Homeಕರ್ನಾಟಕರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌, ಶಾಲಾ ಪಠ್ಯ ಪುಸ್ತಕ ಪುನರ್‌ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ‘ಶೈಕ್ಷಣಿಕ ಅರ್ಹತೆ’ ಏನು ಎಂದು ಪ್ರಶ್ನಿಸಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಅವರನ್ನು ಯಾವ ಮಾನದಂಡಗಳ ಮೇಲೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಕೂಡಾ ಪ್ರಶ್ನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಪ್ರಾರಂಭವಾದ ನಂತರ ರೋಹಿತ್ ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಕೂಡಾ ಪ್ರಶ್ನೆಗಳೆದ್ದಿದ್ದವು. ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ರೋಹಿತ್ ಚಕ್ರತೀರ್ಥ ಅವರು ಗಣಿತ ಟ್ಯೂಷನ್‌ ನೀಡುವ ಶಿಕ್ಷಕನಾಗಿದ್ದು, ಮೂರು ಕಾಲೇಜುಗಳಲ್ಲಿ ಉಪನ್ಯಾಸಕನಾಗಿ ಪಾಠ ಮಾಡಿದ್ದರು ಎಂದು ವರದಿಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಪ್ರಶ್ನಿಸಿದ್ದ ಪತ್ರಕರ್ತರಿಗೆ ಉತ್ತರಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು, “ಅವರು ಐಐಟಿ ಮತ್ತು ಸಿಇಟಿ ಪ್ರೊಫೆಸರ್‌’’ ಎಂದು ಹೇಳಿದ್ದರು. ಆದರೆ ಚಕ್ರತೀರ್ಥ ಅವರು ಅದನ್ನು ನಿರಾಕರಿಸಿದ್ದರು. ಅದಾಗಿಯೂ ಅವರು ತಮ್ಮ ಶೈಕ್ಷಣಿಕ ಅರ್ಹತೆಗಳೇನು ಎಂಬ ಬಗ್ಗೆ ಅವರು ಎಲ್ಲೂ ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

‘‘ಸಮಿತಿಗೆ ಆಯ್ಕೆಯಾಗಲು ನಿಮ್ಮ ಅರ್ಹತೆಯೇನು’’ ಎಂಬ ಪ್ರಶ್ನೆಗೆ ಅವರು, “ನನ್ನನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಸರ್ಕಾರ ನನ್ನ ಯಾವು ಅರ್ಹತೆ ನೋಡಿತು ಎಂಬ ವಿಚಾರವನ್ನು ಸರ್ಕಾರದ ಜೊತೆಗೆ ಕೇಳಬೇಕು” ಎಂದು ಹೇಳಿಕೊಂಡಿದ್ದರು.

ಇದೀಗ ಮಾಹಿತಿ ಹಕ್ಕು ಕಾಯಿದೆ-2005ರ ಅಡಿಯಲ್ಲಿ ಚಕ್ರತೀರ್ಥ ಅವರ ಅರ್ಹತೆ, ಅವರ ಆಯ್ಕೆಗೆ ಪಾಲಿಸಿರುವ ಮಾನದಂಡಗಳು ಸೇರಿದಂತೆ ಸಮಿತಿಯ ಹಲವು ವಿಚಾಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಪ್ರಸ್ತುತ ಸಲ್ಲಿಸಲಾಗಿರುವ ಅರ್ಜಿಯಲ್ಲಿ, “ಶಾಲಾ ಪಠ್ಯ ಪುಸ್ತಕಗಳ ಪುನರ್‌ ಪರಿಷ್ಕರಣ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ಯಾವುದಾದರೂ ಮಾನದಂಡಗಳು ಇವೆಯೆ? ಇದ್ದರೆ ಯಾವುವು?” ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

“ಈ ಹಿಂದೆ ಡಾ.ಜಿ.ಎಸ್. ಮೂಡಂಬಡಿತತಾಯ ಅವರು ಮುಖ್ಯ ಸಂಯೋಜಕರಾಗಿ ಹಾಗೂ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಸರ್ವಾಧ್ಯಕ್ಷರಾಗಿ ರಚಿಸಲಾಗಿದ್ದ ಪಠ್ಯ ಪುಸ್ತಕ ಸಮಿತಿಗಳಿಗೆ ಅವರನ್ನೂ, ಇತರ ಸದಸ್ಯರನ್ನೂ ನೇಮಿಸುವಾಗ ಬಳಸಲಾಗಿದ್ದ ಮಾನದಂಡಗಳು ಯಾವುವು?” ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

“ಇದೀಗ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಈ ಅಧ್ಯಕ್ಷರನ್ನೂ, ಇತರ ಸಮಿತಿ ಸದಸ್ಯರನ್ನೂ ನೇಮಿಸುವಾಗ ಬಳಸಿರುವ ಮಾನದಂಡಗಳು ಯಾವುವು?” ಎಂಬ ಪ್ರಶ್ನೆಯನ್ನೂ ಅರ್ಜಿಯಲ್ಲಿ ಕೇಳಲಾಗಿದೆ.

ಅಷ್ಟೇ ಅಲ್ಲದೆ, ಹೊಸದಾಗಿ ಪರಿಷ್ಕರಿಸಿ ಪ್ರಕಟಿಸಲಾಗಿರುವ ಪುಸ್ತಕಗಳಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೆಸರಿನ ಮುಂದೆ ಸದಸ್ಯರು ಕನ್ನಡ ಅಭಿವೃದ್ಧ ಪ್ರಾಧಿಕಾರ ಎಂದಷ್ಟೇ ಹೇಳಲಾಗಿದ್ದು, ಬೇರೆ ವಿವರಗಳು ಲಭ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದು, “ರೋಹಿತ್ ಚಕ್ರತೀರ್ಥ ಅವರ ಶೈಕ್ಷಣಿಕ ಅರ್ಹತೆಗಳೇನು? ಅದರು ಯಾವ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾಲಯದಿಂದ ಯಾವಾಗ, ಯಾವ ಪದವಿ ಪಡೆದಿದ್ದಾರೆ? ಯಾವ ಸಂಸ್ಥೆಗಳಲ್ಲಿ ಶಿಕ್ಷಕರಾಗಿ/ಉಪನ್ಯಾಸಕರಾಗಿ/ಪ್ರಾಧ್ಯಾಪಕರಾಗಿ/ಸಂಶೋಧಕರಾಗಿ ಕೆಲಸ ಮಾಡಿದ್ದಾರೆ?” ಎಂದು ಆರ್‌ಟಿಐಯಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಜೊತೆಗೆ, ರೋಹಿತ್‌ ಚಕ್ರತೀರ್ಥ ಆವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದ ಸಭೆಯ ನಡಾವಳಿಗಳ ಪ್ರತಿಯನ್ನು ಒದಗಿಸುವಂತೆ ಆರ್‌ಟಿಐ ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...