Homeಮುಖಪುಟಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ, ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವು “ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ” ಎಂದು ಕೊಂಡಾಡಿದ್ದಾರೆ.

“ಸಂಘದ ಶತಮಾನೋತ್ಸವ ವರ್ಷದಂತಹ ಅದ್ಬುತ ಸಂದರ್ಭವನ್ನು ವೀಕ್ಷಿಸುವ ಅವಕಾಶ ನಮಗೆ ದೊರೆತಿರುವುದು ನಮ್ಮ ಪೀಳಿಗೆಯ ಸ್ವಯಂಸೇವಕರ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಸಮಾಜದ ವಿವಿಧ ವರ್ಗಗಳೊಂದಿಗೆ ಕೆಲಸ ಮಾಡಿದೆ. ಆದರೆ, ಅದರ ವಿವಿಧ ವಿಭಾಗಗಳ ನಡುವೆ ಯಾವುದೇ ಸಂಘರ್ಷ ಉಂಟಾಗಿಲ್ಲ. ಏಕೆಂದರೆ, ಅವರೆಲ್ಲರೂ ‘ರಾಷ್ಟ್ರ ಮೊದಲು’ ಎಂಬ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿತ್ತು. ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

1942ರಲ್ಲಿ ಮಹಾರಾಷ್ಟ್ರದ ಚಿಮೂರ್‌ನಲ್ಲಿ ನಡೆದ ಆಂದೋಲನದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬ್ರಿಟಿಷರ ಕೈಯಲ್ಲಿ ನರಳಿದ್ದರು. ಸ್ವಾತಂತ್ರ್ಯದ ನಂತರ, ಆರ್‌ಎಸ್‌ಎಸ್ ಹೈದರಾಬಾದ್‌ನ ನಿಜಾಮರ ಕೈಯಲ್ಲಿ ನರಳಿತ್ತು. ಗೋವಾ, ದಾದ್ರಾ ಮತ್ತು ನಗರ ಹವೇಲಿಯ ಸ್ವಾತಂತ್ರ್ಯದ ಸಮಯದಲ್ಲಿ ಆರ್‌ಎಸ್‌ಎಸ್ ಕೂಡ ತ್ಯಾಗ ಮಾಡಿತ್ತು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಅದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪಿತೂರಿಗಳನ್ನು ರೂಪಿಸಲಾಗಿದೆ. ನಿಷೇಧಗಳು ಮತ್ತು ಪಿತೂರಿಗಳನ್ನು ಎದುರಿಸುತ್ತಿದ್ದರೂ ಕೂಡ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಎಂದಿಗೂ ಕಹಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಮಹಾತ್ಮ ಗಾಂಧಿಯವರ ಹತ್ಯೆ ಬಳಿಕ, 1975 ರಿಂದ 1977 ರವರೆಗಿನ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಹೀಗೆ ಆರ್‌ಎಸ್‌ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ನೆನಪಿಗೆ ಮೋದಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಿದ್ದಾರೆ.

ಆರೆಸ್ಸೆಸ್ ದೇಶವನ್ನು ವಿಭಜಿಸುತ್ತಿದೆ: ಕಾಂಗ್ರೆಸ್

ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ’ ಎಂದು ಹೇಳಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅದರ ನಾಯಕರು ಜೈಲಿಗೆ ಹೋಗಿದ್ದರು ಎಂಬ ಹೇಳಿಕೆ ಸುಳ್ಳು ಎಂದಿದೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ ಎಂದು ಕಾಂಗ್ರೆಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....