Homeಕರ್ನಾಟಕರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌, ಶಾಲಾ ಪಠ್ಯ ಪುಸ್ತಕ ಪುನರ್‌ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ‘ಶೈಕ್ಷಣಿಕ ಅರ್ಹತೆ’ ಏನು ಎಂದು ಪ್ರಶ್ನಿಸಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಅವರನ್ನು ಯಾವ ಮಾನದಂಡಗಳ ಮೇಲೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಕೂಡಾ ಪ್ರಶ್ನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಪ್ರಾರಂಭವಾದ ನಂತರ ರೋಹಿತ್ ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಕೂಡಾ ಪ್ರಶ್ನೆಗಳೆದ್ದಿದ್ದವು. ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ರೋಹಿತ್ ಚಕ್ರತೀರ್ಥ ಅವರು ಗಣಿತ ಟ್ಯೂಷನ್‌ ನೀಡುವ ಶಿಕ್ಷಕನಾಗಿದ್ದು, ಮೂರು ಕಾಲೇಜುಗಳಲ್ಲಿ ಉಪನ್ಯಾಸಕನಾಗಿ ಪಾಠ ಮಾಡಿದ್ದರು ಎಂದು ವರದಿಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಪ್ರಶ್ನಿಸಿದ್ದ ಪತ್ರಕರ್ತರಿಗೆ ಉತ್ತರಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು, “ಅವರು ಐಐಟಿ ಮತ್ತು ಸಿಇಟಿ ಪ್ರೊಫೆಸರ್‌’’ ಎಂದು ಹೇಳಿದ್ದರು. ಆದರೆ ಚಕ್ರತೀರ್ಥ ಅವರು ಅದನ್ನು ನಿರಾಕರಿಸಿದ್ದರು. ಅದಾಗಿಯೂ ಅವರು ತಮ್ಮ ಶೈಕ್ಷಣಿಕ ಅರ್ಹತೆಗಳೇನು ಎಂಬ ಬಗ್ಗೆ ಅವರು ಎಲ್ಲೂ ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

‘‘ಸಮಿತಿಗೆ ಆಯ್ಕೆಯಾಗಲು ನಿಮ್ಮ ಅರ್ಹತೆಯೇನು’’ ಎಂಬ ಪ್ರಶ್ನೆಗೆ ಅವರು, “ನನ್ನನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಸರ್ಕಾರ ನನ್ನ ಯಾವು ಅರ್ಹತೆ ನೋಡಿತು ಎಂಬ ವಿಚಾರವನ್ನು ಸರ್ಕಾರದ ಜೊತೆಗೆ ಕೇಳಬೇಕು” ಎಂದು ಹೇಳಿಕೊಂಡಿದ್ದರು.

ಇದೀಗ ಮಾಹಿತಿ ಹಕ್ಕು ಕಾಯಿದೆ-2005ರ ಅಡಿಯಲ್ಲಿ ಚಕ್ರತೀರ್ಥ ಅವರ ಅರ್ಹತೆ, ಅವರ ಆಯ್ಕೆಗೆ ಪಾಲಿಸಿರುವ ಮಾನದಂಡಗಳು ಸೇರಿದಂತೆ ಸಮಿತಿಯ ಹಲವು ವಿಚಾಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಪ್ರಸ್ತುತ ಸಲ್ಲಿಸಲಾಗಿರುವ ಅರ್ಜಿಯಲ್ಲಿ, “ಶಾಲಾ ಪಠ್ಯ ಪುಸ್ತಕಗಳ ಪುನರ್‌ ಪರಿಷ್ಕರಣ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ಯಾವುದಾದರೂ ಮಾನದಂಡಗಳು ಇವೆಯೆ? ಇದ್ದರೆ ಯಾವುವು?” ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

“ಈ ಹಿಂದೆ ಡಾ.ಜಿ.ಎಸ್. ಮೂಡಂಬಡಿತತಾಯ ಅವರು ಮುಖ್ಯ ಸಂಯೋಜಕರಾಗಿ ಹಾಗೂ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಸರ್ವಾಧ್ಯಕ್ಷರಾಗಿ ರಚಿಸಲಾಗಿದ್ದ ಪಠ್ಯ ಪುಸ್ತಕ ಸಮಿತಿಗಳಿಗೆ ಅವರನ್ನೂ, ಇತರ ಸದಸ್ಯರನ್ನೂ ನೇಮಿಸುವಾಗ ಬಳಸಲಾಗಿದ್ದ ಮಾನದಂಡಗಳು ಯಾವುವು?” ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

“ಇದೀಗ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಈ ಅಧ್ಯಕ್ಷರನ್ನೂ, ಇತರ ಸಮಿತಿ ಸದಸ್ಯರನ್ನೂ ನೇಮಿಸುವಾಗ ಬಳಸಿರುವ ಮಾನದಂಡಗಳು ಯಾವುವು?” ಎಂಬ ಪ್ರಶ್ನೆಯನ್ನೂ ಅರ್ಜಿಯಲ್ಲಿ ಕೇಳಲಾಗಿದೆ.

ಅಷ್ಟೇ ಅಲ್ಲದೆ, ಹೊಸದಾಗಿ ಪರಿಷ್ಕರಿಸಿ ಪ್ರಕಟಿಸಲಾಗಿರುವ ಪುಸ್ತಕಗಳಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೆಸರಿನ ಮುಂದೆ ಸದಸ್ಯರು ಕನ್ನಡ ಅಭಿವೃದ್ಧ ಪ್ರಾಧಿಕಾರ ಎಂದಷ್ಟೇ ಹೇಳಲಾಗಿದ್ದು, ಬೇರೆ ವಿವರಗಳು ಲಭ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದು, “ರೋಹಿತ್ ಚಕ್ರತೀರ್ಥ ಅವರ ಶೈಕ್ಷಣಿಕ ಅರ್ಹತೆಗಳೇನು? ಅದರು ಯಾವ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾಲಯದಿಂದ ಯಾವಾಗ, ಯಾವ ಪದವಿ ಪಡೆದಿದ್ದಾರೆ? ಯಾವ ಸಂಸ್ಥೆಗಳಲ್ಲಿ ಶಿಕ್ಷಕರಾಗಿ/ಉಪನ್ಯಾಸಕರಾಗಿ/ಪ್ರಾಧ್ಯಾಪಕರಾಗಿ/ಸಂಶೋಧಕರಾಗಿ ಕೆಲಸ ಮಾಡಿದ್ದಾರೆ?” ಎಂದು ಆರ್‌ಟಿಐಯಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಜೊತೆಗೆ, ರೋಹಿತ್‌ ಚಕ್ರತೀರ್ಥ ಆವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದ ಸಭೆಯ ನಡಾವಳಿಗಳ ಪ್ರತಿಯನ್ನು ಒದಗಿಸುವಂತೆ ಆರ್‌ಟಿಐ ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...