Homeಚಳವಳಿಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

ಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

- Advertisement -
- Advertisement -

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) 2005 ರನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕೃತ್ಯಗಳ ವಿರುದ್ಧ ದೇಶದಾದ್ಯಂತ ನಾಗರಿಕರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್ ಕ್ಯಾಂಪೇನ್ ಫಾರ್ ಪೀಪಲ್ಸ್ ರೈಟ್ ಟು ಇನ್ಫರ್ಮೇಷನ್ (ಎನ್‌ಸಿಪಿಆರ್‌ಐ) ಸೇರಿದಂತೆ 30ಕ್ಕೂ ಅಧಿಕ ಸಂಘಟನೆಗಳು ಮಾರ್ಚ್ 21, 2025ರ ಶುಕ್ರವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಆರ್‌ಟಿಐ ಕಾಯ್ದೆಯನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆರ್‌ಟಿಐ ಕಾಯ್ದೆ

2023ರಲ್ಲಿ ಆರ್‌ಟಿಐ ಕಾಯ್ದೆಗೆ ತರಲಾದ ತಿದ್ದುಪಡಿಯು ಇನ್ನೂ ಜಾರಿಗೆ ಬಂದಿಲ್ಲವಾದರೂ, ಇದು ಸರ್ಕಾರಿ ಸಂಸ್ಥೆಗಳು ನೀಡಬೇಕಾದ ಮಾಹಿತಿಯ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(j) ಅಡಿಯಲ್ಲಿ, ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಅರ್ಜಿಗಳನ್ನು ಸರ್ಕಾರಿ ಸಂಸ್ಥೆಗಳು ತಿರಸ್ಕರಿಸಬಹುದು ಎಂದು ತಿಳಿಸಲಾಗಿದೆ. “ಈ ನಿಯಮವು ಮಾಹಿತಿ ನೀಡದಿರಲು ಸರ್ಕಾರಕ್ಕೆ ಸುಲಭ ದಾರಿಯಾಗಲಿದೆ” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕ ನಿಖಿಲ್ ದೇ ಹೇಳಿದ್ದಾರೆ. ಕೇಂದ್ರ ಸರ್ಕಾರವು ಈ ಆತಂಕಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳ ಪ್ರಕಾರ, ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ವೈಯಕ್ತಿಕ ಗೌಪ್ಯತೆ ಮೂಲಭೂತ ಹಕ್ಕಾಗಿದ್ದು, ಇದು ಆರ್‌ಟಿಐ ಕಾಯ್ದೆಯೊಂದಿಗೆ ಸಂಘರ್ಷಕ್ಕೊಳಗಾಗಿದೆ. ಆದರೆ, ಹೋರಾಟಗಾರರು ಈ ವಾದವನ್ನು ಒಪ್ಪದೆ, “ಕಾಯ್ದೆಯಲ್ಲಿ ವೈಯಕ್ತಿಕ ಮಾಹಿತಿಗೆ ಈಗಾಗಲೇ ರಕ್ಷಣೆ ಇದ್ದು, ಯಾವಾಗ ಬಹಿರಂಗಪಡಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಇದೆ” ಎಂದು ಮಾಜಿ ಕೇಂದ್ರ ಮಾಹಿತಿ ಆಯುಕ್ತ ಎಂ.ಎಂ. ಅನ್ಸಾರಿ ತಿಳಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಶೈಕ್ಷಣಿಕ ದಾಖಲೆಗಳು ಮತ್ತು ಪ್ರಮುಖ ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.

2023ರಲ್ಲಿ ಜಾರಿಗೊಂಡ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (ಡಿಪಿಡಿಪಿ) ಕಾಯ್ದೆಯ ಮೂಲಕ ಈ ತಿದ್ದುಪಡಿಯನ್ನು ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆದರೆ, ಡಿಪಿಡಿಪಿ ಕಾಯ್ದೆಗೆ ಸಂಬಂಧಿಸಿದ ಉಪ-ಕಾನೂನು ಜಾರಿಯಾಗದ ಕಾರಣ, ಈ ತಿದ್ದುಪಡಿ ಇನ್ನೂ ಜಾರಿಗೆ ಬಂದಿಲ್ಲ.

“2025ರ ಡಿಪಿಡಿಪಿ ನಿಯಮಗಳಲ್ಲಿ ಈ ತಿದ್ದುಪಡಿಯನ್ನು ಜಾರಿಗೊಳಿಸದಂತೆ ತಡೆಯಬೇಕು ಮತ್ತು ಸಂಸತ್ತು ಇದನ್ನು ರದ್ದುಗೊಳಿಸಬೇಕು” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕಿ ಅಂಜಲಿ ಭಾರದ್ವಾಜ್ ಒತ್ತಾಯಿಸಿದ್ದಾರೆ.

ಈ ತಿದ್ದುಪಡಿಯಿಂದ ಸಾಮಾಜಿಕ ಲೆಕ್ಕಪರಿಶೋಧನೆ ಕಾರ್ಯಗಳು ತೊಂದರೆಗೊಳಗಾಗಲಿವೆ ಎಂದು ಹೋರಾಟರಾರರು ಎಚ್ಚರಿಸಿದ್ದಾರೆ. ಉದಾಹರಣೆಗೆ, ಪಡಿತರ ವಿತರಣೆಯ ದಾಖಲೆಗಳನ್ನು ಪರಿಶೀಲಿಸಿ ಮನೆ ಮನೆಗೆ ಭೇಟಿ ನೀಡುವ ತಪಾಸಣೆಗಳು ಸಾಧ್ಯವಾಗದೇ ಹೋಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಆರ್‌ಟಿಐ ಕಾಯ್ದೆಯ ರಕ್ಷಣೆ ಎಂದರೆ ಪ್ರಜಾಪ್ರಭುತ್ವದ ರಕ್ಷಣೆ ಎಂದರ್ಥ” ಎಂದು ಕಾರ್ಯಕರ್ತರು ಒತ್ತಿ ಹೇಳಿದ್ದಾರೆ. ಆರ್‌ಟಿಐ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...