Homeಮುಖಪುಟಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ, ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವು “ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ” ಎಂದು ಕೊಂಡಾಡಿದ್ದಾರೆ.

“ಸಂಘದ ಶತಮಾನೋತ್ಸವ ವರ್ಷದಂತಹ ಅದ್ಬುತ ಸಂದರ್ಭವನ್ನು ವೀಕ್ಷಿಸುವ ಅವಕಾಶ ನಮಗೆ ದೊರೆತಿರುವುದು ನಮ್ಮ ಪೀಳಿಗೆಯ ಸ್ವಯಂಸೇವಕರ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಸಮಾಜದ ವಿವಿಧ ವರ್ಗಗಳೊಂದಿಗೆ ಕೆಲಸ ಮಾಡಿದೆ. ಆದರೆ, ಅದರ ವಿವಿಧ ವಿಭಾಗಗಳ ನಡುವೆ ಯಾವುದೇ ಸಂಘರ್ಷ ಉಂಟಾಗಿಲ್ಲ. ಏಕೆಂದರೆ, ಅವರೆಲ್ಲರೂ ‘ರಾಷ್ಟ್ರ ಮೊದಲು’ ಎಂಬ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿತ್ತು. ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

1942ರಲ್ಲಿ ಮಹಾರಾಷ್ಟ್ರದ ಚಿಮೂರ್‌ನಲ್ಲಿ ನಡೆದ ಆಂದೋಲನದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬ್ರಿಟಿಷರ ಕೈಯಲ್ಲಿ ನರಳಿದ್ದರು. ಸ್ವಾತಂತ್ರ್ಯದ ನಂತರ, ಆರ್‌ಎಸ್‌ಎಸ್ ಹೈದರಾಬಾದ್‌ನ ನಿಜಾಮರ ಕೈಯಲ್ಲಿ ನರಳಿತ್ತು. ಗೋವಾ, ದಾದ್ರಾ ಮತ್ತು ನಗರ ಹವೇಲಿಯ ಸ್ವಾತಂತ್ರ್ಯದ ಸಮಯದಲ್ಲಿ ಆರ್‌ಎಸ್‌ಎಸ್ ಕೂಡ ತ್ಯಾಗ ಮಾಡಿತ್ತು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಅದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪಿತೂರಿಗಳನ್ನು ರೂಪಿಸಲಾಗಿದೆ. ನಿಷೇಧಗಳು ಮತ್ತು ಪಿತೂರಿಗಳನ್ನು ಎದುರಿಸುತ್ತಿದ್ದರೂ ಕೂಡ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಎಂದಿಗೂ ಕಹಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಮಹಾತ್ಮ ಗಾಂಧಿಯವರ ಹತ್ಯೆ ಬಳಿಕ, 1975 ರಿಂದ 1977 ರವರೆಗಿನ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಹೀಗೆ ಆರ್‌ಎಸ್‌ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ನೆನಪಿಗೆ ಮೋದಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಿದ್ದಾರೆ.

ಆರೆಸ್ಸೆಸ್ ದೇಶವನ್ನು ವಿಭಜಿಸುತ್ತಿದೆ: ಕಾಂಗ್ರೆಸ್

ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ’ ಎಂದು ಹೇಳಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅದರ ನಾಯಕರು ಜೈಲಿಗೆ ಹೋಗಿದ್ದರು ಎಂಬ ಹೇಳಿಕೆ ಸುಳ್ಳು ಎಂದಿದೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ ಎಂದು ಕಾಂಗ್ರೆಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...