Homeಅಂತರಾಷ್ಟ್ರೀಯಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

ಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ದಂಗೆ ಉಂಟಾಗಿದ್ದು, ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಊಹಾಪೋಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದೆ.

- Advertisement -
- Advertisement -

ತನ್ನ ದೇಶದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿ ಆಡಳಿತ ನಡೆಸುತ್ತಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ದಂಗೆ ಉಂಟಾಗಿದ್ದು, ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಊಹಾಪೋಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಹರಿಬಿಡಲಾಗಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೃಹಬಂಧನದಲ್ಲಿದ್ದಾರೆ ಎಂದು ವದಂತಿ ಹಬ್ಬಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಲಾದ ಹಲವಾರು ಪೋಸ್ಟ್‌ಗಳ ಪ್ರಕಾರ, “ಕ್ಸಿ ಜಿನ್‌ಪಿಂಗ್ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಸಲಾಗಿದ್ದು, ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ” ಎಂದು ಪ್ರತಿಪಾದಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ ಆಡಳಿತಾರೂಢ ಚೀನೀ ಕಮ್ಯುನಿಸ್ಟ್ ಪಕ್ಷ ಅಥವಾ ಸರ್ಕಾರಿ ಮಾಧ್ಯಮಗಳು ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಯಾವುದೇ ಪ್ರತಿಷ್ಠಿತ ಅಂತರಾಷ್ಟ್ರೀಯ ಸುದ್ದಿವಾಹಿನಿಯು ಈ ಕುರಿತು ಅಧಿಕೃತವಾಗಿ ಸುದ್ದಿ ಮಾಡಿಲ್ಲ. ಆದಾಗ್ಯೂ, ಚೀನಾದ ವಿದೇಶಾಂಗ ಸಚಿವಾಲಯ ಮೌನವಹಿಸಿದೆ.

ಚೀನಾದ ಮಾಧ್ಯಮಗಳಿಂದಲೂ ಈ ವಿಷಯದ ಬಗ್ಗೆ ಯಾವುದೇ ವರದಿಗಳು ಆಗಿಲ್ಲ. ಈ ವದಂತಿಗಳು ಆಧಾರರಹಿತವಾಗಿವೆ. ಅವು ಕ್ಸಿ ಜಿನ್‌ಪಿಂಗ್‌ ವಿರೋಧಿ ಪಿತೂರಿಯ ಭಾಗವಾಗಿದೆ ಎಂದು ಹೇಳಲಾಗಿದೆ.

ಅಕ್ಟೋಬರ್ 16ರಂದು ಚೀನೀ ಕಮ್ಯುನಿಸ್ಟ್ ಪಕ್ಷದ 20 ನೇ ರಾಷ್ಟ್ರೀಯ ಕಾಂಗ್ರೆಸ್‌ ನಡೆಯುವ ಮುಂಚಿತವಾಗಿ ಈ ವದಂತಿಗಳನ್ನು ಹರಡಲಾಗಿದೆ. ಕ್ಸಿ ಅವರು ಐದು ವರ್ಷಗಳ ಅಧಿಕಾರವಧಿಯನ್ನು ಮೂರನೇ ಅವಧಿಗೆ ಮುಂದುವರಿಸುವ ನಿರೀಕ್ಷೆ ಇದೆ.

ಈ ವಾರದ ಆರಂಭದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ಸಿ ಅವರು ಜರುಗಿಸಿದ ಶಿಸ್ತುಕ್ರಮದ ಭಾಗವಾಗಿ ಇಬ್ಬರು ಮಾಜಿ ಮಂತ್ರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಯಿತು. ಆದರೆ ಶಿಕ್ಷೆಗೊಳಗಾದವರನ್ನು ಕ್ಸಿ ವಿರೋಧಿ ರಾಜಕೀಯ ಬಣದ ಭಾಗವಾಗಿ ಗುರುತಿಸಲಾಗಿದೆ.

ಸೆಪ್ಟೆಂಬರ್ 16 ರಂದು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಮರ್ಕಂಡ್ ಕಾಂಗ್ರೆಸ್ ಕೇಂದ್ರದಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಕೌನ್ಸಿಲ್ ಆಫ್ ಸ್ಟೇಟ್‌ನ 22 ನೇ ಸಭೆಯಲ್ಲಿ ಭಾಗವಹಿಸಿದ್ದರು. ಚೀನಾದ ಅಧ್ಯಕ್ಷರು ಅಧಿಕೃತ ಸಮಾರೋಪ ಸಮಾರಂಭಕ್ಕೂ ಮೊದಲು ಸಮರ್‌ಕಂಡ್‌ನಿಂದ ಹೊರಟು ಸೆಪ್ಟೆಂಬರ್ 16 ರಂದು ಬೀಜಿಂಗ್‌ನಲ್ಲಿ ಇಳಿಯುವಾಗ ಗೃಹಬಂಧನಕ್ಕೆ ಒಳಗಾಗಿದ್ದಾರೆ ಎಂದು ಅನಧಿಕೃತ ಟ್ವಿಟರ್‌ ಖಾತೆಗಳು ಸುದ್ದಿ ಹಬ್ಬಿಸಿವೆ.

ಇದನ್ನೂ ಓದಿರಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

ಬೀಜಿಂಗ್ ವಿಮಾನ ನಿಲ್ದಾಣವು 6,000 ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದೆ. ಹೈಸ್ಪೀಡ್ ರೈಲು ಮತ್ತು ಹೈಸ್ಪೀಡ್ ರೈಲುಗಳ ಟಿಕೆಟ್ ಮಾರಾಟವನ್ನೂ ನಿಲ್ಲಿಸಲಾಗಿದೆ ಎಂದು ಟ್ವಿಟರ್ ಪೋಸ್ಟ್‌ಗಳು ಸುದ್ದಿ ಹರಡಿವೆ.

ಕ್ಸಿ ಜಿನ್‌ಪಿಂಗ್ ಇತ್ತೀಚೆಗೆ ಉಜ್ಬೇಕಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಲವಾರು ಇತರ ರಾಷ್ಟ್ರಗಳ ನಾಯಕರೊಂದಿಗೆ ಮಾತುಕತೆ ನಡೆಸಿದರು. 2020ರಲ್ಲಿ ಗಡಿ ಘರ್ಷಣೆಗಳು ಏರ್ಪಟ್ಟು ಭಾರತ ಮತ್ತು ಚೀನಾ ನಡುವಿನ ಸಂಬಂಧ ಹದಗೆಟ್ಟ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕ್ಸಿ ಮುಖಾಮುಖಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...