Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...