Homeಕರ್ನಾಟಕಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

- Advertisement -
- Advertisement -

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು.

ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿರುವುದರಿಂದ ಈ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಮುದ್ರೆ (ಸೀಲ್) ಹಾಕಲಾಗುವುದು 20 ರಿಂದ 40 ವರ್ಷದೊಳಗಿರುವವರಲ್ಲೂ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. 70 ವರ್ಷ ಮೇಲ್ಪಟ್ಟವರಲ್ಲಿ ಗಂಭೀರ ಪ್ರಕರಣಗಳು ಹೆಚ್ಚಾಗುತ್ತಿವೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದೆ. ಅಂತಹವರು ಹೊರಗಡೆ ಓಡಾಟ ಮಾಡಬಾರದೆಂಬ ಉದ್ದೇಶದಿಂದ ಅವರಿಗೆ ಮುದ್ರೆ ಹಾಕಲಾಗುತ್ತದೆ” ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿವೆ. ಬುಧವಾರ ಸುಮಾರು 1,400 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಾಲ್ಕು ತಿಂಗಳುಗಳಲ್ಲಿ ಮೊದಲ ಬಾರಿ ಇಷ್ಟೊಂದು ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ಉಲ್ಭಣವಾಗುವುದನ್ನು ನಿಯಂತ್ರಿಸಲು ಪಾಲಿಕೆ ಕ್ರಮವಹಿಸುತ್ತಿದೆ” ಎಂದು ಹೇಳಿದರು.

“ನಗರದ ಮಾರುಕಟ್ಟೆ, ಚಿತ್ರಮಂದಿರ, ಬಸ್ ನಿಲ್ದಾಣ, ರೈಲು ನಿಲ್ದಾಣ, ಮದುವೆ ಮಂಟಪ, ಧಾರ್ಮಿಕ ಸ್ಥಳ, ಶಾಲಾ-ಕಾಲೇಜು ಆವರಣ ಮುಂತಾದ ಹೆಚ್ಚು ಜನಸಂದಣಿ ಇರುವ ಕಡೆ ಮಾರ್ಷಲ್‌ಗಳು ಕೋವಿಡ್‌ ನಿಯಂತ್ರಣ ನಿಯಮ ಪಾಲನೆ ಬಗ್ಗೆ ನಿಗಾ ವಹಿಸಲಿದ್ದಾರೆ. ಕನಿಷ್ಠ 2 ಮೀ ಅಂತರ ಕಾಪಾಡದಿದ್ದರೆ, ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲಿದ್ದಾರೆ. ನಗರದಲ್ಲಿ ಯಾವುದಾದರು ಕಾರ್ಯಕ್ರಮಗಳಲ್ಲಿ, ಸಮಾರಂಭಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡದಿರುವುದು ಕಂಡುಬಂದರೆ ಆಯೋಜಕರನ್ನೂ ಹೊಣೆಗಾರರನ್ನಾಗಿಸಿ, ಅವರಿಗೂ ದಂಡ ವಿಧಿಸಲಾಗುವುದು. ಯಾವುದೇ ಕಾರ್ಯಕ್ರಮಗಳಲ್ಲಿ ಅಥವಾ ಸಮಾರಂಭಗಳಲ್ಲಿ ತೆರೆದ ಸಭಾಂಗಣದಲ್ಲಿ 500 ಮಂದಿ ಹಾಗೂ ಮುಚ್ಚಿದ ಸಭಾಂಗಣಗದಲ್ಲಿ 200 ಮಂದಿ ಮಾತ್ರ ಭಾಗವಹಿಸಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕಣಗಳು ಕ್ರಮೇಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರತಿ ವಾರ್ಡ್‌ಗೆ ತಲಾ ಒಂದು ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಸೋಂಕು ಪತ್ತೆ ಪ್ರಮಾಣ ನೋಡಿಕೊಂಡು ಅವಶ್ಯಕ್ಕನುಗುಣವಾಗಿ ಹೆಚ್ಚಿನ ಆಂಬ್ಯುಲೆನ್ಸ್ ನಿಯೋಜನೆ ಮಾಡಲು ಪಾಲಿಕೆ ಕ್ರಮವಹಿಸಲಿದೆ ಎಂದು ತಿಳಿಸಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಬುಧವಾರ 51,000 ಪರೀಕ್ಷೆಗಳನ್ನು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರ ಮೇಲೆ ದಂಡ ವಿಧಿಸಲು 216 ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...