Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...