Homeಮುಖಪುಟಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ - ಮಾಹಿತಿಯೇ...

ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ ಕೇಂದ್ರ

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದಲೇ ಸುಮಾರು 216 ಮಂದಿ ಸಾವನ್ನಪ್ಪಿದ್ದಾರೆ.

- Advertisement -
- Advertisement -

ಎರಡು ದಿನಗಳಿಂದ ಸಂಸತ್‌ನ ಮುಂಗಾರು ಅಧಿವೇಶನ ನಡೆಯುತ್ತಿದ್ದು ವಲಸೆ ಕಾರ್ಮಿಕರ ಸಾವು, ಅವರು ಅನುಭವಿಸಿದ ಸಂಕಷ್ಟದ ಕುರಿತು ಚರ್ಚೆಯಾಗುತ್ತಿದೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿರುವ 10 ಮಂದಿ ಸಂಸದರು ಕೊರೊನ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವನ್ನಪಿದ್ದಾರೆ ಎಂಬ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಾರ್ಮಿಕ ಮತ್ತು ಉದ್ಯೋಗ ಖಾತ ಸಚಿವ ಸಂತೋಷ್ ಗಂಗವಾರ್ ಸಂಸತ್ ಅಧಿವೇಶನದಲ್ಲಿ ಉತ್ತರ ನೀಡಿ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಸಾವಿನ ಕುರಿತು ಯಾವುದೇ ಡಾಟಾ ನಿರ್ವಹಣೆ ಮಾಡಿಲ್ಲ ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಯ ರಾಜ್ಯ ಸಚಿವ ಗಂಗವಾರ್ ಉತ್ತರದಿಂದ ಕ್ರೋಧಗೊಂಡಿರುವ ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಬೇಕೆಂದೇ ವಲಸೆ ಕಾರ್ಮಿಕರ ಸಾವು ಪ್ರಕರಣಗಳನ್ನು ಮುಚ್ಚಡಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿವೆ. ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲೇ ಮನೆ ತಲುಪುವಂತಹ ಕ್ಷಿಷ್ಟಕರ ಸನ್ನಿವೇಶವನ್ನು ಸೃಷ್ಟಿಸಿತು. ಸಾರ್ವಜನಿಕ ಸಾರಿಗೆಯನ್ನು ನಿಲ್ಲಿಸಿದ ಪರಿಣಾಮ ವಲಸೆ ಕಾರ್ಮಿಕರು ಬಿರುಬಿಸಿಲಿನಲ್ಲೇ ತಮ್ಮ ಹಳ್ಳಿಗಳತ್ತ ಸಾಗಿದರು. ಹಲವರು ಮೃತಪಟ್ಟರು ಎಂದು ಟೀಕಿಸಿವೆ.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್

photo courtesy: Al Jazeera

ಇದಾದ ಬಹುದಿನಗಳ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಶ್ರಮಿಕ ರೈಲುಗಳು, ಬಸ್‌ಗಳು ಮತ್ತು ಖಾಸಗಿ ವಾಹನಗಳ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ನಗರ ಕೇಂದ್ರಗಳಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳತ್ತ ಸಾಗಲು ಮುಗಿಬೀಳುವಂತಹ ಸನ್ನಿವೇಶ ನಿರ್ಮಾಣವಾಯಿತು. ಇಲ್ಲಿಯೂ ಕೂಡ ವಲಸೆ ಕಾರ್ಮಿಕರು ತೊಂದರೆ ಅನುಭವಿಸಿದರು ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಸಚಿವರ ಹೇಳಿಕೆಯ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ವಲಸೆ ಕಾರ್ಮಿಕರ ಸಾವು ಪ್ರಕರಣಗಳ ಮಾಹಿತಿ ಸಂಗ್ರಹಿಸಿರುವ ದಿವೈರ್.ಕಾಂ ಕೊರೊನ ಅವಧಿಯಲ್ಲಿ 80 ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಕೊರೊನ ಸೋಂಕಿನಿಂದ ಬಳಲುತ್ತಿದ್ದ ವಲಸೆ ಕಾರ್ಮಿಕರು ವಿಶೇಷ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ದಿವೈರ್ ವರದಿ ಮಾಡಿದೆ.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ವಲಸೆ ಕಾರ್ಮಿಕರ ರಕ್ಷಣೆಯಲ್ಲಿ ಎಡವಿದ ಕೇಂದ್ರ; ಸುಳ್ಳುಸುದ್ಧಿಗಳ ಮೇಲೆ ಆರೋಪ!
PC: Prajavani

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಗೌರಿ ಲಂಕೇಶ್‌ – ನ್ಯಾಯಪಥ ವಾರಪತ್ರಿಕೆಯನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಲು https://bit.ly/3huPexp ಕ್ಲಿಕ್ಕಿಸಿ.

ನಾನುಗೌರಿ ವಾಟ್ಸಪ್‌ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...