Homeಕರ್ನಾಟಕರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌, ಶಾಲಾ ಪಠ್ಯ ಪುಸ್ತಕ ಪುನರ್‌ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ‘ಶೈಕ್ಷಣಿಕ ಅರ್ಹತೆ’ ಏನು ಎಂದು ಪ್ರಶ್ನಿಸಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಅವರನ್ನು ಯಾವ ಮಾನದಂಡಗಳ ಮೇಲೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಕೂಡಾ ಪ್ರಶ್ನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಪ್ರಾರಂಭವಾದ ನಂತರ ರೋಹಿತ್ ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಕೂಡಾ ಪ್ರಶ್ನೆಗಳೆದ್ದಿದ್ದವು. ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ರೋಹಿತ್ ಚಕ್ರತೀರ್ಥ ಅವರು ಗಣಿತ ಟ್ಯೂಷನ್‌ ನೀಡುವ ಶಿಕ್ಷಕನಾಗಿದ್ದು, ಮೂರು ಕಾಲೇಜುಗಳಲ್ಲಿ ಉಪನ್ಯಾಸಕನಾಗಿ ಪಾಠ ಮಾಡಿದ್ದರು ಎಂದು ವರದಿಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಪ್ರಶ್ನಿಸಿದ್ದ ಪತ್ರಕರ್ತರಿಗೆ ಉತ್ತರಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು, “ಅವರು ಐಐಟಿ ಮತ್ತು ಸಿಇಟಿ ಪ್ರೊಫೆಸರ್‌’’ ಎಂದು ಹೇಳಿದ್ದರು. ಆದರೆ ಚಕ್ರತೀರ್ಥ ಅವರು ಅದನ್ನು ನಿರಾಕರಿಸಿದ್ದರು. ಅದಾಗಿಯೂ ಅವರು ತಮ್ಮ ಶೈಕ್ಷಣಿಕ ಅರ್ಹತೆಗಳೇನು ಎಂಬ ಬಗ್ಗೆ ಅವರು ಎಲ್ಲೂ ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

‘‘ಸಮಿತಿಗೆ ಆಯ್ಕೆಯಾಗಲು ನಿಮ್ಮ ಅರ್ಹತೆಯೇನು’’ ಎಂಬ ಪ್ರಶ್ನೆಗೆ ಅವರು, “ನನ್ನನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಸರ್ಕಾರ ನನ್ನ ಯಾವು ಅರ್ಹತೆ ನೋಡಿತು ಎಂಬ ವಿಚಾರವನ್ನು ಸರ್ಕಾರದ ಜೊತೆಗೆ ಕೇಳಬೇಕು” ಎಂದು ಹೇಳಿಕೊಂಡಿದ್ದರು.

ಇದೀಗ ಮಾಹಿತಿ ಹಕ್ಕು ಕಾಯಿದೆ-2005ರ ಅಡಿಯಲ್ಲಿ ಚಕ್ರತೀರ್ಥ ಅವರ ಅರ್ಹತೆ, ಅವರ ಆಯ್ಕೆಗೆ ಪಾಲಿಸಿರುವ ಮಾನದಂಡಗಳು ಸೇರಿದಂತೆ ಸಮಿತಿಯ ಹಲವು ವಿಚಾಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಪ್ರಸ್ತುತ ಸಲ್ಲಿಸಲಾಗಿರುವ ಅರ್ಜಿಯಲ್ಲಿ, “ಶಾಲಾ ಪಠ್ಯ ಪುಸ್ತಕಗಳ ಪುನರ್‌ ಪರಿಷ್ಕರಣ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ಯಾವುದಾದರೂ ಮಾನದಂಡಗಳು ಇವೆಯೆ? ಇದ್ದರೆ ಯಾವುವು?” ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

“ಈ ಹಿಂದೆ ಡಾ.ಜಿ.ಎಸ್. ಮೂಡಂಬಡಿತತಾಯ ಅವರು ಮುಖ್ಯ ಸಂಯೋಜಕರಾಗಿ ಹಾಗೂ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಸರ್ವಾಧ್ಯಕ್ಷರಾಗಿ ರಚಿಸಲಾಗಿದ್ದ ಪಠ್ಯ ಪುಸ್ತಕ ಸಮಿತಿಗಳಿಗೆ ಅವರನ್ನೂ, ಇತರ ಸದಸ್ಯರನ್ನೂ ನೇಮಿಸುವಾಗ ಬಳಸಲಾಗಿದ್ದ ಮಾನದಂಡಗಳು ಯಾವುವು?” ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

“ಇದೀಗ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಈ ಅಧ್ಯಕ್ಷರನ್ನೂ, ಇತರ ಸಮಿತಿ ಸದಸ್ಯರನ್ನೂ ನೇಮಿಸುವಾಗ ಬಳಸಿರುವ ಮಾನದಂಡಗಳು ಯಾವುವು?” ಎಂಬ ಪ್ರಶ್ನೆಯನ್ನೂ ಅರ್ಜಿಯಲ್ಲಿ ಕೇಳಲಾಗಿದೆ.

ಅಷ್ಟೇ ಅಲ್ಲದೆ, ಹೊಸದಾಗಿ ಪರಿಷ್ಕರಿಸಿ ಪ್ರಕಟಿಸಲಾಗಿರುವ ಪುಸ್ತಕಗಳಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೆಸರಿನ ಮುಂದೆ ಸದಸ್ಯರು ಕನ್ನಡ ಅಭಿವೃದ್ಧ ಪ್ರಾಧಿಕಾರ ಎಂದಷ್ಟೇ ಹೇಳಲಾಗಿದ್ದು, ಬೇರೆ ವಿವರಗಳು ಲಭ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದು, “ರೋಹಿತ್ ಚಕ್ರತೀರ್ಥ ಅವರ ಶೈಕ್ಷಣಿಕ ಅರ್ಹತೆಗಳೇನು? ಅದರು ಯಾವ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾಲಯದಿಂದ ಯಾವಾಗ, ಯಾವ ಪದವಿ ಪಡೆದಿದ್ದಾರೆ? ಯಾವ ಸಂಸ್ಥೆಗಳಲ್ಲಿ ಶಿಕ್ಷಕರಾಗಿ/ಉಪನ್ಯಾಸಕರಾಗಿ/ಪ್ರಾಧ್ಯಾಪಕರಾಗಿ/ಸಂಶೋಧಕರಾಗಿ ಕೆಲಸ ಮಾಡಿದ್ದಾರೆ?” ಎಂದು ಆರ್‌ಟಿಐಯಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಜೊತೆಗೆ, ರೋಹಿತ್‌ ಚಕ್ರತೀರ್ಥ ಆವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದ ಸಭೆಯ ನಡಾವಳಿಗಳ ಪ್ರತಿಯನ್ನು ಒದಗಿಸುವಂತೆ ಆರ್‌ಟಿಐ ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...