Homeಮುಖಪುಟಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! - ರಾಹುಲ್ ಗಾಂಧಿ

ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

"ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನ ಮಂತ್ರಿಯ ವಿರುದ್ಧ ಎದ್ದುನಿಲ್ಲುವವರಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ಅದು RSS‌ ಮುಖ್ಯಸ್ಥರಾದ ಮೋಹನ್ ಭಾಗವತ್ ಆದರೂ ಸರಿಯೆ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗಾಗಿ ಹಣ ಸಂಪಾದಿಸುತ್ತಿದ್ದಾರೆ. ಅವರ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ ಮೋಹನ್ ಭಾಗವತ್ ಆವರೇ ಆಗಿದ್ದರೂ ಸಹ ಅವರನ್ನೂ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

“ಭಾರತದಲ್ಲಿ ಯಾವುದೇ ಪ್ರಜಾಪ್ರಭುತ್ವ ಇಲ್ಲ. ನಿಮ್ಮಲ್ಲಿ ಕೆಲವರಿಗೆ ಅದು ಇದೆ ಎನಿಸಿದರೆ, ಅದು ನಿಮ್ಮ ಕಲ್ಪನೆಯಷ್ಟೆ”

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳನ್ನು ಕೊನೆಗೊಳಿಸುವ ಸಲುವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯಪ್ರವೇಸಿಸುವಂತೆ ಒತ್ತಾಯಿಸಲು ಕಾಂಗ್ರೆಸ್ ಕಾರ್ಯಕರ್ತರ ನಿಯೋಗವನ್ನು ಕರೆದುಕೊಂಡು ರಾಹುಲ್ ಗಾಂಧಿ ಹೊರಟಿದ್ದರು. ಈ ಸಂದರ್ಭದಲ್ಲಿ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದು ಹಲವು ಮುಖಂಡರೂ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.

ರಾಷ್ಟ್ರಪತಿಗಳ ಭೇಟಿಯ ನಂತರ ಮಾತನಾಡಿದ ರಾಹುಲ್ ಗಾಂಧಿ, “ಈ ಕಾನೂನುಗಳು ಲಕ್ಷಾಂತರ ರೈತರ ಜೀವನೋಪಾಯವನ್ನು ಕಸಿದುಕೊಳ್ಳುತ್ತವೆ. ಜೊತೆಗೆ ನಾಲ್ಕು ಅಥವಾ ಐದು ಉದ್ಯಮಿಗಳಿಗೆ ಅನುಕೂಲಕರವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ” ಎಂದು ಹೇಳಿದರು.

ಕಾಂಗ್ರೆಸ್‌ನ ಮೂವರು ಮುಖಂಡರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುವ ಅವಕಾಶ ದೊರಕಿತ್ತು. ಈ ವೇಳೆ ಕೃಷಿ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಎರಡು ಕೋಟಿ ಹಸ್ತಾಕ್ಷರವಿರುವ ಮನವಿ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಿರುವ ರಾಹುಲ್ ಗಾಂಧಿ, ಈ ಕೃಷಿ ಕಾಯ್ದೆಗಳು ರೈತ ವಿರೋಧಿ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಗೌರಿ ಕಾರ್ನರ್: ನಮ್ಮನ್ನೆಲ್ಲ ತಿದ್ದಿ ಗೆಳೆಯರಂತೆ ನೋಡಿಕೊಳ್ಳುತ್ತಿದ್ದರು…

“ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ” ಎಂದು ಕಿಡಿ ಕಾರಿದರು.

ಈ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರು ಮನೆಗೆ ಹಿಂದಿರುಗುವುದಿಲ್ಲ ಎಂದು ನಾನು ಪ್ರಧಾನಿಗೆ ಹೇಳಲು ಬಯಸುತ್ತೇನೆ. ಸರ್ಕಾರವು ಸಂಸತ್ತಿನ ಜಂಟಿ ಅಧಿವೇಶನವನ್ನು ಕರೆದು ಈ ಕಾಯ್ದೆಗಳನ್ನು ಹಿಂಪಡೆಯಬೇಕು. ವಿರೋಧ ಪಕ್ಷವು ರೈತರಿಗೆ ಸಾಥ್ ನೀಡಲಿದೆ ಎಂದು ಹೇಳಿದರು.


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...