Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...