Homeಕರ್ನಾಟಕರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌, ಶಾಲಾ ಪಠ್ಯ ಪುಸ್ತಕ ಪುನರ್‌ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ‘ಶೈಕ್ಷಣಿಕ ಅರ್ಹತೆ’ ಏನು ಎಂದು ಪ್ರಶ್ನಿಸಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಅವರನ್ನು ಯಾವ ಮಾನದಂಡಗಳ ಮೇಲೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಕೂಡಾ ಪ್ರಶ್ನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಪ್ರಾರಂಭವಾದ ನಂತರ ರೋಹಿತ್ ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಕೂಡಾ ಪ್ರಶ್ನೆಗಳೆದ್ದಿದ್ದವು. ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ರೋಹಿತ್ ಚಕ್ರತೀರ್ಥ ಅವರು ಗಣಿತ ಟ್ಯೂಷನ್‌ ನೀಡುವ ಶಿಕ್ಷಕನಾಗಿದ್ದು, ಮೂರು ಕಾಲೇಜುಗಳಲ್ಲಿ ಉಪನ್ಯಾಸಕನಾಗಿ ಪಾಠ ಮಾಡಿದ್ದರು ಎಂದು ವರದಿಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಪ್ರಶ್ನಿಸಿದ್ದ ಪತ್ರಕರ್ತರಿಗೆ ಉತ್ತರಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು, “ಅವರು ಐಐಟಿ ಮತ್ತು ಸಿಇಟಿ ಪ್ರೊಫೆಸರ್‌’’ ಎಂದು ಹೇಳಿದ್ದರು. ಆದರೆ ಚಕ್ರತೀರ್ಥ ಅವರು ಅದನ್ನು ನಿರಾಕರಿಸಿದ್ದರು. ಅದಾಗಿಯೂ ಅವರು ತಮ್ಮ ಶೈಕ್ಷಣಿಕ ಅರ್ಹತೆಗಳೇನು ಎಂಬ ಬಗ್ಗೆ ಅವರು ಎಲ್ಲೂ ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

‘‘ಸಮಿತಿಗೆ ಆಯ್ಕೆಯಾಗಲು ನಿಮ್ಮ ಅರ್ಹತೆಯೇನು’’ ಎಂಬ ಪ್ರಶ್ನೆಗೆ ಅವರು, “ನನ್ನನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಸರ್ಕಾರ ನನ್ನ ಯಾವು ಅರ್ಹತೆ ನೋಡಿತು ಎಂಬ ವಿಚಾರವನ್ನು ಸರ್ಕಾರದ ಜೊತೆಗೆ ಕೇಳಬೇಕು” ಎಂದು ಹೇಳಿಕೊಂಡಿದ್ದರು.

ಇದೀಗ ಮಾಹಿತಿ ಹಕ್ಕು ಕಾಯಿದೆ-2005ರ ಅಡಿಯಲ್ಲಿ ಚಕ್ರತೀರ್ಥ ಅವರ ಅರ್ಹತೆ, ಅವರ ಆಯ್ಕೆಗೆ ಪಾಲಿಸಿರುವ ಮಾನದಂಡಗಳು ಸೇರಿದಂತೆ ಸಮಿತಿಯ ಹಲವು ವಿಚಾಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಪ್ರಸ್ತುತ ಸಲ್ಲಿಸಲಾಗಿರುವ ಅರ್ಜಿಯಲ್ಲಿ, “ಶಾಲಾ ಪಠ್ಯ ಪುಸ್ತಕಗಳ ಪುನರ್‌ ಪರಿಷ್ಕರಣ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ಯಾವುದಾದರೂ ಮಾನದಂಡಗಳು ಇವೆಯೆ? ಇದ್ದರೆ ಯಾವುವು?” ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

“ಈ ಹಿಂದೆ ಡಾ.ಜಿ.ಎಸ್. ಮೂಡಂಬಡಿತತಾಯ ಅವರು ಮುಖ್ಯ ಸಂಯೋಜಕರಾಗಿ ಹಾಗೂ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಸರ್ವಾಧ್ಯಕ್ಷರಾಗಿ ರಚಿಸಲಾಗಿದ್ದ ಪಠ್ಯ ಪುಸ್ತಕ ಸಮಿತಿಗಳಿಗೆ ಅವರನ್ನೂ, ಇತರ ಸದಸ್ಯರನ್ನೂ ನೇಮಿಸುವಾಗ ಬಳಸಲಾಗಿದ್ದ ಮಾನದಂಡಗಳು ಯಾವುವು?” ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

“ಇದೀಗ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಈ ಅಧ್ಯಕ್ಷರನ್ನೂ, ಇತರ ಸಮಿತಿ ಸದಸ್ಯರನ್ನೂ ನೇಮಿಸುವಾಗ ಬಳಸಿರುವ ಮಾನದಂಡಗಳು ಯಾವುವು?” ಎಂಬ ಪ್ರಶ್ನೆಯನ್ನೂ ಅರ್ಜಿಯಲ್ಲಿ ಕೇಳಲಾಗಿದೆ.

ಅಷ್ಟೇ ಅಲ್ಲದೆ, ಹೊಸದಾಗಿ ಪರಿಷ್ಕರಿಸಿ ಪ್ರಕಟಿಸಲಾಗಿರುವ ಪುಸ್ತಕಗಳಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೆಸರಿನ ಮುಂದೆ ಸದಸ್ಯರು ಕನ್ನಡ ಅಭಿವೃದ್ಧ ಪ್ರಾಧಿಕಾರ ಎಂದಷ್ಟೇ ಹೇಳಲಾಗಿದ್ದು, ಬೇರೆ ವಿವರಗಳು ಲಭ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದು, “ರೋಹಿತ್ ಚಕ್ರತೀರ್ಥ ಅವರ ಶೈಕ್ಷಣಿಕ ಅರ್ಹತೆಗಳೇನು? ಅದರು ಯಾವ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾಲಯದಿಂದ ಯಾವಾಗ, ಯಾವ ಪದವಿ ಪಡೆದಿದ್ದಾರೆ? ಯಾವ ಸಂಸ್ಥೆಗಳಲ್ಲಿ ಶಿಕ್ಷಕರಾಗಿ/ಉಪನ್ಯಾಸಕರಾಗಿ/ಪ್ರಾಧ್ಯಾಪಕರಾಗಿ/ಸಂಶೋಧಕರಾಗಿ ಕೆಲಸ ಮಾಡಿದ್ದಾರೆ?” ಎಂದು ಆರ್‌ಟಿಐಯಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಜೊತೆಗೆ, ರೋಹಿತ್‌ ಚಕ್ರತೀರ್ಥ ಆವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದ ಸಭೆಯ ನಡಾವಳಿಗಳ ಪ್ರತಿಯನ್ನು ಒದಗಿಸುವಂತೆ ಆರ್‌ಟಿಐ ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...