Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...