Homeಕರ್ನಾಟಕಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ಪೂರೈಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್‌

ಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ಪೂರೈಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್‌

- Advertisement -
- Advertisement -

ಸರ್ಕಾರಿ ಕೋಟಾದಡಿ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದ (2022 ಜುಲೈ 22ಕ್ಕೆ ಅನ್ವಯವಾಗುವಂತೆ) ಎಂಬಿಬಿಎಸ್‌ ವಿದ್ಯಾರ್ಥಿಗಳು ಪದವಿಯ ಬಳಿಕ ಕಡ್ಡಾಯ ಗ್ರಾಮೀಣ ಸೇವೆ ಅಥವಾ ಬಾಂಡ್‌ಗಳ ಅನುಷ್ಠಾನದ ಕಠಿಣ ಷರತ್ತಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ನೀಡಿದೆ.

ಬೆಂಗಳೂರಿನ ಡಾ. ಶರಣ್ಯಾ ಮೋಹನ್‌ ಸೇರಿದಂತೆ ರಾಜಸ್ಥಾನ, ಹರಿಯಾಣ, ಕೇರಳ, ಗುಜರಾತ್‌, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚೆನ್ನೈನ ವಿವಿಧ ಭಾಗಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.

“ಜಗತ್ತಿನ ಯಾವುದೇ ಭಾಗದಲ್ಲಿ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡುವುದು ವೈದ್ಯಕೀಯ ವೃತ್ತಿಯಲ್ಲಿ ಹೊಸದೇನಲ್ಲ. ಹೆಸರು ಬದಲಾಗಬಹುದು, ವಿಚಾರ ಒಂದೇ. ವೈದ್ಯರು ಸಮುದಾಯ/ಗ್ರಾಮೀಣ ಸೇವೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಿರುವ ದೇಶಗಳಿಗೆ ಹಲವು ಶಿಫಾರಸ್ಸುಗಳನ್ನು ಮಾಡಿದೆ” ಎಂದು ನ್ಯಾಯಾಲಯ ತಿಳಿಸಿದೆ.

“ವೈದ್ಯರನ್ನು ತಲುಪಲು ಸಾಧ್ಯವಾಗದ ಸ್ಥಳಗಳಲ್ಲಿ ವಾಸಿಸುವ ಆದಿವಾಸಿಗಳು, ಬಡವರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು ಸಾರ್ವಜನಿಕ ಆರೋಗ್ಯ ಯೋಜನೆಯ ಭಾಗವಾಗಬೇಕು. ವೈದ್ಯಕೀಯ ಪದವೀಧರರು ಸ್ವಯಂಪ್ರೇರಿತವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಲು ತಮ್ಮನ್ನು ತೊಡಗಿಸಕೊಳ್ಳುತ್ತಾರೆ ಎಂಬ ಕನಸು ಒಂದು ದಿನ ಸಾಕಾರವಾಗಬಹುದು. ಈ ಕನಸು ಆದಷ್ಟು ಬೇಗ ಸಾಕಾರಗೊಳ್ಳುವ ಮೂಲಕ ಸಮಸಮಾಜ ನಿರ್ಮಾಣವಾಗಬೇಕು” ಎಂದು ನ್ಯಾಯಾಲಯ ಹೇಳಿದೆ.

“2012ರ ಜುಲೈ 17ರ ಅಧಿಸೂಚನೆಯಲ್ಲಿ ತಿದ್ದುಪಡಿ ನಿಯಮಗಳು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದಾಗಿನಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ. ನಿಯಮಗಳು ರೂಪಿಸಿದ ಹತ್ತು ವರ್ಷಗಳ ಬಳಿಕ ಅಂದರೆ 2022ರ ಜುಲೈ 22ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಹತ್ತು ವರ್ಷಗಳಿಂದ ಗಾಢ ನಿದ್ರೆಯಲ್ಲಿತ್ತು ಎಂದೆನಿಸುತ್ತದೆ” ಎಂದು ನ್ಯಾಯಾಲಯ ಕುಟುಕಿದೆ.

ತಿದ್ದುಪಡಿ ನಿಯಮಗಳನ್ನು 2022ರ ಜುಲೈ 27ಕ್ಕೆ ಗೆಜೆಟ್‌ನಲ್ಲಿ ಪ್ರಕಟಿಸಿರುವುದರಿಂದ, ಅದಕ್ಕೂ ಮುಂಚಿನ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗದು ಎಂದು ಪೀಠ ಸ್ಪಷ್ಟಪಡಿಸಿದೆ. ಈ ಮೂಲಕ ನ್ಯಾಯಾಲಯದ ಮೆಟ್ಟಿಲೇರಿದ್ದ ಗೆಜೆಟ್‌ ಪ್ರಕಟಣೆಯ ಪೂರ್ವದ 447 ವಿದ್ಯಾರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯ ನಿಯಮಾವಳಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದು, ಅವರಿಗೆ ಪರಿಹಾರ ಕಲ್ಪಿಸಿದೆ.

ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರು ಉನ್ನತಾಧಿಕಾರಿಗಳ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...