Homeಚಳವಳಿಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

ಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

- Advertisement -
- Advertisement -

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) 2005 ರನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕೃತ್ಯಗಳ ವಿರುದ್ಧ ದೇಶದಾದ್ಯಂತ ನಾಗರಿಕರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್ ಕ್ಯಾಂಪೇನ್ ಫಾರ್ ಪೀಪಲ್ಸ್ ರೈಟ್ ಟು ಇನ್ಫರ್ಮೇಷನ್ (ಎನ್‌ಸಿಪಿಆರ್‌ಐ) ಸೇರಿದಂತೆ 30ಕ್ಕೂ ಅಧಿಕ ಸಂಘಟನೆಗಳು ಮಾರ್ಚ್ 21, 2025ರ ಶುಕ್ರವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಆರ್‌ಟಿಐ ಕಾಯ್ದೆಯನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆರ್‌ಟಿಐ ಕಾಯ್ದೆ

2023ರಲ್ಲಿ ಆರ್‌ಟಿಐ ಕಾಯ್ದೆಗೆ ತರಲಾದ ತಿದ್ದುಪಡಿಯು ಇನ್ನೂ ಜಾರಿಗೆ ಬಂದಿಲ್ಲವಾದರೂ, ಇದು ಸರ್ಕಾರಿ ಸಂಸ್ಥೆಗಳು ನೀಡಬೇಕಾದ ಮಾಹಿತಿಯ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(j) ಅಡಿಯಲ್ಲಿ, ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಅರ್ಜಿಗಳನ್ನು ಸರ್ಕಾರಿ ಸಂಸ್ಥೆಗಳು ತಿರಸ್ಕರಿಸಬಹುದು ಎಂದು ತಿಳಿಸಲಾಗಿದೆ. “ಈ ನಿಯಮವು ಮಾಹಿತಿ ನೀಡದಿರಲು ಸರ್ಕಾರಕ್ಕೆ ಸುಲಭ ದಾರಿಯಾಗಲಿದೆ” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕ ನಿಖಿಲ್ ದೇ ಹೇಳಿದ್ದಾರೆ. ಕೇಂದ್ರ ಸರ್ಕಾರವು ಈ ಆತಂಕಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳ ಪ್ರಕಾರ, ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ವೈಯಕ್ತಿಕ ಗೌಪ್ಯತೆ ಮೂಲಭೂತ ಹಕ್ಕಾಗಿದ್ದು, ಇದು ಆರ್‌ಟಿಐ ಕಾಯ್ದೆಯೊಂದಿಗೆ ಸಂಘರ್ಷಕ್ಕೊಳಗಾಗಿದೆ. ಆದರೆ, ಹೋರಾಟಗಾರರು ಈ ವಾದವನ್ನು ಒಪ್ಪದೆ, “ಕಾಯ್ದೆಯಲ್ಲಿ ವೈಯಕ್ತಿಕ ಮಾಹಿತಿಗೆ ಈಗಾಗಲೇ ರಕ್ಷಣೆ ಇದ್ದು, ಯಾವಾಗ ಬಹಿರಂಗಪಡಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಇದೆ” ಎಂದು ಮಾಜಿ ಕೇಂದ್ರ ಮಾಹಿತಿ ಆಯುಕ್ತ ಎಂ.ಎಂ. ಅನ್ಸಾರಿ ತಿಳಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಶೈಕ್ಷಣಿಕ ದಾಖಲೆಗಳು ಮತ್ತು ಪ್ರಮುಖ ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.

2023ರಲ್ಲಿ ಜಾರಿಗೊಂಡ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (ಡಿಪಿಡಿಪಿ) ಕಾಯ್ದೆಯ ಮೂಲಕ ಈ ತಿದ್ದುಪಡಿಯನ್ನು ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆದರೆ, ಡಿಪಿಡಿಪಿ ಕಾಯ್ದೆಗೆ ಸಂಬಂಧಿಸಿದ ಉಪ-ಕಾನೂನು ಜಾರಿಯಾಗದ ಕಾರಣ, ಈ ತಿದ್ದುಪಡಿ ಇನ್ನೂ ಜಾರಿಗೆ ಬಂದಿಲ್ಲ.

“2025ರ ಡಿಪಿಡಿಪಿ ನಿಯಮಗಳಲ್ಲಿ ಈ ತಿದ್ದುಪಡಿಯನ್ನು ಜಾರಿಗೊಳಿಸದಂತೆ ತಡೆಯಬೇಕು ಮತ್ತು ಸಂಸತ್ತು ಇದನ್ನು ರದ್ದುಗೊಳಿಸಬೇಕು” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕಿ ಅಂಜಲಿ ಭಾರದ್ವಾಜ್ ಒತ್ತಾಯಿಸಿದ್ದಾರೆ.

ಈ ತಿದ್ದುಪಡಿಯಿಂದ ಸಾಮಾಜಿಕ ಲೆಕ್ಕಪರಿಶೋಧನೆ ಕಾರ್ಯಗಳು ತೊಂದರೆಗೊಳಗಾಗಲಿವೆ ಎಂದು ಹೋರಾಟರಾರರು ಎಚ್ಚರಿಸಿದ್ದಾರೆ. ಉದಾಹರಣೆಗೆ, ಪಡಿತರ ವಿತರಣೆಯ ದಾಖಲೆಗಳನ್ನು ಪರಿಶೀಲಿಸಿ ಮನೆ ಮನೆಗೆ ಭೇಟಿ ನೀಡುವ ತಪಾಸಣೆಗಳು ಸಾಧ್ಯವಾಗದೇ ಹೋಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಆರ್‌ಟಿಐ ಕಾಯ್ದೆಯ ರಕ್ಷಣೆ ಎಂದರೆ ಪ್ರಜಾಪ್ರಭುತ್ವದ ರಕ್ಷಣೆ ಎಂದರ್ಥ” ಎಂದು ಕಾರ್ಯಕರ್ತರು ಒತ್ತಿ ಹೇಳಿದ್ದಾರೆ. ಆರ್‌ಟಿಐ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...