HomeಮುಖಪುಟRupee one - Everyone: ಪ್ರತಿ ನಾಗರಿಕ-1 ರೂ. ಮತ್ತು 1 ತಿಂಗಳು ಅಭಿವ್ಯಕ್ತಿ ಸ್ವಾತಂತ್ರ್ಯದ...

Rupee one – Everyone: ಪ್ರತಿ ನಾಗರಿಕ-1 ರೂ. ಮತ್ತು 1 ತಿಂಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಆಂದೋಲನಕ್ಕೆ ಕರೆ

ಸೆಪ್ಟೆಂಬರ್ 2ರಿಂದ ಆರಂಭಿಸಿ ಅಕ್ಟೋಬರ್ 2ರವರೆಗೆ ದೇಶದಲ್ಲಿ 'ಆತ್ಮಸಾಕ್ಷಿಯ ಸ್ವಾತಂತ್ರ್ಯದ' ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಆಂದೋಲನವನ್ನು ಹಮ್ಮಿಕೊಳ್ಳಬೇಕು ಎಂದು ಭೂಷಣ್ ಮನವಿ ಮಾಡಿದ್ದಾರೆ.

- Advertisement -
- Advertisement -

‘ನಾನು ಮಾಡಿದ ಟ್ವೀಟ್‌ಗಳು ನಾಗರಿಕನ ಕರ್ತವ್ಯದ ಭಾಗವಾಗಿತ್ತು, ಆದರೆ ಸುಪ್ರೀಂಕೋರ್ಟು ದುರ್ಬಲವಾಗಬಾರದು ಎಂಬ ಕಾರಣಕ್ಕೆ ಅದನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ’ ಎಂದು ಘೋಷಿಸಿದ ಸುಪ್ರೀಂಕೋರ್ಟಿನ ನ್ಯಾಯವಾದಿ ಪ್ರಶಾಂತ್ ಭೂಷಣ್‌ರ ನಂತರ ಮಾತನಾಡಿದ ಅವರ ಸಹಯೋಗಿಗಳು ಪ್ರತಿ ನಾಗರಿಕ 1 ರೂ (Rupee one – everyone) ಎಂಬ ಹೊಸ ಆಂದೋಲನವನ್ನು ಘೋಷಿಸಿದ್ದಾರೆ.

ಸುಪ್ರೀಂಕೋರ್ಟು ಇಂದು ಬೆಳಿಗ್ಗೆ ಪ್ರಶಾಂತ್ ಭೂಷಣ್‌ರ ಟ್ವೀಟ್‌ಗಳ ವಿಚಾರದಿಂದ ನ್ಯಾಯಾಂಗ ನಿಂದನೆಯ ತೀರ್ಪಿನ ಭಾಗವಾಗಿ 1 ರೂ ದಂಡ ವಿಧಿಸಿತ್ತು.

ಆ ನಂತರ ಸಂಜೆ 4ಕ್ಕೆ ದೆಹಲಿಯ ಪ್ರೆಸ್‌ಕ್ಲಬ್‌ನ ಹೊರ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಶಾಂತ್ ಭೂಷಣ್ ಅವರು 1 ರೂ ದಂಡ ಕಟ್ಟುವುದಾಗಿ ಹೇಳಿದ್ದರು.

