Homeಮುಖಪುಟಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

- Advertisement -
- Advertisement -

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ (ಡಿಪಿಡಿಪಿ)ಯ ಸೆಕ್ಷನ್ 44 (3) ಅನ್ನು ರದ್ದುಗೊಳಿಸುವಂತೆ ಇಂಡಿಯಾ ಮೈತ್ರಿಕೂಟ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯನ್ನು ನಾಶಪಡಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆರ್‌ಟಿಐ ಕಾಯ್ದೆ

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿ ಪಕ್ಷಗಳ 120 ಕ್ಕೂ ಹೆಚ್ಚು ಸಂಸದರು ಈ ಸೆಕ್ಷನ್ ಅನ್ನು ರದ್ದುಗೊಳಿಸಲು ಜಂಟಿ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ್ದಾರೆ ಮತ್ತು ಅದನ್ನು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಂಎಂ ಅಬ್ದುಲ್ಲಾ (ಡಿಎಂಕೆ), ಪ್ರಿಯಾಂಕಾ ಚತುರ್ವೇದಿ (ಶಿವಸೇನೆ-ಯುಬಿಟಿ), ಜಾನ್ ಬ್ರಿಟ್ಟಾಸ್, (ಸಿಪಿಐ-ಎಂ), ಜಾವೇದ್ ಅಲಿ ಖಾನ್, (ಎಸ್‌ಪಿ) ಮತ್ತು ನವಲ್ ಕಿಶೋರ್ (ಆರ್‌ಜೆಡಿ) ಭಾಗವಹಿಸಿದ್ದರು.

ಡಿಪಿಡಿಪಿ ಕಾಯ್ದೆಯ ಸೆಕ್ಷನ್ 44 (3) ಅನ್ನು ನಾಗರಿಕ ಹಕ್ಕುಗಳ ಹೋರಾಟಗಾರರು ವಿರೋಧಿಸಿದ್ದು, ಇದು 2005 ರ ಆರ್‌ಟಿಐ ಕಾಯ್ದೆಯ ಸೆಕ್ಷನ್ 8 (1) (ಜೆ) ಅನ್ನು ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಗೊಗೊಯ್ ಹೇಳಿದ್ದಾರೆ.

ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯು ಯಾವುದೇ ಸಾರ್ವಜನಿಕ ಚಟುವಟಿಕೆ ಅಥವಾ ಹಿತಾಸಕ್ತಿಗೆ ಸಂಬಂಧಿಸದಿದ್ದರೆ ಅಥವಾ ಗೌಪ್ಯ ಮಾಹಿತಿ  ಆಗಿದ್ದರೆ ಅದನ್ನು ತಡೆಹಿಡಿಯಲು ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅವಕಾಶ ನೀಡುತ್ತದೆ. ಅದಾಗ್ಯೂ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಮೇಲ್ಮನವಿ ಪ್ರಾಧಿಕಾರವು ಈ ಮಾಹಿತಿಯು ಜನರ ಒಳಿತಿಗೆ ಉಪಯೋಗವಾಗುತ್ತದೆ ಎಂದು ನಿರ್ಧರಿಸಿ, ಅದನ್ನು ಸಾರ್ವಜನಿಕವಾಗುವಂತೆ ಮಾಡಬಹುದಾಗಿದೆ.

ಡಿಪಿಡಿಪಿ ಕಾಯ್ದೆಯ ಸೆಕ್ಷನ್ 44 (3) ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅನ್ನು ತಿದ್ದುಪಡಿ ಮಾಡುತ್ತದೆ. ಇದು ಸರ್ಕಾರಿ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿ ಅಥವಾ ಯಾವುದೇ ಇತರ ವಿನಾಯಿತಿಗಳನ್ನು ಪರಿಗಣಿಸದೆ “ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಮಾಹಿತಿಯನ್ನು” ತಡೆಹಿಡಿಯಲು ಅನುಮತಿ ನೀಡುತ್ತದೆ. ಹಾಗಾಗಿ ಸರ್ಕಾರಿ ಅಧಿಕಾರಿಗಳು ಅಥವಾ ರಾಜಕಾರಣಿಗಳ ಮಾಹಿತಿಯು ‘ವೈಯಕ್ತಿಕ ಮಾಹಿತಿ’ ಎಂಬ ಕಾರಣ ನೀಡಿ ಇನ್ನು ಮುಂದಕ್ಕೆ ಮಾಹಿತಿ ಕೇಳುವವರಿಗೆ ಲಭ್ಯವಾಗದಂತೆ ಮಾಡುವ ಅಪಾಯವಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...