Homeಕರ್ನಾಟಕಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ - 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ...

ಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ – 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ ನೋಟಿಸ್‌

- Advertisement -
- Advertisement -

ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ 2014-15 ರಲ್ಲಿ ಬಿಡುಗಡೆ ಮಾಡಲಾಗಿದ್ದ 1.87 ಕೋಟಿ ರೂಗಳ ಆರ್‌‌ಟಿಇ ಬಾಕಿ ಮರುಪಾವತಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಬ್ಲಾಕ್ ಶಿಕ್ಷಣ ಅಧಿಕಾರಿಗಳು (ಬಿಇಒ) ಸೇರಿದಂತೆ ಒಟ್ಟು 20 ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿ (ಸಿಪಿಐ) ನೋಟಿಸ್ ನೀಡಿದೆ.

“ಏಳು ದಿನಗಳಲ್ಲಿ ತಮ್ಮ ಉತ್ತರಗಳನ್ನು ನೀಡಲು ಬಿಇಒ ಗಳನ್ನು ಕೇಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ಬೆಂಗಳೂರಿನ ರಮೇಶ್‌ ಬೆಟ್ಟಯ್ಯ ಅವರು, ಆರ್‌ಟಿಇ ಬಾಕಿ ಮರುಪಾವತಿಗಾಗಿ ಬಿಡುಗಡೆ ಮಾಡಿದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಸಾರ್ವಜನಿಕ ಶಿಕ್ಷಣ ಆಯುಕ್ತರು ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದರು.

ಆರ್‌ಟಿಇ ಕೋಟಾ ಕಾಯ್ದೆಯಡಿ ಪ್ರವೇಶ ಪಡೆದ ಮಕ್ಕಳಿಂದ 2012-13 ರಿಂದ 2015-16 ರವರೆಗೆ ಹೆಚ್ಚುವರಿ ಶುಲ್ಕವನ್ನು ಪಡೆಯಲಾಗಿರುವುದನ್ನು ವಿಶೇಷವಾಗಿ ಉಲ್ಲೇಖಿಸಿ ನಿರ್ದೇಶಕರು ಆಯುಕ್ತರಿಗೆ ವರದಿಯನ್ನು ಸಲ್ಲಿಸಿದ್ದರು. ಆರ್‌ಟಿಇ ಬಾಕಿ ಮರುಪಾವತಿಗಾಗಿ ಹೆಚ್ಚುವರಿ ಪಾವತಿ ಪಡೆದಿರುವ ಬಗ್ಗೆ ಯಾವುದೇ ಅನುಸರಣೆ ವರದಿಯನ್ನು ಸಲ್ಲಿಸಲಾಗಿಲ್ಲ ಎಂದು ವರದಿ ಹೇಳಿದ್ದು, ಬಿಇಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ವರದಿಯು ಶಿಫಾರಸು ಮಾಡಿತ್ತು.

ಪ್ರಾಥಮಿಕ ಶಿಕ್ಷಣ ನಿರ್ದೇಶಕರ ವರದಿಯ ಆಧಾರದ ಮೇಲೆ ಜುಲೈ 6 ರಂದು 20 ಬಿಇಒಗಳಿಗೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಬಿಇಒಗಳು ನೋಟಿಸ್‌ಗೆ ಉತ್ತರಿಸಲು ವಿಫಲವಾದರೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಂಗಳೂರು ಮಂಗಳೂರು ದಕ್ಷಿಣ ಬಿಇಒ ರಾಜಲಕ್ಷ್ಮಿ ಕೆ., “ಬಿಇಒ ಕಚೇರಿಗೆ ನೋಟಿಸ್ ಬಂದಿದೆ. ಯಾವುದೆ ಹಣ ದುರುಪಯೋಗ ಆಗಿಲ್ಲ. ದಾಖಲೆಗಳನ್ನು ಪರಿಶೀಲನೆ ಮಾಡಿ ಶಿಕ್ಷಣ ಇಲಾಖೆಯ ಆಕ್ಷೇಪಕ್ಕೆ ಉತ್ತರ ಸಲ್ಲಿಸಲಿದ್ದೇವೆ” ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಬ್ಲಾಕ್‌-1, ಹರಪನಹಳ್ಳಿ, ಗದಗ ನಗರ, ಮೂಡಿಗೆರೆ, ಹನೂರು, ಕೊಳ್ಳೆಗಾಲ, ಹರಪ್ಪನಹಳ್ಳಿ, ಮಾಗಡಿ, ಮೈಸೂರು ಉತ್ತರ, ಮೈಸೂರು ದಕ್ಷಿಣ, ತುಮಕೂರು, ಗೌರಿಬಿದನೂರು, ಹಡಗಲಿ, ಗೌರಿಬಿದನೂರು, ಸಹಾಪುರ, ವಿಜಯಪುರ, ಮಂಗಳುರು ದಕ್ಷಿಣ, ಮೂಡಬಿದಿರೆ, ಪುತ್ತೂರು, ಸುಳ್ಯ ಒಟ್ಟು 20 ಬಿಇಒ ಕಚೇರಿಗೆ ಸಾರ್ವಜನಿಕ ಶಿಕ್ಷಣ ಆಯುಕ್ತರು ನೋಟಿಸ್ ನೀಡಿದ್ದು, 1.87 ಕೋಟಿ ರೂ. ಹಣಗಳ ಉಪಯೋಗದ ಬಗ್ಗೆ ಆಕ್ಷೇಪ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...