Homeರಾಷ್ಟ್ರೀಯಡಾಲರ್‌ ಮುಂದೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

ಡಾಲರ್‌ ಮುಂದೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

- Advertisement -
- Advertisement -

ಅಮೆರಿಕನ್‌ ಡಾಲರ್‌ ಮುಂದೆ ಭಾರತದ ರುಪಾಯಿಯ ಮೌಲ್ಯವು ಸಾರ್ವಕಾಲಿಕ ಕುಸಿತ ದಾಖಲಾಗಿದ್ದು, ಡಾಲರ್‌ ಮುಂದೆ ರುಪಾಯಿ ಮೌಲ್ಯ 77.42 ಕ್ಕೆ ಇಳಿದಿದೆ. ದೇಶಗಳ ನಡುವೆ ಸೋಮವಾರ ನಡೆದ ವಹಿವಾಟಿನ ಆರಂಭದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 77.17 ಇತ್ತು, ಆದರೆ ನಂತರ ರುಪಾಯಿಯ ಮೌಲ್ಯ 52 ಪೈಸೆ ನಷ್ಟವಾಗುವುದರೊಂದಿಗೆ 77.42 ರೂಗೆ ಇಳಿದಿದೆ.

ಕಳೆದ ಮಾರ್ಚ್‌ನಲ್ಲಿ ರುಪಾಯಿ ಮೌಲ್ಯ 76.98 ಇಳಿಯುವುದರೊಂದಿಗೆ ಸಾರ್ವಕಾಲಿಕ ಕನಿಷ್ಠ ಮೌಲ್ಯ ದಾಖಲಾಗಿತ್ತು. ಅದರ ನಂತರ ಕಳೆದ ಶುಕ್ರವಾರ ಅಮೆರಿಕದ ಕರೆನ್ಸಿ ಎದುರು 55 ಪೈಸೆ ಕುಸಿದು ರುಪಾಯಿ ಮೌಲ್ಯ 76.90ಕ್ಕೆ ಇಳಿದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಾಯಕಾರಿ ಆಸ್ತಿಗಳ ಬೇಡಿಕೆ ಮತ್ತು ವಿದೇಶಿ ಹೂಡಿಕೆದಾರರು ದೇಶೀಯ ಷೇರುಗಳನ್ನು ಕೈಬಿಡುತ್ತಿರುವುದು ರೂಪಾಯಿ ಮೌಲ್ಯದ ಕುಸಿತದ ಹಿಂದಿನ ಕಾರಣ ಎಂದು ‘ಮಿಂಟ್‌’ ವರದಿ ಮಾಡಿದೆ. ಚೀನಾದ ಶಾಂಘೈನಲ್ಲಿ ಹೇರಲಾಗಿರುವ ಕೊರೊನಾ ಲಾಕ್‌ಡೌನ್‌ನಿಂದಾಗಿ ಏಷ್ಯಾದ ಷೇರುಗಳು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ, ಇದು ಕೂಡಾ ಜಾಗತಿಕ ಆರ್ಥಿಕ ಬೆಳವಣಿಗೆಯನ್ನು ಅಡ್ಡಿಪಡಿಸಲಿದೆ.

ಇದನ್ನೂ ಓದಿ: ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

“ದೃಢವಾದ ಡಾಲರ್ ಮತ್ತು ನಿರಾಶಾವಾದಿ ಜಾಗತಿಕ ಮಾರುಕಟ್ಟೆಗಳ ನಡುವೆ ರೂಪಾಯಿ ಇಂದು ಕುಸಿಯುವ ನಿರೀಕ್ಷೆಯಿದೆ. ಹೆಚ್ಚುತ್ತಿರುವ ಹಣದುಬ್ಬರ, ಜಗತ್ತಿನ ಪ್ರಮುಖ ರಾಷ್ಟ್ರಗಳಾದ್ಯಂತ ವಿತ್ತೀಯ ನೀತಿ ಬಿಗಿಗೊಳಿಸುವಿಕೆ, ಆರ್ಥಿಕ ಮಂದಗತಿ ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ ಬಗ್ಗೆ ಹೂಡಿಕೆದಾರರು ಚಿಂತಿತರಾಗಿರುವ ಕಾರಣ ಮಾರುಕಟ್ಟೆ ಘಾಸಿಗೊಂಡವು. ಇದಲ್ಲದೆ, ಏರುತ್ತಿರುವ ಕಚ್ಚಾ ತೈಲ ಬೆಲೆಗಳು ಭಾರತದ ವ್ಯಾಪಾರ ಮತ್ತು ಚಾಲ್ತಿ ಖಾತೆಗೆ ಹಾನಿಯುಂಟುಮಾಡುತ್ತದೆ ಎಂದು ಹೂಡಿಕೆದಾರರು ಭಾವಿಸುತ್ತಾರೆ” ಎಂದು ಬ್ರೋಕರೇಜ್ ಐಸಿಐಸಿಐ ಸೆಕ್ಯುರಿಟೀಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರ್ಥಶಾಸ್ತ್ರ ಗೊತ್ತಿಲ್ಲದವರಿಗೆ ಅಧಿಕಾರ ಕೊಟ್ಟರೆ ಹೀಗೇ ಆಗುವುದು…..

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...