Homeಕರ್ನಾಟಕಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

- Advertisement -
- Advertisement -

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು.

ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿರುವುದರಿಂದ ಈ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಮುದ್ರೆ (ಸೀಲ್) ಹಾಕಲಾಗುವುದು 20 ರಿಂದ 40 ವರ್ಷದೊಳಗಿರುವವರಲ್ಲೂ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. 70 ವರ್ಷ ಮೇಲ್ಪಟ್ಟವರಲ್ಲಿ ಗಂಭೀರ ಪ್ರಕರಣಗಳು ಹೆಚ್ಚಾಗುತ್ತಿವೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದೆ. ಅಂತಹವರು ಹೊರಗಡೆ ಓಡಾಟ ಮಾಡಬಾರದೆಂಬ ಉದ್ದೇಶದಿಂದ ಅವರಿಗೆ ಮುದ್ರೆ ಹಾಕಲಾಗುತ್ತದೆ” ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿವೆ. ಬುಧವಾರ ಸುಮಾರು 1,400 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಾಲ್ಕು ತಿಂಗಳುಗಳಲ್ಲಿ ಮೊದಲ ಬಾರಿ ಇಷ್ಟೊಂದು ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ಉಲ್ಭಣವಾಗುವುದನ್ನು ನಿಯಂತ್ರಿಸಲು ಪಾಲಿಕೆ ಕ್ರಮವಹಿಸುತ್ತಿದೆ” ಎಂದು ಹೇಳಿದರು.

“ನಗರದ ಮಾರುಕಟ್ಟೆ, ಚಿತ್ರಮಂದಿರ, ಬಸ್ ನಿಲ್ದಾಣ, ರೈಲು ನಿಲ್ದಾಣ, ಮದುವೆ ಮಂಟಪ, ಧಾರ್ಮಿಕ ಸ್ಥಳ, ಶಾಲಾ-ಕಾಲೇಜು ಆವರಣ ಮುಂತಾದ ಹೆಚ್ಚು ಜನಸಂದಣಿ ಇರುವ ಕಡೆ ಮಾರ್ಷಲ್‌ಗಳು ಕೋವಿಡ್‌ ನಿಯಂತ್ರಣ ನಿಯಮ ಪಾಲನೆ ಬಗ್ಗೆ ನಿಗಾ ವಹಿಸಲಿದ್ದಾರೆ. ಕನಿಷ್ಠ 2 ಮೀ ಅಂತರ ಕಾಪಾಡದಿದ್ದರೆ, ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲಿದ್ದಾರೆ. ನಗರದಲ್ಲಿ ಯಾವುದಾದರು ಕಾರ್ಯಕ್ರಮಗಳಲ್ಲಿ, ಸಮಾರಂಭಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡದಿರುವುದು ಕಂಡುಬಂದರೆ ಆಯೋಜಕರನ್ನೂ ಹೊಣೆಗಾರರನ್ನಾಗಿಸಿ, ಅವರಿಗೂ ದಂಡ ವಿಧಿಸಲಾಗುವುದು. ಯಾವುದೇ ಕಾರ್ಯಕ್ರಮಗಳಲ್ಲಿ ಅಥವಾ ಸಮಾರಂಭಗಳಲ್ಲಿ ತೆರೆದ ಸಭಾಂಗಣದಲ್ಲಿ 500 ಮಂದಿ ಹಾಗೂ ಮುಚ್ಚಿದ ಸಭಾಂಗಣಗದಲ್ಲಿ 200 ಮಂದಿ ಮಾತ್ರ ಭಾಗವಹಿಸಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕಣಗಳು ಕ್ರಮೇಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರತಿ ವಾರ್ಡ್‌ಗೆ ತಲಾ ಒಂದು ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಸೋಂಕು ಪತ್ತೆ ಪ್ರಮಾಣ ನೋಡಿಕೊಂಡು ಅವಶ್ಯಕ್ಕನುಗುಣವಾಗಿ ಹೆಚ್ಚಿನ ಆಂಬ್ಯುಲೆನ್ಸ್ ನಿಯೋಜನೆ ಮಾಡಲು ಪಾಲಿಕೆ ಕ್ರಮವಹಿಸಲಿದೆ ಎಂದು ತಿಳಿಸಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಬುಧವಾರ 51,000 ಪರೀಕ್ಷೆಗಳನ್ನು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರ ಮೇಲೆ ದಂಡ ವಿಧಿಸಲು 216 ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...