Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...