Homeಮುಖಪುಟಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ - ಮಾಹಿತಿಯೇ...

ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ ಕೇಂದ್ರ

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದಲೇ ಸುಮಾರು 216 ಮಂದಿ ಸಾವನ್ನಪ್ಪಿದ್ದಾರೆ.

- Advertisement -
- Advertisement -

ಎರಡು ದಿನಗಳಿಂದ ಸಂಸತ್‌ನ ಮುಂಗಾರು ಅಧಿವೇಶನ ನಡೆಯುತ್ತಿದ್ದು ವಲಸೆ ಕಾರ್ಮಿಕರ ಸಾವು, ಅವರು ಅನುಭವಿಸಿದ ಸಂಕಷ್ಟದ ಕುರಿತು ಚರ್ಚೆಯಾಗುತ್ತಿದೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿರುವ 10 ಮಂದಿ ಸಂಸದರು ಕೊರೊನ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವನ್ನಪಿದ್ದಾರೆ ಎಂಬ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಾರ್ಮಿಕ ಮತ್ತು ಉದ್ಯೋಗ ಖಾತ ಸಚಿವ ಸಂತೋಷ್ ಗಂಗವಾರ್ ಸಂಸತ್ ಅಧಿವೇಶನದಲ್ಲಿ ಉತ್ತರ ನೀಡಿ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಸಾವಿನ ಕುರಿತು ಯಾವುದೇ ಡಾಟಾ ನಿರ್ವಹಣೆ ಮಾಡಿಲ್ಲ ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಯ ರಾಜ್ಯ ಸಚಿವ ಗಂಗವಾರ್ ಉತ್ತರದಿಂದ ಕ್ರೋಧಗೊಂಡಿರುವ ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಬೇಕೆಂದೇ ವಲಸೆ ಕಾರ್ಮಿಕರ ಸಾವು ಪ್ರಕರಣಗಳನ್ನು ಮುಚ್ಚಡಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿವೆ. ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲೇ ಮನೆ ತಲುಪುವಂತಹ ಕ್ಷಿಷ್ಟಕರ ಸನ್ನಿವೇಶವನ್ನು ಸೃಷ್ಟಿಸಿತು. ಸಾರ್ವಜನಿಕ ಸಾರಿಗೆಯನ್ನು ನಿಲ್ಲಿಸಿದ ಪರಿಣಾಮ ವಲಸೆ ಕಾರ್ಮಿಕರು ಬಿರುಬಿಸಿಲಿನಲ್ಲೇ ತಮ್ಮ ಹಳ್ಳಿಗಳತ್ತ ಸಾಗಿದರು. ಹಲವರು ಮೃತಪಟ್ಟರು ಎಂದು ಟೀಕಿಸಿವೆ.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್

photo courtesy: Al Jazeera

ಇದಾದ ಬಹುದಿನಗಳ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಶ್ರಮಿಕ ರೈಲುಗಳು, ಬಸ್‌ಗಳು ಮತ್ತು ಖಾಸಗಿ ವಾಹನಗಳ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ನಗರ ಕೇಂದ್ರಗಳಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳತ್ತ ಸಾಗಲು ಮುಗಿಬೀಳುವಂತಹ ಸನ್ನಿವೇಶ ನಿರ್ಮಾಣವಾಯಿತು. ಇಲ್ಲಿಯೂ ಕೂಡ ವಲಸೆ ಕಾರ್ಮಿಕರು ತೊಂದರೆ ಅನುಭವಿಸಿದರು ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಸಚಿವರ ಹೇಳಿಕೆಯ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ವಲಸೆ ಕಾರ್ಮಿಕರ ಸಾವು ಪ್ರಕರಣಗಳ ಮಾಹಿತಿ ಸಂಗ್ರಹಿಸಿರುವ ದಿವೈರ್.ಕಾಂ ಕೊರೊನ ಅವಧಿಯಲ್ಲಿ 80 ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಕೊರೊನ ಸೋಂಕಿನಿಂದ ಬಳಲುತ್ತಿದ್ದ ವಲಸೆ ಕಾರ್ಮಿಕರು ವಿಶೇಷ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ದಿವೈರ್ ವರದಿ ಮಾಡಿದೆ.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ವಲಸೆ ಕಾರ್ಮಿಕರ ರಕ್ಷಣೆಯಲ್ಲಿ ಎಡವಿದ ಕೇಂದ್ರ; ಸುಳ್ಳುಸುದ್ಧಿಗಳ ಮೇಲೆ ಆರೋಪ!
PC: Prajavani

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಗೌರಿ ಲಂಕೇಶ್‌ – ನ್ಯಾಯಪಥ ವಾರಪತ್ರಿಕೆಯನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಲು https://bit.ly/3huPexp ಕ್ಲಿಕ್ಕಿಸಿ.

ನಾನುಗೌರಿ ವಾಟ್ಸಪ್‌ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...