Homeಮುಖಪುಟಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ, ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವು “ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ” ಎಂದು ಕೊಂಡಾಡಿದ್ದಾರೆ.

“ಸಂಘದ ಶತಮಾನೋತ್ಸವ ವರ್ಷದಂತಹ ಅದ್ಬುತ ಸಂದರ್ಭವನ್ನು ವೀಕ್ಷಿಸುವ ಅವಕಾಶ ನಮಗೆ ದೊರೆತಿರುವುದು ನಮ್ಮ ಪೀಳಿಗೆಯ ಸ್ವಯಂಸೇವಕರ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಸಮಾಜದ ವಿವಿಧ ವರ್ಗಗಳೊಂದಿಗೆ ಕೆಲಸ ಮಾಡಿದೆ. ಆದರೆ, ಅದರ ವಿವಿಧ ವಿಭಾಗಗಳ ನಡುವೆ ಯಾವುದೇ ಸಂಘರ್ಷ ಉಂಟಾಗಿಲ್ಲ. ಏಕೆಂದರೆ, ಅವರೆಲ್ಲರೂ ‘ರಾಷ್ಟ್ರ ಮೊದಲು’ ಎಂಬ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿತ್ತು. ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

1942ರಲ್ಲಿ ಮಹಾರಾಷ್ಟ್ರದ ಚಿಮೂರ್‌ನಲ್ಲಿ ನಡೆದ ಆಂದೋಲನದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬ್ರಿಟಿಷರ ಕೈಯಲ್ಲಿ ನರಳಿದ್ದರು. ಸ್ವಾತಂತ್ರ್ಯದ ನಂತರ, ಆರ್‌ಎಸ್‌ಎಸ್ ಹೈದರಾಬಾದ್‌ನ ನಿಜಾಮರ ಕೈಯಲ್ಲಿ ನರಳಿತ್ತು. ಗೋವಾ, ದಾದ್ರಾ ಮತ್ತು ನಗರ ಹವೇಲಿಯ ಸ್ವಾತಂತ್ರ್ಯದ ಸಮಯದಲ್ಲಿ ಆರ್‌ಎಸ್‌ಎಸ್ ಕೂಡ ತ್ಯಾಗ ಮಾಡಿತ್ತು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಅದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪಿತೂರಿಗಳನ್ನು ರೂಪಿಸಲಾಗಿದೆ. ನಿಷೇಧಗಳು ಮತ್ತು ಪಿತೂರಿಗಳನ್ನು ಎದುರಿಸುತ್ತಿದ್ದರೂ ಕೂಡ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಎಂದಿಗೂ ಕಹಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಮಹಾತ್ಮ ಗಾಂಧಿಯವರ ಹತ್ಯೆ ಬಳಿಕ, 1975 ರಿಂದ 1977 ರವರೆಗಿನ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಹೀಗೆ ಆರ್‌ಎಸ್‌ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ನೆನಪಿಗೆ ಮೋದಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಿದ್ದಾರೆ.

ಆರೆಸ್ಸೆಸ್ ದೇಶವನ್ನು ವಿಭಜಿಸುತ್ತಿದೆ: ಕಾಂಗ್ರೆಸ್

ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ’ ಎಂದು ಹೇಳಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅದರ ನಾಯಕರು ಜೈಲಿಗೆ ಹೋಗಿದ್ದರು ಎಂಬ ಹೇಳಿಕೆ ಸುಳ್ಳು ಎಂದಿದೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ ಎಂದು ಕಾಂಗ್ರೆಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...