸ್

ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ’ ಎಂದು ಹೇಳಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅದರ ನಾಯಕರು ಜೈಲಿಗೆ ಹೋಗಿದ್ದರು ಎಂಬ ಹೇಳಿಕೆ ಸುಳ್ಳು ಎಂದಿದೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ ಎಂದು ಕಾಂಗ್ರೆಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....