Homeಕರ್ನಾಟಕಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ - 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ...

ಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ – 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ ನೋಟಿಸ್‌

- Advertisement -
- Advertisement -

ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ 2014-15 ರಲ್ಲಿ ಬಿಡುಗಡೆ ಮಾಡಲಾಗಿದ್ದ 1.87 ಕೋಟಿ ರೂಗಳ ಆರ್‌‌ಟಿಇ ಬಾಕಿ ಮರುಪಾವತಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಬ್ಲಾಕ್ ಶಿಕ್ಷಣ ಅಧಿಕಾರಿಗಳು (ಬಿಇಒ) ಸೇರಿದಂತೆ ಒಟ್ಟು 20 ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿ (ಸಿಪಿಐ) ನೋಟಿಸ್ ನೀಡಿದೆ.

“ಏಳು ದಿನಗಳಲ್ಲಿ ತಮ್ಮ ಉತ್ತರಗಳನ್ನು ನೀಡಲು ಬಿಇಒ ಗಳನ್ನು ಕೇಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ಬೆಂಗಳೂರಿನ ರಮೇಶ್‌ ಬೆಟ್ಟಯ್ಯ ಅವರು, ಆರ್‌ಟಿಇ ಬಾಕಿ ಮರುಪಾವತಿಗಾಗಿ ಬಿಡುಗಡೆ ಮಾಡಿದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಸಾರ್ವಜನಿಕ ಶಿಕ್ಷಣ ಆಯುಕ್ತರು ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದರು.

ಆರ್‌ಟಿಇ ಕೋಟಾ ಕಾಯ್ದೆಯಡಿ ಪ್ರವೇಶ ಪಡೆದ ಮಕ್ಕಳಿಂದ 2012-13 ರಿಂದ 2015-16 ರವರೆಗೆ ಹೆಚ್ಚುವರಿ ಶುಲ್ಕವನ್ನು ಪಡೆಯಲಾಗಿರುವುದನ್ನು ವಿಶೇಷವಾಗಿ ಉಲ್ಲೇಖಿಸಿ ನಿರ್ದೇಶಕರು ಆಯುಕ್ತರಿಗೆ ವರದಿಯನ್ನು ಸಲ್ಲಿಸಿದ್ದರು. ಆರ್‌ಟಿಇ ಬಾಕಿ ಮರುಪಾವತಿಗಾಗಿ ಹೆಚ್ಚುವರಿ ಪಾವತಿ ಪಡೆದಿರುವ ಬಗ್ಗೆ ಯಾವುದೇ ಅನುಸರಣೆ ವರದಿಯನ್ನು ಸಲ್ಲಿಸಲಾಗಿಲ್ಲ ಎಂದು ವರದಿ ಹೇಳಿದ್ದು, ಬಿಇಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ವರದಿಯು ಶಿಫಾರಸು ಮಾಡಿತ್ತು.

ಪ್ರಾಥಮಿಕ ಶಿಕ್ಷಣ ನಿರ್ದೇಶಕರ ವರದಿಯ ಆಧಾರದ ಮೇಲೆ ಜುಲೈ 6 ರಂದು 20 ಬಿಇಒಗಳಿಗೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಬಿಇಒಗಳು ನೋಟಿಸ್‌ಗೆ ಉತ್ತರಿಸಲು ವಿಫಲವಾದರೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಂಗಳೂರು ಮಂಗಳೂರು ದಕ್ಷಿಣ ಬಿಇಒ ರಾಜಲಕ್ಷ್ಮಿ ಕೆ., “ಬಿಇಒ ಕಚೇರಿಗೆ ನೋಟಿಸ್ ಬಂದಿದೆ. ಯಾವುದೆ ಹಣ ದುರುಪಯೋಗ ಆಗಿಲ್ಲ. ದಾಖಲೆಗಳನ್ನು ಪರಿಶೀಲನೆ ಮಾಡಿ ಶಿಕ್ಷಣ ಇಲಾಖೆಯ ಆಕ್ಷೇಪಕ್ಕೆ ಉತ್ತರ ಸಲ್ಲಿಸಲಿದ್ದೇವೆ” ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಬ್ಲಾಕ್‌-1, ಹರಪನಹಳ್ಳಿ, ಗದಗ ನಗರ, ಮೂಡಿಗೆರೆ, ಹನೂರು, ಕೊಳ್ಳೆಗಾಲ, ಹರಪ್ಪನಹಳ್ಳಿ, ಮಾಗಡಿ, ಮೈಸೂರು ಉತ್ತರ, ಮೈಸೂರು ದಕ್ಷಿಣ, ತುಮಕೂರು, ಗೌರಿಬಿದನೂರು, ಹಡಗಲಿ, ಗೌರಿಬಿದನೂರು, ಸಹಾಪುರ, ವಿಜಯಪುರ, ಮಂಗಳುರು ದಕ್ಷಿಣ, ಮೂಡಬಿದಿರೆ, ಪುತ್ತೂರು, ಸುಳ್ಯ ಒಟ್ಟು 20 ಬಿಇಒ ಕಚೇರಿಗೆ ಸಾರ್ವಜನಿಕ ಶಿಕ್ಷಣ ಆಯುಕ್ತರು ನೋಟಿಸ್ ನೀಡಿದ್ದು, 1.87 ಕೋಟಿ ರೂ. ಹಣಗಳ ಉಪಯೋಗದ ಬಗ್ಗೆ ಆಕ್ಷೇಪ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...