Homeಅಂತರಾಷ್ಟ್ರೀಯಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

ಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ದಂಗೆ ಉಂಟಾಗಿದ್ದು, ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಊಹಾಪೋಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದೆ.

- Advertisement -
- Advertisement -

ತನ್ನ ದೇಶದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿ ಆಡಳಿತ ನಡೆಸುತ್ತಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ದಂಗೆ ಉಂಟಾಗಿದ್ದು, ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಊಹಾಪೋಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಹರಿಬಿಡಲಾಗಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೃಹಬಂಧನದಲ್ಲಿದ್ದಾರೆ ಎಂದು ವದಂತಿ ಹಬ್ಬಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಲಾದ ಹಲವಾರು ಪೋಸ್ಟ್‌ಗಳ ಪ್ರಕಾರ, “ಕ್ಸಿ ಜಿನ್‌ಪಿಂಗ್ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಸಲಾಗಿದ್ದು, ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ” ಎಂದು ಪ್ರತಿಪಾದಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ ಆಡಳಿತಾರೂಢ ಚೀನೀ ಕಮ್ಯುನಿಸ್ಟ್ ಪಕ್ಷ ಅಥವಾ ಸರ್ಕಾರಿ ಮಾಧ್ಯಮಗಳು ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಯಾವುದೇ ಪ್ರತಿಷ್ಠಿತ ಅಂತರಾಷ್ಟ್ರೀಯ ಸುದ್ದಿವಾಹಿನಿಯು ಈ ಕುರಿತು ಅಧಿಕೃತವಾಗಿ ಸುದ್ದಿ ಮಾಡಿಲ್ಲ. ಆದಾಗ್ಯೂ, ಚೀನಾದ ವಿದೇಶಾಂಗ ಸಚಿವಾಲಯ ಮೌನವಹಿಸಿದೆ.

ಚೀನಾದ ಮಾಧ್ಯಮಗಳಿಂದಲೂ ಈ ವಿಷಯದ ಬಗ್ಗೆ ಯಾವುದೇ ವರದಿಗಳು ಆಗಿಲ್ಲ. ಈ ವದಂತಿಗಳು ಆಧಾರರಹಿತವಾಗಿವೆ. ಅವು ಕ್ಸಿ ಜಿನ್‌ಪಿಂಗ್‌ ವಿರೋಧಿ ಪಿತೂರಿಯ ಭಾಗವಾಗಿದೆ ಎಂದು ಹೇಳಲಾಗಿದೆ.

ಅಕ್ಟೋಬರ್ 16ರಂದು ಚೀನೀ ಕಮ್ಯುನಿಸ್ಟ್ ಪಕ್ಷದ 20 ನೇ ರಾಷ್ಟ್ರೀಯ ಕಾಂಗ್ರೆಸ್‌ ನಡೆಯುವ ಮುಂಚಿತವಾಗಿ ಈ ವದಂತಿಗಳನ್ನು ಹರಡಲಾಗಿದೆ. ಕ್ಸಿ ಅವರು ಐದು ವರ್ಷಗಳ ಅಧಿಕಾರವಧಿಯನ್ನು ಮೂರನೇ ಅವಧಿಗೆ ಮುಂದುವರಿಸುವ ನಿರೀಕ್ಷೆ ಇದೆ.

ಈ ವಾರದ ಆರಂಭದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ಸಿ ಅವರು ಜರುಗಿಸಿದ ಶಿಸ್ತುಕ್ರಮದ ಭಾಗವಾಗಿ ಇಬ್ಬರು ಮಾಜಿ ಮಂತ್ರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಯಿತು. ಆದರೆ ಶಿಕ್ಷೆಗೊಳಗಾದವರನ್ನು ಕ್ಸಿ ವಿರೋಧಿ ರಾಜಕೀಯ ಬಣದ ಭಾಗವಾಗಿ ಗುರುತಿಸಲಾಗಿದೆ.

ಸೆಪ್ಟೆಂಬರ್ 16 ರಂದು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಮರ್ಕಂಡ್ ಕಾಂಗ್ರೆಸ್ ಕೇಂದ್ರದಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಕೌನ್ಸಿಲ್ ಆಫ್ ಸ್ಟೇಟ್‌ನ 22 ನೇ ಸಭೆಯಲ್ಲಿ ಭಾಗವಹಿಸಿದ್ದರು. ಚೀನಾದ ಅಧ್ಯಕ್ಷರು ಅಧಿಕೃತ ಸಮಾರೋಪ ಸಮಾರಂಭಕ್ಕೂ ಮೊದಲು ಸಮರ್‌ಕಂಡ್‌ನಿಂದ ಹೊರಟು ಸೆಪ್ಟೆಂಬರ್ 16 ರಂದು ಬೀಜಿಂಗ್‌ನಲ್ಲಿ ಇಳಿಯುವಾಗ ಗೃಹಬಂಧನಕ್ಕೆ ಒಳಗಾಗಿದ್ದಾರೆ ಎಂದು ಅನಧಿಕೃತ ಟ್ವಿಟರ್‌ ಖಾತೆಗಳು ಸುದ್ದಿ ಹಬ್ಬಿಸಿವೆ.

ಇದನ್ನೂ ಓದಿರಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

ಬೀಜಿಂಗ್ ವಿಮಾನ ನಿಲ್ದಾಣವು 6,000 ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದೆ. ಹೈಸ್ಪೀಡ್ ರೈಲು ಮತ್ತು ಹೈಸ್ಪೀಡ್ ರೈಲುಗಳ ಟಿಕೆಟ್ ಮಾರಾಟವನ್ನೂ ನಿಲ್ಲಿಸಲಾಗಿದೆ ಎಂದು ಟ್ವಿಟರ್ ಪೋಸ್ಟ್‌ಗಳು ಸುದ್ದಿ ಹರಡಿವೆ.

ಕ್ಸಿ ಜಿನ್‌ಪಿಂಗ್ ಇತ್ತೀಚೆಗೆ ಉಜ್ಬೇಕಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಲವಾರು ಇತರ ರಾಷ್ಟ್ರಗಳ ನಾಯಕರೊಂದಿಗೆ ಮಾತುಕತೆ ನಡೆಸಿದರು. 2020ರಲ್ಲಿ ಗಡಿ ಘರ್ಷಣೆಗಳು ಏರ್ಪಟ್ಟು ಭಾರತ ಮತ್ತು ಚೀನಾ ನಡುವಿನ ಸಂಬಂಧ ಹದಗೆಟ್ಟ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕ್ಸಿ ಮುಖಾಮುಖಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...