ಅವರ ಘೋಷಣೆಯ ನಂತರ ಸ್ವರಾಜ್ ಅಭಿಯಾನದ ಭಾಗವಾಗಿ ಯೋಗೇಂದ್ರ ಯಾದವ್ ಮತ್ತು ‘ನ್ಯಾಯಾಂಗದ ಉತ್ತರದಾಯಿತ್ವ ಮತ್ತು ಸುಧಾರಣೆಗಾಗಿನ ಸಮಿತಿ’ಯ ಭಾಗವಾಗಿ ಅಂಜಲಿ ಭಾರದ್ವಾಜ್ ಮಾತನಾಡಿದರು. ಪ್ರಶಾಂತ್ ಭೂಷಣ್ ಇವೆರಡರಲ್ಲೂ ಮುಖ್ಯಪಾತ್ರ ವಹಿಸಿದ್ದಾರೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಯೋಗೇಂದ್ರ ಯಾದವ್‌ ಅವರು ಈ ಸಂದರ್ಭದಲ್ಲಿ ದೇಶದ ಮುಂದೆ ಎರಡು ಮನವಿಗಳನ್ನು ಮುಂದಿಟ್ಟರು. ಒಂದು, ದೇಶದ ಪ್ರತಿಯೊಬ್ಬ ನಾಗರಿಕಳೂ/ನೂ ಒಂದೊಂದು ರೂಪಾಯಿ ನೀಡುವುದರ ಮೂಲಕ ಇಂತಹ ಹೋರಾಟಗಳನ್ನು ಮುಂದುವರೆಸುವುದಕ್ಕಾಗಿ ಒಂದು ನಿಧಿಯನ್ನು ಸ್ಥಾಪಿಸಬೇಕು. ಏಕೆಂದರೆ ಇದು ಪ್ರಶಾಂತ್ ಭೂಷಣ್ ಒಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಲ್ಲ. ದೇಶದಲ್ಲಿ ಜನಸಾಮಾನ್ಯರಿಂದ ಹಿಡಿದು ಚಿಂತಕರವರೆಗೆ ಹಲವರ ಪರಿಸ್ಥಿತಿ ಇದೇ ಆಗಿದೆ.

ಎರಡು, ಸೆಪ್ಟೆಂಬರ್ 2ರಿಂದ ಆರಂಭಿಸಿ ಅಕ್ಟೋಬರ್ 2ರವರೆಗೆ ದೇಶದಲ್ಲಿ ‘ಆತ್ಮಸಾಕ್ಷಿಯ ಸ್ವಾತಂತ್ರ್ಯದ’ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಒಂದು ಆಂದೋಲನವನ್ನು ಹಮ್ಮಿಕೊಳ್ಳಬೇಕು ಎಂಬ ಮನವಿಯನ್ನು ಅವರು ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಪ್ರಶಾಂತ್ ಭೂಷಣ್ ಅವರು. ತಾನು ಮೇಲ್ಮನವಿ ಅಥವಾ ತೀರ್ಪಿನ ಮರುಪರಿಶೀಲನೆಗಾಗಿನ ನನ್ನ ಹಕ್ಕನ್ನು ಕಾದಿರಿಸಿಕೊಂಡೇ ಪ್ರತಿಭಟನೆಯಾಗಿ 1 ರೂ ದಂಡ ಕಟ್ಟುತ್ತಿದ್ದೇನೆ ಎಂದು ಹೇಳಿದರು. ನೀವು 3 ತಿಂಗಳ ಜೈಲು ಅಥವಾ ಕೋರ್ಟ್’ನಿಂದ ಹೊರಹಾಕಿಸಿಕೊಳ್ಳುವುದರ ಬದಲಿಗೆ 1 ರೂ ಕಟ್ಟುವುದನ್ನೇಕೆ ಆಯ್ದುಕೊಂಡಿದ್ದೀರಿ ಎಂಬ ಇನ್ನೊಂದು ಪ್ರಶ್ನೆಗೂ ಅವರು ಉತ್ತರಿಸಿದರು. ಜೈಲಿಗೆ ಹೋಗಬೇಕೆಂಬ ತೀರ್ಪೇ ಬಂದರೆ, ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದ್ದೆ, ಅದರ ಅರ್ಥ ಜೈಲಿಗೆ ಹೋಗಲು ಬಯಸುತ್ತೇನೆ ಎಂದಲ್ಲ. ಸುಪ್ರೀಂಕೋರ್ಟು ಉಳಿದರೆ ಮಾತ್ರ ಗಣರಾಜ್ಯ ಉಳಿದೀತು ಎಂದು ಅವರು ತಮ್ಮ ಹೇಳಿಕೆಯಲ್ಲಿ ಹೇಳಿದ್ದನ್ನೂ ಇಲ್ಲಿ ಸ್ಮರಿಸಬಹುದು.

ಆಂದೋಲನದ ರೂಪುರೇಷೆಗಳ ಕುರಿತು ಯೋಗೇಂದ್ರ ಯಾದವ್‌ ಅವರು ವಿವರಗಳನ್ನು ನೀಡಿಲ್ಲ. ಆ ಕುರಿತು ನಾನುಗೌರಿ.ಕಾಂ ಅವರನ್ನು ಮಾತನಾಡಿಸಿ ಓದುಗರಿಗೆ ತಿಳಿಸಲಿದೆ.


ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...