Homeಮುಖಪುಟಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ - ಮಾಹಿತಿಯೇ...

ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ ಕೇಂದ್ರ

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದಲೇ ಸುಮಾರು 216 ಮಂದಿ ಸಾವನ್ನಪ್ಪಿದ್ದಾರೆ.

- Advertisement -
- Advertisement -

ಎರಡು ದಿನಗಳಿಂದ ಸಂಸತ್‌ನ ಮುಂಗಾರು ಅಧಿವೇಶನ ನಡೆಯುತ್ತಿದ್ದು ವಲಸೆ ಕಾರ್ಮಿಕರ ಸಾವು, ಅವರು ಅನುಭವಿಸಿದ ಸಂಕಷ್ಟದ ಕುರಿತು ಚರ್ಚೆಯಾಗುತ್ತಿದೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿರುವ 10 ಮಂದಿ ಸಂಸದರು ಕೊರೊನ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವನ್ನಪಿದ್ದಾರೆ ಎಂಬ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಾರ್ಮಿಕ ಮತ್ತು ಉದ್ಯೋಗ ಖಾತ ಸಚಿವ ಸಂತೋಷ್ ಗಂಗವಾರ್ ಸಂಸತ್ ಅಧಿವೇಶನದಲ್ಲಿ ಉತ್ತರ ನೀಡಿ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಸಾವಿನ ಕುರಿತು ಯಾವುದೇ ಡಾಟಾ ನಿರ್ವಹಣೆ ಮಾಡಿಲ್ಲ ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಯ ರಾಜ್ಯ ಸಚಿವ ಗಂಗವಾರ್ ಉತ್ತರದಿಂದ ಕ್ರೋಧಗೊಂಡಿರುವ ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಬೇಕೆಂದೇ ವಲಸೆ ಕಾರ್ಮಿಕರ ಸಾವು ಪ್ರಕರಣಗಳನ್ನು ಮುಚ್ಚಡಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿವೆ. ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲೇ ಮನೆ ತಲುಪುವಂತಹ ಕ್ಷಿಷ್ಟಕರ ಸನ್ನಿವೇಶವನ್ನು ಸೃಷ್ಟಿಸಿತು. ಸಾರ್ವಜನಿಕ ಸಾರಿಗೆಯನ್ನು ನಿಲ್ಲಿಸಿದ ಪರಿಣಾಮ ವಲಸೆ ಕಾರ್ಮಿಕರು ಬಿರುಬಿಸಿಲಿನಲ್ಲೇ ತಮ್ಮ ಹಳ್ಳಿಗಳತ್ತ ಸಾಗಿದರು. ಹಲವರು ಮೃತಪಟ್ಟರು ಎಂದು ಟೀಕಿಸಿವೆ.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್

photo courtesy: Al Jazeera

ಇದಾದ ಬಹುದಿನಗಳ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಶ್ರಮಿಕ ರೈಲುಗಳು, ಬಸ್‌ಗಳು ಮತ್ತು ಖಾಸಗಿ ವಾಹನಗಳ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ನಗರ ಕೇಂದ್ರಗಳಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳತ್ತ ಸಾಗಲು ಮುಗಿಬೀಳುವಂತಹ ಸನ್ನಿವೇಶ ನಿರ್ಮಾಣವಾಯಿತು. ಇಲ್ಲಿಯೂ ಕೂಡ ವಲಸೆ ಕಾರ್ಮಿಕರು ತೊಂದರೆ ಅನುಭವಿಸಿದರು ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಸಚಿವರ ಹೇಳಿಕೆಯ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ವಲಸೆ ಕಾರ್ಮಿಕರ ಸಾವು ಪ್ರಕರಣಗಳ ಮಾಹಿತಿ ಸಂಗ್ರಹಿಸಿರುವ ದಿವೈರ್.ಕಾಂ ಕೊರೊನ ಅವಧಿಯಲ್ಲಿ 80 ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಕೊರೊನ ಸೋಂಕಿನಿಂದ ಬಳಲುತ್ತಿದ್ದ ವಲಸೆ ಕಾರ್ಮಿಕರು ವಿಶೇಷ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ದಿವೈರ್ ವರದಿ ಮಾಡಿದೆ.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ವಲಸೆ ಕಾರ್ಮಿಕರ ರಕ್ಷಣೆಯಲ್ಲಿ ಎಡವಿದ ಕೇಂದ್ರ; ಸುಳ್ಳುಸುದ್ಧಿಗಳ ಮೇಲೆ ಆರೋಪ!
PC: Prajavani

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಗೌರಿ ಲಂಕೇಶ್‌ – ನ್ಯಾಯಪಥ ವಾರಪತ್ರಿಕೆಯನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಲು https://bit.ly/3huPexp ಕ್ಲಿಕ್ಕಿಸಿ.

ನಾನುಗೌರಿ ವಾಟ್ಸಪ್‌ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....