Homeಮುಖಪುಟಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ

ಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ

- Advertisement -
- Advertisement -

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತದ ರೂಪಾಯಿ ಸಾರ್ವಕಾಲಿಕ ಪತನ ಕಂಡಿದ್ದು, ಇದೇ ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 84 ರೂಪಾಯಿಗೆ ಕುಸಿದಿದೆ.

ಇದು, ಗುರುವಾರ ಮುಕ್ತಾಯಕ್ಕೆ ಇದ್ದ ಬೆಲೆಯಾದ 83.94 ರೂಪಾಯಿಗಳಿಗೆ ಹೋಲಿಸಿದರೆ 12 ಪೈಸೆಯಷ್ಟು ಕಡಿಮೆ. ಶುಕ್ರವಾರ 83.98 ರೂಪಾಯಿಯೊಂದಿಗೆ ದಿನದ ವಹಿವಾಟು ಅರಂಭವಾದರೆ, ಮಧ್ಯಂತರ ಅವಧಿಯಲ್ಲಿ ದಾಖಲೆ ಕನಿಷ್ಠ ಮಟ್ಟವನ್ನು ತಲುಪಿ 84.07 ರೂಪಾಯಿ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಈ ಮಿತಿಯನ್ನು ಎರಡು ತಿಂಗಳಿನಿಂದ ಸಮರ್ಥಿಸಿಕೊಳ್ಳುತ್ತಾ ಬಂದಿದೆ. ಕರೆನ್ಸಿ ಮಾರುಕಟ್ಟೆಯಲ್ಲಿ ತೀಕ್ಷ್ಣ ಪ್ರಮಾಣದ ಚಂಚಲತೆಯನ್ನು ತಡೆಯುವ ಉದ್ದೇಶದಿಂದ ಶುಕ್ರವಾರ ಆರ್‌ಬಿಐ ಮಧ್ಯಪ್ರವೇಶ ಮಾಡಿದೆ.

ಕಾರ್ಯತಂತ್ರದ ಭಾಗವಾಗಿ 84 ರೂಪಾಯಿ ಮಿತಿಯನ್ನು ದಾಟಲು ಆರ್‌ಬಿಐ ಅವಕಾಶ ನೀಡಿದೆ ಎನ್ನುವುದು ಕೆಲ ಡೀಲರ್‌ಗಳ ಭಾವನೆ. ಇರಾನ್-ಇಸ್ರೇಲ್ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಲ್ಲಿ ಹೆಚ್ಚಿನ ಚಂಚಲತೆ ಸೃಷ್ಟಿಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಈ ಅವಕಾಶ ಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಮೆರಿಕದ ಫೆಡರಲ್ ರಿಸರ್ವ್, ನವೆಂಬರ್‌ನಲ್ಲಿ 50 ಮೂಲ ಅಂಶಗಳಷ್ಟು ದರವನ್ನು ಕಡಿತಗೊಳಿಸುವ ಮಬ್ಬು ನಿರೀಕ್ಷೆಯ ಹಿನ್ನೆಲೆಯಲ್ಲಿ ಡಾಲರ್‌ಗಳ ಬಲವರ್ಧನೆಯು, ರೂಪಾಯಿ ದುರ್ಬಲತೆಗೆ ಮತ್ತಷ್ಟು ಕೊಡುಗೆ ನೀಡಿದೆ.

ರೂಪಾಯಿಯ ಮೌಲ್ಯವನ್ನು 84ರ ಮಟ್ಟ ಮೀರಲು ಅವಕಾಶ ನೀಡುವ ಮೂಲಕ ಮುಂದಿನ ವಾರದ ಸಂಭಾವ್ಯ ಚಂಚಲತೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಲು ಇದು ಅರ್‌ಬಿಐಗೆ ಅವಕಾಶ ಕಲ್ಪಿಸಲಿದೆ.

ಕಳೆದ ಎರಡು ತಿಂಗಳುಗಳಲ್ಲಿ ಇತರ ಏಷ್ಯನ್ ಕರೆನ್ಸಿಗಳು ಶೇಕಡ 5ರಷ್ಟು ಬಲವರ್ಧನೆ ಪಡೆದಿದ್ದರೆ, ಭಾರತದ ರೂಪಾಯಿ ಸ್ಥಿರತೆ ಕಾಪಾಡಿಕೊಂಡಿತ್ತು. ಇದು ಕರೆನ್ಸಿ ವ್ಯತ್ಯಯವನ್ನು ನಿರ್ವಹಿಸುವಲ್ಲಿ ಆರ್‌ಬಿಐ ಸಕ್ರಿಯ ಪಾತ್ರವನ್ನು ಬಿಂಬಿಸುತ್ತದೆ.

ಈಕ್ವಿಟಿ ಮಾರುಕಟ್ಟೆಗಳಲ್ಲಿನ ಏರಿಕೆಯಿಂದ ಉತ್ತೇಜಿತಗೊಂಡ ರೂಪಾಯಿ ಕೇವಲ ಎರಡು ವಾರಗಳ ಹಿಂದೆ 83.5 ಕ್ಕೆ ಬಲಗೊಂಡಿತ್ತು. ಏರುತ್ತಿರುವ ಕಚ್ಚಾ ಬೆಲೆಗಳು ಮತ್ತು ಭಾರತೀಯ ಷೇರುಗಳಿಂದ ವಿದೇಶಿ ಹೊರಹರಿವು ಕೆಳಮುಖ ಒತ್ತಡವನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...