Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...