Homeಕರ್ನಾಟಕಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

- Advertisement -
- Advertisement -

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು.

ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿರುವುದರಿಂದ ಈ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಮುದ್ರೆ (ಸೀಲ್) ಹಾಕಲಾಗುವುದು 20 ರಿಂದ 40 ವರ್ಷದೊಳಗಿರುವವರಲ್ಲೂ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. 70 ವರ್ಷ ಮೇಲ್ಪಟ್ಟವರಲ್ಲಿ ಗಂಭೀರ ಪ್ರಕರಣಗಳು ಹೆಚ್ಚಾಗುತ್ತಿವೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದೆ. ಅಂತಹವರು ಹೊರಗಡೆ ಓಡಾಟ ಮಾಡಬಾರದೆಂಬ ಉದ್ದೇಶದಿಂದ ಅವರಿಗೆ ಮುದ್ರೆ ಹಾಕಲಾಗುತ್ತದೆ” ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿವೆ. ಬುಧವಾರ ಸುಮಾರು 1,400 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಾಲ್ಕು ತಿಂಗಳುಗಳಲ್ಲಿ ಮೊದಲ ಬಾರಿ ಇಷ್ಟೊಂದು ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ಉಲ್ಭಣವಾಗುವುದನ್ನು ನಿಯಂತ್ರಿಸಲು ಪಾಲಿಕೆ ಕ್ರಮವಹಿಸುತ್ತಿದೆ” ಎಂದು ಹೇಳಿದರು.

“ನಗರದ ಮಾರುಕಟ್ಟೆ, ಚಿತ್ರಮಂದಿರ, ಬಸ್ ನಿಲ್ದಾಣ, ರೈಲು ನಿಲ್ದಾಣ, ಮದುವೆ ಮಂಟಪ, ಧಾರ್ಮಿಕ ಸ್ಥಳ, ಶಾಲಾ-ಕಾಲೇಜು ಆವರಣ ಮುಂತಾದ ಹೆಚ್ಚು ಜನಸಂದಣಿ ಇರುವ ಕಡೆ ಮಾರ್ಷಲ್‌ಗಳು ಕೋವಿಡ್‌ ನಿಯಂತ್ರಣ ನಿಯಮ ಪಾಲನೆ ಬಗ್ಗೆ ನಿಗಾ ವಹಿಸಲಿದ್ದಾರೆ. ಕನಿಷ್ಠ 2 ಮೀ ಅಂತರ ಕಾಪಾಡದಿದ್ದರೆ, ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲಿದ್ದಾರೆ. ನಗರದಲ್ಲಿ ಯಾವುದಾದರು ಕಾರ್ಯಕ್ರಮಗಳಲ್ಲಿ, ಸಮಾರಂಭಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡದಿರುವುದು ಕಂಡುಬಂದರೆ ಆಯೋಜಕರನ್ನೂ ಹೊಣೆಗಾರರನ್ನಾಗಿಸಿ, ಅವರಿಗೂ ದಂಡ ವಿಧಿಸಲಾಗುವುದು. ಯಾವುದೇ ಕಾರ್ಯಕ್ರಮಗಳಲ್ಲಿ ಅಥವಾ ಸಮಾರಂಭಗಳಲ್ಲಿ ತೆರೆದ ಸಭಾಂಗಣದಲ್ಲಿ 500 ಮಂದಿ ಹಾಗೂ ಮುಚ್ಚಿದ ಸಭಾಂಗಣಗದಲ್ಲಿ 200 ಮಂದಿ ಮಾತ್ರ ಭಾಗವಹಿಸಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕಣಗಳು ಕ್ರಮೇಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರತಿ ವಾರ್ಡ್‌ಗೆ ತಲಾ ಒಂದು ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಸೋಂಕು ಪತ್ತೆ ಪ್ರಮಾಣ ನೋಡಿಕೊಂಡು ಅವಶ್ಯಕ್ಕನುಗುಣವಾಗಿ ಹೆಚ್ಚಿನ ಆಂಬ್ಯುಲೆನ್ಸ್ ನಿಯೋಜನೆ ಮಾಡಲು ಪಾಲಿಕೆ ಕ್ರಮವಹಿಸಲಿದೆ ಎಂದು ತಿಳಿಸಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಬುಧವಾರ 51,000 ಪರೀಕ್ಷೆಗಳನ್ನು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರ ಮೇಲೆ ದಂಡ ವಿಧಿಸಲು 216 ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...