Homeಮುಖಪುಟಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! - ರಾಹುಲ್ ಗಾಂಧಿ

ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

"ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನ ಮಂತ್ರಿಯ ವಿರುದ್ಧ ಎದ್ದುನಿಲ್ಲುವವರಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ಅದು RSS‌ ಮುಖ್ಯಸ್ಥರಾದ ಮೋಹನ್ ಭಾಗವತ್ ಆದರೂ ಸರಿಯೆ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗಾಗಿ ಹಣ ಸಂಪಾದಿಸುತ್ತಿದ್ದಾರೆ. ಅವರ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ ಮೋಹನ್ ಭಾಗವತ್ ಆವರೇ ಆಗಿದ್ದರೂ ಸಹ ಅವರನ್ನೂ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

“ಭಾರತದಲ್ಲಿ ಯಾವುದೇ ಪ್ರಜಾಪ್ರಭುತ್ವ ಇಲ್ಲ. ನಿಮ್ಮಲ್ಲಿ ಕೆಲವರಿಗೆ ಅದು ಇದೆ ಎನಿಸಿದರೆ, ಅದು ನಿಮ್ಮ ಕಲ್ಪನೆಯಷ್ಟೆ”

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳನ್ನು ಕೊನೆಗೊಳಿಸುವ ಸಲುವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯಪ್ರವೇಸಿಸುವಂತೆ ಒತ್ತಾಯಿಸಲು ಕಾಂಗ್ರೆಸ್ ಕಾರ್ಯಕರ್ತರ ನಿಯೋಗವನ್ನು ಕರೆದುಕೊಂಡು ರಾಹುಲ್ ಗಾಂಧಿ ಹೊರಟಿದ್ದರು. ಈ ಸಂದರ್ಭದಲ್ಲಿ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದು ಹಲವು ಮುಖಂಡರೂ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.

ರಾಷ್ಟ್ರಪತಿಗಳ ಭೇಟಿಯ ನಂತರ ಮಾತನಾಡಿದ ರಾಹುಲ್ ಗಾಂಧಿ, “ಈ ಕಾನೂನುಗಳು ಲಕ್ಷಾಂತರ ರೈತರ ಜೀವನೋಪಾಯವನ್ನು ಕಸಿದುಕೊಳ್ಳುತ್ತವೆ. ಜೊತೆಗೆ ನಾಲ್ಕು ಅಥವಾ ಐದು ಉದ್ಯಮಿಗಳಿಗೆ ಅನುಕೂಲಕರವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ” ಎಂದು ಹೇಳಿದರು.

ಕಾಂಗ್ರೆಸ್‌ನ ಮೂವರು ಮುಖಂಡರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುವ ಅವಕಾಶ ದೊರಕಿತ್ತು. ಈ ವೇಳೆ ಕೃಷಿ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಎರಡು ಕೋಟಿ ಹಸ್ತಾಕ್ಷರವಿರುವ ಮನವಿ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಿರುವ ರಾಹುಲ್ ಗಾಂಧಿ, ಈ ಕೃಷಿ ಕಾಯ್ದೆಗಳು ರೈತ ವಿರೋಧಿ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಗೌರಿ ಕಾರ್ನರ್: ನಮ್ಮನ್ನೆಲ್ಲ ತಿದ್ದಿ ಗೆಳೆಯರಂತೆ ನೋಡಿಕೊಳ್ಳುತ್ತಿದ್ದರು…

“ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ” ಎಂದು ಕಿಡಿ ಕಾರಿದರು.

ಈ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರು ಮನೆಗೆ ಹಿಂದಿರುಗುವುದಿಲ್ಲ ಎಂದು ನಾನು ಪ್ರಧಾನಿಗೆ ಹೇಳಲು ಬಯಸುತ್ತೇನೆ. ಸರ್ಕಾರವು ಸಂಸತ್ತಿನ ಜಂಟಿ ಅಧಿವೇಶನವನ್ನು ಕರೆದು ಈ ಕಾಯ್ದೆಗಳನ್ನು ಹಿಂಪಡೆಯಬೇಕು. ವಿರೋಧ ಪಕ್ಷವು ರೈತರಿಗೆ ಸಾಥ್ ನೀಡಲಿದೆ ಎಂದು ಹೇಳಿದರು.


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...