Homeಚಳವಳಿಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

ಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

- Advertisement -
- Advertisement -

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) 2005 ರನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕೃತ್ಯಗಳ ವಿರುದ್ಧ ದೇಶದಾದ್ಯಂತ ನಾಗರಿಕರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್ ಕ್ಯಾಂಪೇನ್ ಫಾರ್ ಪೀಪಲ್ಸ್ ರೈಟ್ ಟು ಇನ್ಫರ್ಮೇಷನ್ (ಎನ್‌ಸಿಪಿಆರ್‌ಐ) ಸೇರಿದಂತೆ 30ಕ್ಕೂ ಅಧಿಕ ಸಂಘಟನೆಗಳು ಮಾರ್ಚ್ 21, 2025ರ ಶುಕ್ರವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಆರ್‌ಟಿಐ ಕಾಯ್ದೆಯನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆರ್‌ಟಿಐ ಕಾಯ್ದೆ

2023ರಲ್ಲಿ ಆರ್‌ಟಿಐ ಕಾಯ್ದೆಗೆ ತರಲಾದ ತಿದ್ದುಪಡಿಯು ಇನ್ನೂ ಜಾರಿಗೆ ಬಂದಿಲ್ಲವಾದರೂ, ಇದು ಸರ್ಕಾರಿ ಸಂಸ್ಥೆಗಳು ನೀಡಬೇಕಾದ ಮಾಹಿತಿಯ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(j) ಅಡಿಯಲ್ಲಿ, ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಅರ್ಜಿಗಳನ್ನು ಸರ್ಕಾರಿ ಸಂಸ್ಥೆಗಳು ತಿರಸ್ಕರಿಸಬಹುದು ಎಂದು ತಿಳಿಸಲಾಗಿದೆ. “ಈ ನಿಯಮವು ಮಾಹಿತಿ ನೀಡದಿರಲು ಸರ್ಕಾರಕ್ಕೆ ಸುಲಭ ದಾರಿಯಾಗಲಿದೆ” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕ ನಿಖಿಲ್ ದೇ ಹೇಳಿದ್ದಾರೆ. ಕೇಂದ್ರ ಸರ್ಕಾರವು ಈ ಆತಂಕಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳ ಪ್ರಕಾರ, ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ವೈಯಕ್ತಿಕ ಗೌಪ್ಯತೆ ಮೂಲಭೂತ ಹಕ್ಕಾಗಿದ್ದು, ಇದು ಆರ್‌ಟಿಐ ಕಾಯ್ದೆಯೊಂದಿಗೆ ಸಂಘರ್ಷಕ್ಕೊಳಗಾಗಿದೆ. ಆದರೆ, ಹೋರಾಟಗಾರರು ಈ ವಾದವನ್ನು ಒಪ್ಪದೆ, “ಕಾಯ್ದೆಯಲ್ಲಿ ವೈಯಕ್ತಿಕ ಮಾಹಿತಿಗೆ ಈಗಾಗಲೇ ರಕ್ಷಣೆ ಇದ್ದು, ಯಾವಾಗ ಬಹಿರಂಗಪಡಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಇದೆ” ಎಂದು ಮಾಜಿ ಕೇಂದ್ರ ಮಾಹಿತಿ ಆಯುಕ್ತ ಎಂ.ಎಂ. ಅನ್ಸಾರಿ ತಿಳಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಶೈಕ್ಷಣಿಕ ದಾಖಲೆಗಳು ಮತ್ತು ಪ್ರಮುಖ ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.

2023ರಲ್ಲಿ ಜಾರಿಗೊಂಡ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (ಡಿಪಿಡಿಪಿ) ಕಾಯ್ದೆಯ ಮೂಲಕ ಈ ತಿದ್ದುಪಡಿಯನ್ನು ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆದರೆ, ಡಿಪಿಡಿಪಿ ಕಾಯ್ದೆಗೆ ಸಂಬಂಧಿಸಿದ ಉಪ-ಕಾನೂನು ಜಾರಿಯಾಗದ ಕಾರಣ, ಈ ತಿದ್ದುಪಡಿ ಇನ್ನೂ ಜಾರಿಗೆ ಬಂದಿಲ್ಲ.

“2025ರ ಡಿಪಿಡಿಪಿ ನಿಯಮಗಳಲ್ಲಿ ಈ ತಿದ್ದುಪಡಿಯನ್ನು ಜಾರಿಗೊಳಿಸದಂತೆ ತಡೆಯಬೇಕು ಮತ್ತು ಸಂಸತ್ತು ಇದನ್ನು ರದ್ದುಗೊಳಿಸಬೇಕು” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕಿ ಅಂಜಲಿ ಭಾರದ್ವಾಜ್ ಒತ್ತಾಯಿಸಿದ್ದಾರೆ.

ಈ ತಿದ್ದುಪಡಿಯಿಂದ ಸಾಮಾಜಿಕ ಲೆಕ್ಕಪರಿಶೋಧನೆ ಕಾರ್ಯಗಳು ತೊಂದರೆಗೊಳಗಾಗಲಿವೆ ಎಂದು ಹೋರಾಟರಾರರು ಎಚ್ಚರಿಸಿದ್ದಾರೆ. ಉದಾಹರಣೆಗೆ, ಪಡಿತರ ವಿತರಣೆಯ ದಾಖಲೆಗಳನ್ನು ಪರಿಶೀಲಿಸಿ ಮನೆ ಮನೆಗೆ ಭೇಟಿ ನೀಡುವ ತಪಾಸಣೆಗಳು ಸಾಧ್ಯವಾಗದೇ ಹೋಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಆರ್‌ಟಿಐ ಕಾಯ್ದೆಯ ರಕ್ಷಣೆ ಎಂದರೆ ಪ್ರಜಾಪ್ರಭುತ್ವದ ರಕ್ಷಣೆ ಎಂದರ್ಥ” ಎಂದು ಕಾರ್ಯಕರ್ತರು ಒತ್ತಿ ಹೇಳಿದ್ದಾರೆ. ಆರ್‌ಟಿಐ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...