HomeಮುಖಪುಟRupee one - Everyone: ಪ್ರತಿ ನಾಗರಿಕ-1 ರೂ. ಮತ್ತು 1 ತಿಂಗಳು ಅಭಿವ್ಯಕ್ತಿ ಸ್ವಾತಂತ್ರ್ಯದ...

Rupee one – Everyone: ಪ್ರತಿ ನಾಗರಿಕ-1 ರೂ. ಮತ್ತು 1 ತಿಂಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಆಂದೋಲನಕ್ಕೆ ಕರೆ

ಸೆಪ್ಟೆಂಬರ್ 2ರಿಂದ ಆರಂಭಿಸಿ ಅಕ್ಟೋಬರ್ 2ರವರೆಗೆ ದೇಶದಲ್ಲಿ 'ಆತ್ಮಸಾಕ್ಷಿಯ ಸ್ವಾತಂತ್ರ್ಯದ' ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಆಂದೋಲನವನ್ನು ಹಮ್ಮಿಕೊಳ್ಳಬೇಕು ಎಂದು ಭೂಷಣ್ ಮನವಿ ಮಾಡಿದ್ದಾರೆ.

- Advertisement -
- Advertisement -

‘ನಾನು ಮಾಡಿದ ಟ್ವೀಟ್‌ಗಳು ನಾಗರಿಕನ ಕರ್ತವ್ಯದ ಭಾಗವಾಗಿತ್ತು, ಆದರೆ ಸುಪ್ರೀಂಕೋರ್ಟು ದುರ್ಬಲವಾಗಬಾರದು ಎಂಬ ಕಾರಣಕ್ಕೆ ಅದನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ’ ಎಂದು ಘೋಷಿಸಿದ ಸುಪ್ರೀಂಕೋರ್ಟಿನ ನ್ಯಾಯವಾದಿ ಪ್ರಶಾಂತ್ ಭೂಷಣ್‌ರ ನಂತರ ಮಾತನಾಡಿದ ಅವರ ಸಹಯೋಗಿಗಳು ಪ್ರತಿ ನಾಗರಿಕ 1 ರೂ (Rupee one – everyone) ಎಂಬ ಹೊಸ ಆಂದೋಲನವನ್ನು ಘೋಷಿಸಿದ್ದಾರೆ.

ಸುಪ್ರೀಂಕೋರ್ಟು ಇಂದು ಬೆಳಿಗ್ಗೆ ಪ್ರಶಾಂತ್ ಭೂಷಣ್‌ರ ಟ್ವೀಟ್‌ಗಳ ವಿಚಾರದಿಂದ ನ್ಯಾಯಾಂಗ ನಿಂದನೆಯ ತೀರ್ಪಿನ ಭಾಗವಾಗಿ 1 ರೂ ದಂಡ ವಿಧಿಸಿತ್ತು.

ಆ ನಂತರ ಸಂಜೆ 4ಕ್ಕೆ ದೆಹಲಿಯ ಪ್ರೆಸ್‌ಕ್ಲಬ್‌ನ ಹೊರ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಶಾಂತ್ ಭೂಷಣ್ ಅವರು 1 ರೂ ದಂಡ ಕಟ್ಟುವುದಾಗಿ ಹೇಳಿದ್ದರು.

