Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

ರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

- Advertisement -
- Advertisement -

ಪರಸ್ಪರ ಸಂಘರ್ಷದಲ್ಲಿ ತೊಡಗಿರುವ ರಷ್ಯಾ ಮತ್ತು ಉಕ್ರೇನ್ ರಾಷ್ಟ್ರಗಳು ತಲಾ 1000 ಯುದ್ದ ಕೈದಿಗಳ ವಿನಿಮಯ ಪ್ರಕ್ರಿಯೆಯನ್ನು ಭಾನುವಾರ (ಮೇ.25) ಪೂರ್ಣಗೊಳಿಸಿವೆ. ಈ ವಿಚಾರವನ್ನು ರಷ್ಯಾದ ರಕ್ಷಣಾ ಸಚಿವಾಲಯ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಚಿತಪಡಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆಯುತ್ತಿರುವ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯುದ್ಧ ಕೈದಿಗಳನ್ನು ವಿನಿಮಯ ಮಾಡಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಮೂರು ದಿನಗಳ ಕೈದಿಗಳ ವಿನಿಮಯ ಪ್ರಕ್ರಿಯೆಯು ಶುಕ್ರವಾರ (ಮೇ.23) ಪ್ರಾರಂಭಗೊಂಡಿತ್ತು. ಬಳಿಕ ಹಂತ ಹಂತವಾಗಿ ಯುದ್ದ ಕೈದಿಗಳ ವಿನಿಮಯ ನಡೆದಿದೆ. ಭಾನುವಾರ, ಎರಡೂ ಕಡೆಯವರು 303 ಕೈದಿಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

“ಇಂದು, ನಮ್ಮ ಸಶಸ್ತ್ರ ಪಡೆಗಳು, ರಾಷ್ಟ್ರೀಯ ಗಾರ್ಡ್, ರಾಜ್ಯ ಗಡಿ ಕಾವಲು ಸೇವೆ ಮತ್ತು ರಾಜ್ಯ ವಿಶೇಷ ಸಾರಿಗೆ ಸೇವೆಯ ಯೋಧರು ಮನೆಗೆ ಮರಳುತ್ತಿದ್ದಾರೆ” ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಟೆಲಿಗ್ರಾಮ್ ಅಪ್ಲಿಕೇಶನ್‌ನಲ್ಲಿ ಬರೆದುಕೊಂಡಿದ್ದಾರೆ.

ಮೇ 16ರಂದು ಉಭಯ ರಾಷ್ಟ್ರಗಳ ನಡುವೆ ನಡೆದ ಮೊದಲ ನೇರ ಮಾತುಕತೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಆದರೆ, ಯುದ್ಧ ಕೈದಿಗಳ ವಿನಿಮಯಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಅದರಂತೆ ಕೈದಿಗಳ ಹಸ್ತಾಂತರ ನಡೆದಿದೆ.

ಉಕ್ರೇನ್, ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ಶಾಂತಿ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಪೂರ್