Homeಮುಖಪುಟಮೂಲ ಭಗವದ್ಗೀತೆ ಕುರಿತು ಮಾಹಿತಿಯಿಲ್ಲ ಎಂದ ಕೇಂದ್ರ ಸರ್ಕಾರ: RTI ಅರ್ಜಿಯಿಂದ ಬಹಿರಂಗ

ಮೂಲ ಭಗವದ್ಗೀತೆ ಕುರಿತು ಮಾಹಿತಿಯಿಲ್ಲ ಎಂದ ಕೇಂದ್ರ ಸರ್ಕಾರ: RTI ಅರ್ಜಿಯಿಂದ ಬಹಿರಂಗ

- Advertisement -
- Advertisement -

ಶಾಲೆಗಳಲ್ಲಿ ಭಗವದ್ಗೀತೆ ಪಠ್ಯ ಬೋಧಿಸುವ ಕುರಿತು ಮತ್ತೊಮ್ಮೆ ಚರ್ಚೆ ನಡೆಯುತ್ತಿದೆ. ಈ ಕುರಿತು ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಈ ಕುರಿತು ಹೇಳಿಕೆ ನೀಡಿದ್ದಾರೆ. ಇನ್ನು ಕಾನೂನು ಸಚಿವರಾದ ಜೆ.ಸಿ ಮಾಧುಸ್ವಾಮಿಯವರು ಈ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದಿದ್ದಾರೆ. ಈ ಸಂದರ್ಭದಲ್ಲಿ ಮೂಲ ಭಗವದ್ಗೀತೆ ಕುರಿತು ಯಾವುದೇ ಮಾಹಿತಿಯಿಲ್ಲ ಎಂದು ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯ ಹೇಳಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಬೆಳಗಾವಿ ಮೂಲದ ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ಸುರೇಂದ್ರ ಉಗಾರೆಯವರು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಸಂಸ್ಕೃತಿ ಸಚಿವಾಲಯವು ಯಾವುದೇ ಮಾಹಿತಿ ಇಲ್ಲ ಎಂದು ಉತ್ತರಿಸಿದ್ದು, ಇದು ತಮಗೆ ತೃಪ್ತಿದಾಯಕವಾಗಿಲ್ಲದಿದ್ದರೆ ಸಚಿವಾಲಯದ ಉಪ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಬಹುದು ಎಂದಿದೆ.

ಭಗವದ್ಗೀತೆಯ ಮೂಲ ಪ್ರತಿಯನ್ನು ಎಲ್ಲಿ ಸಂರಕ್ಷಿಸಿ ಇಡಲಾಗಿದೆ. ಅದರ ಅಧಿಕೃತ ಪುಸ್ತಕಗಳು ಯಾವುವು ಮತ್ತು ಪ್ರಕಾಶಕರ ಪಟ್ಟಿ ಮತ್ತಿತರರ ವಿವರಗಳನ್ನು ಕೋರಿ 2021ರ ಡಿಸೆಂಬರ್‌ನಲ್ಲಿಯೇ ಆರ್‌ಟಿಐ ಅರ್ಜಿ ಸಲ್ಲಿಸಲಾಗಿತ್ತು. ಸಾರ್ವಜನಿಕ ಉದ್ದೇಶಕ್ಕಾಗಿ ಈ ಮಾಹಿತಿ ಕೇಳುತ್ತಿದ್ದೇವೆ ಎಂದು ಅವರು ಮನವಿ ಮಾಡಿದ್ದರು. ಇದಕ್ಕೆ 2022ರ ಫೆಬ್ರವರಿಯಲ್ಲಿ ಉತ್ತರ ನೀಡಿರುವ ಸಚಿವಾಲಯದ ಅಧೀನ ಕಾರ್ಯದರ್ಶಿಗಳು ಇಂತಹ ಯಾವುದೇ ಮಾಹಿತಿ ನಮ್ಮಲ್ಲಿ ಇಲ್ಲ ಎಂದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸುರೇಂದ್ರ ಉಗಾರೆಯವರು “ಗುಜರಾತ್ ಮತ್ತು ಕರ್ನಾಟಕ ಸರ್ಕಾರ ಮಕ್ಕಳಿಗೆ ಭಗವದ್ಗೀತೆ ಕಲಿಸುತ್ತೇವೆ ಎನ್ನುತ್ತಿವೆ. ಇದಕ್ಕೆ ನನ್ನ ತಕರಾರಿಲ್ಲ. ಆದರೆ ಮಕ್ಕಳಿಗೆ ಕಲಿಸಲು ಮುಂದಾಗಿರುವ ಭಗವದ್ಗೀತೆ ಯಾವುದು? ಸಂಸ್ಕೃತ ಭಾಷೆಯಲ್ಲಿದ್ದ ಅದನ್ನು ಹಿಂದಿ, ಇಂಗ್ಲಿಷ್, ಕನ್ನಡ ಭಾಷೆಗೆ ಅನುವಾದಿಸಿದವರು ಯಾರು? ಅದನ್ನು ಪ್ರಕಸಿದವರು ಯಾರು? ಇಂತಹ ಸಂಗತಿಗಳ ಕುರಿತು ಪಾರದರ್ಶಕತೆ ಇಲ್ಲದಿದ್ದರೆ ಮಕ್ಕಳಿಗೆ ತಪ್ಪು ಸಂದೇಶ ಹೋಗಬಹುದಲ್ಲವೇ” ಎಂದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಡ್ಡಾಯ ಎಂಬುದು ಸುಳ್ಳು ಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...