ಅವರ ಘೋಷಣೆಯ ನಂತರ ಸ್ವರಾಜ್ ಅಭಿಯಾನದ ಭಾಗವಾಗಿ ಯೋಗೇಂದ್ರ ಯಾದವ್ ಮತ್ತು ‘ನ್ಯಾಯಾಂಗದ ಉತ್ತರದಾಯಿತ್ವ ಮತ್ತು ಸುಧಾರಣೆಗಾಗಿನ ಸಮಿತಿ’ಯ ಭಾಗವಾಗಿ ಅಂಜಲಿ ಭಾರದ್ವಾಜ್ ಮಾತನಾಡಿದರು. ಪ್ರಶಾಂತ್ ಭೂಷಣ್ ಇವೆರಡರಲ್ಲೂ ಮುಖ್ಯಪಾತ್ರ ವಹಿಸಿದ್ದಾರೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಯೋಗೇಂದ್ರ ಯಾದವ್‌ ಅವರು ಈ ಸಂದರ್ಭದಲ್ಲಿ ದೇಶದ ಮುಂದೆ ಎರಡು ಮನವಿಗಳನ್ನು ಮುಂದಿಟ್ಟರು. ಒಂದು, ದೇಶದ ಪ್ರತಿಯೊಬ್ಬ ನಾಗರಿಕಳೂ/ನೂ ಒಂದೊಂದು ರೂಪಾಯಿ ನೀಡುವುದರ ಮೂಲಕ ಇಂತಹ ಹೋರಾಟಗಳನ್ನು ಮುಂದುವರೆಸುವುದಕ್ಕಾಗಿ ಒಂದು ನಿಧಿಯನ್ನು ಸ್ಥಾಪಿಸಬೇಕು. ಏಕೆಂದರೆ ಇದು ಪ್ರಶಾಂತ್ ಭೂಷಣ್ ಒಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಲ್ಲ. ದೇಶದಲ್ಲಿ ಜನಸಾಮಾನ್ಯರಿಂದ ಹಿಡಿದು ಚಿಂತಕರವರೆಗೆ ಹಲವರ ಪರಿಸ್ಥಿತಿ ಇದೇ ಆಗಿದೆ.

ಎರಡು, ಸೆಪ್ಟೆಂಬರ್ 2ರಿಂದ ಆರಂಭಿಸಿ ಅಕ್ಟೋಬರ್ 2ರವರೆಗೆ ದೇಶದಲ್ಲಿ ‘ಆತ್ಮಸಾಕ್ಷಿಯ ಸ್ವಾತಂತ್ರ್ಯದ’ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಒಂದು ಆಂದೋಲನವನ್ನು ಹಮ್ಮಿಕೊಳ್ಳಬೇಕು ಎಂಬ ಮನವಿಯನ್ನು ಅವರು ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಪ್ರಶಾಂತ್ ಭೂಷಣ್ ಅವರು. ತಾನು ಮೇಲ್ಮನವಿ ಅಥವಾ ತೀರ್ಪಿನ ಮರುಪರಿಶೀಲನೆಗಾಗಿನ ನನ್ನ ಹಕ್ಕನ್ನು ಕಾದಿರಿಸಿಕೊಂಡೇ ಪ್ರತಿಭಟನೆಯಾಗಿ 1 ರೂ ದಂಡ ಕಟ್ಟುತ್ತಿದ್ದೇನೆ ಎಂದು ಹೇಳಿದರು. ನೀವು 3 ತಿಂಗಳ ಜೈಲು ಅಥವಾ ಕೋರ್ಟ್’ನಿಂದ ಹೊರಹಾಕಿಸಿಕೊಳ್ಳುವುದರ ಬದಲಿಗೆ 1 ರೂ ಕಟ್ಟುವುದನ್ನೇಕೆ ಆಯ್ದುಕೊಂಡಿದ್ದೀರಿ ಎಂಬ ಇನ್ನೊಂದು ಪ್ರಶ್ನೆಗೂ ಅವರು ಉತ್ತರಿಸಿದರು. ಜೈಲಿಗೆ ಹೋಗಬೇಕೆಂಬ ತೀರ್ಪೇ ಬಂದರೆ, ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದ್ದೆ, ಅದರ ಅರ್ಥ ಜೈಲಿಗೆ ಹೋಗಲು ಬಯಸುತ್ತೇನೆ ಎಂದಲ್ಲ. ಸುಪ್ರೀಂಕೋರ್ಟು ಉಳಿದರೆ ಮಾತ್ರ ಗಣರಾಜ್ಯ ಉಳಿದೀತು ಎಂದು ಅವರು ತಮ್ಮ ಹೇಳಿಕೆಯಲ್ಲಿ ಹೇಳಿದ್ದನ್ನೂ ಇಲ್ಲಿ ಸ್ಮರಿಸಬಹುದು.

ಆಂದೋಲನದ ರೂಪುರೇಷೆಗಳ ಕುರಿತು ಯೋಗೇಂದ್ರ ಯಾದವ್‌ ಅವರು ವಿವರಗಳನ್ನು ನೀಡಿಲ್ಲ. ಆ ಕುರಿತು ನಾನುಗೌರಿ.ಕಾಂ ಅವರನ್ನು ಮಾತನಾಡಿಸಿ ಓದುಗರಿಗೆ ತಿಳಿಸಲಿದೆ.


ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...