Homeಮುಖಪುಟಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ - ಮಾಹಿತಿಯೇ...

ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ ಕೇಂದ್ರ

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದಲೇ ಸುಮಾರು 216 ಮಂದಿ ಸಾವನ್ನಪ್ಪಿದ್ದಾರೆ.

- Advertisement -
- Advertisement -

ಎರಡು ದಿನಗಳಿಂದ ಸಂಸತ್‌ನ ಮುಂಗಾರು ಅಧಿವೇಶನ ನಡೆಯುತ್ತಿದ್ದು ವಲಸೆ ಕಾರ್ಮಿಕರ ಸಾವು, ಅವರು ಅನುಭವಿಸಿದ ಸಂಕಷ್ಟದ ಕುರಿತು ಚರ್ಚೆಯಾಗುತ್ತಿದೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿರುವ 10 ಮಂದಿ ಸಂಸದರು ಕೊರೊನ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವನ್ನಪಿದ್ದಾರೆ ಎಂಬ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಾರ್ಮಿಕ ಮತ್ತು ಉದ್ಯೋಗ ಖಾತ ಸಚಿವ ಸಂತೋಷ್ ಗಂಗವಾರ್ ಸಂಸತ್ ಅಧಿವೇಶನದಲ್ಲಿ ಉತ್ತರ ನೀಡಿ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಸಾವಿನ ಕುರಿತು ಯಾವುದೇ ಡಾಟಾ ನಿರ್ವಹಣೆ ಮಾಡಿಲ್ಲ ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಯ ರಾಜ್ಯ ಸಚಿವ ಗಂಗವಾರ್ ಉತ್ತರದಿಂದ ಕ್ರೋಧಗೊಂಡಿರುವ ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಬೇಕೆಂದೇ ವಲಸೆ ಕಾರ್ಮಿಕರ ಸಾವು ಪ್ರಕರಣಗಳನ್ನು ಮುಚ್ಚಡಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿವೆ. ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲೇ ಮನೆ ತಲುಪುವಂತಹ ಕ್ಷಿಷ್ಟಕರ ಸನ್ನಿವೇಶವನ್ನು ಸೃಷ್ಟಿಸಿತು. ಸಾರ್ವಜನಿಕ ಸಾರಿಗೆಯನ್ನು ನಿಲ್ಲಿಸಿದ ಪರಿಣಾಮ ವಲಸೆ ಕಾರ್ಮಿಕರು ಬಿರುಬಿಸಿಲಿನಲ್ಲೇ ತಮ್ಮ ಹಳ್ಳಿಗಳತ್ತ ಸಾಗಿದರು. ಹಲವರು ಮೃತಪಟ್ಟರು ಎಂದು ಟೀಕಿಸಿವೆ.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್

photo courtesy: Al Jazeera

ಇದಾದ ಬಹುದಿನಗಳ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಶ್ರಮಿಕ ರೈಲುಗಳು, ಬಸ್‌ಗಳು ಮತ್ತು ಖಾಸಗಿ ವಾಹನಗಳ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ನಗರ ಕೇಂದ್ರಗಳಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳತ್ತ ಸಾಗಲು ಮುಗಿಬೀಳುವಂತಹ ಸನ್ನಿವೇಶ ನಿರ್ಮಾಣವಾಯಿತು. ಇಲ್ಲಿಯೂ ಕೂಡ ವಲಸೆ ಕಾರ್ಮಿಕರು ತೊಂದರೆ ಅನುಭವಿಸಿದರು ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಸಚಿವರ ಹೇಳಿಕೆಯ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ವಲಸೆ ಕಾರ್ಮಿಕರ ಸಾವು ಪ್ರಕರಣಗಳ ಮಾಹಿತಿ ಸಂಗ್ರಹಿಸಿರುವ ದಿವೈರ್.ಕಾಂ ಕೊರೊನ ಅವಧಿಯಲ್ಲಿ 80 ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಕೊರೊನ ಸೋಂಕಿನಿಂದ ಬಳಲುತ್ತಿದ್ದ ವಲಸೆ ಕಾರ್ಮಿಕರು ವಿಶೇಷ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ದಿವೈರ್ ವರದಿ ಮಾಡಿದೆ.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ವಲಸೆ ಕಾರ್ಮಿಕರ ರಕ್ಷಣೆಯಲ್ಲಿ ಎಡವಿದ ಕೇಂದ್ರ; ಸುಳ್ಳುಸುದ್ಧಿಗಳ ಮೇಲೆ ಆರೋಪ!
PC: Prajavani

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಗೌರಿ ಲಂಕೇಶ್‌ – ನ್ಯಾಯಪಥ ವಾರಪತ್ರಿಕೆಯನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಲು https://bit.ly/3huPexp ಕ್ಲಿಕ್ಕಿಸಿ.

ನಾನುಗೌರಿ ವಾಟ್ಸಪ್‌ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...