HomeUncategorizedಸೋಷಿಯಲ್ ಮೀಡಿಯಾಗಳ ಮಾನಿಟರಿಂಗ್‌ ಶುರು: ಬಳಕೆದಾರರೆ ಹುಷಾರ್‌!!

ಸೋಷಿಯಲ್ ಮೀಡಿಯಾಗಳ ಮಾನಿಟರಿಂಗ್‌ ಶುರು: ಬಳಕೆದಾರರೆ ಹುಷಾರ್‌!!

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿ, ಪ್ರಚೋದನಕಾರಿ ಭಾಷಣ, ಮಾನಹಾನಿ ಪೋಸ್ಟ್‌ಗಳು ದೇಶದ ಭದ್ರತೆಗೆ ಅಪಾಯಕಾರಿ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಾದ ವಾಟ್ಸ್ಯಾಪ್, ಫೇಸ್‍ಬುಕ್‍ಗಳಿಗೆ ಸೂಕ್ತ ನೀತಿ, ನಿಯಮಾವಳಿ ರೂಪಿಸಬೇಕು. ಹೀಗಾಗಿ ಜನವರಿ 15 ರೊಳಗೆ ಸೂಕ್ತ ನಿಯಮಾವಳಿಗಳನ್ನು ರೂಪಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಹೇಳಿದೆ.

ಇದು ಬಳಕೆದಾರರ ಮೇಲೆ ನೇರ ಪರಿಣಾಮ ಬೀರಲಿದ್ದು ಜನರ ಜುಟ್ಟು ಸರ್ಕಾರಗಳ ಕೈಗೆ ಹೋಗುವ ಅಪಾಯವಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈಗಾಗಲೇ ಬಾಂಬೆ, ಮದ್ರಾಸ್, ಮಧ್ಯಪ್ರದೇಶ ಹೈಕೋರ್ಟ್‍ಗಳಲ್ಲಿ ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಹೇರುವುದು ಮತ್ತು ಆಧಾರ್ ಕಡ್ಡಾಯಗೊಳಿಸುವ ಅರ್ಜಿ ವಿಚಾರಣೆ ನಡೆಯುತ್ತಿದೆ. ಈಗ ಎಲ್ಲಾ ಕೇಸ್‍ಗಳನ್ನು ವರ್ಗಾಯಿಸಿಕೊಂಡು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಜನವರಿ 15ರೊಳಗೆ ಎಲ್ಲಾ ರೂಪುರೇಷೆಯನ್ನು ಪೂರ್ಣಗೊಳಿಸಿ, ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸರ್ಕಾರ ಮತ್ತು ಕಂಪನಿಗಳಿಗೆ ತಿಳಿಸಿದೆ. ಅಲ್ಲದೇ ಜನವರಿ ಕೊನೆಯ ವಾರದಲ್ಲಿ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ.

ಇತ್ತ ಸೋಷಿಯಲ್ ಮೀಡಿಯಾ ಕಂಪನಿಗಳ ಪ್ರಕರಣವನ್ನು ಉನ್ನತ ನ್ಯಾಯಾಲಯಕ್ಕೆ ವರ್ಗಾಯಿಸುವ ಪ್ರಯತ್ನವನ್ನು ತಮಿಳುನಾಡು ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ವಿರೋಧಿಸಿದ್ದಾರೆ. ಸರ್ಕಾರ ಬಯಸುವ ಮಾಹಿತಿಯನ್ನು ಡಿಕ್ರಿಪ್ಟ್ ಮಾಡುವಂತೆ ಹೇಳಿದ್ದಾರೆ.

ಇನ್ನು ವಾಟ್ಸ್ಯಾಪ್ ಮತ್ತು ಫೇಸ್‍ಬುಕ್ ಕಂಪನಿಗಳು ‘ಮಾಹಿತಿಯನ್ನು ಡಿಕ್ರಿಪ್ಟ್ ಮಾಡಲು ಯಾವುದೇ ‘ಕೀ’ (key) ನಮ್ಮಲ್ಲಿಲ್ಲ. ಆದರೆ ಅಧಿಕಾರಿಗಳಿಗೆ ಸಹರಿಸುವುದಾಗಿ’ ತಿಳಿಸಿವೆ. ಸರ್ಕಾರಕ್ಕೆ ಕಂಪನಿಗಳ ಮಾಲೀಕರಿಂದ ಅಗತ್ಯ ಮಾಹಿತಿ ಪಡೆಯಲು ಕೀ ಬೇಕು. ಆದರೆ ಕಂಪನಿಗಳ ಮಾಲೀಕರು ಆ ಕೀ ತಮ್ಮ ಬಳಿಯಿಲ್ಲ ಎಂದು ಸುಪ್ರೀಂಕೋರ್ಟ್‍ನ ನ್ಯಾಯಾಧೀಶ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಇರುವ ದ್ವಿಸದಸ್ಯ ಪೀಠಕ್ಕೆ ತಿಳಿಸಿದ್ದಾರೆ.

ಒಟ್ಟಿನಲ್ಲಿ ಇನ್ನುಮುಂದೆ ಸಾಮಾಜಿಕ ಜಾಲತಾಣಗಳ ಬಳಕೆದಾರರ ಮೇಲೆ ಹದ್ದಿನ ಕಣ್ಣಿಡುವುದು ನಿಜವಾಗಿದೆ. ಹತ್ತಾರು ಕೋಟಿ ಜನ ಬಳಸುವ ಇದರ ಮೇಲೆ ನಿಗಾ ಇಡುವುದು ಕಷ್ಟಸಾಧ್ಯವಾದ ಕೆಲಸ. ಮುಂದೆ ಏನಾಗುತ್ತೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...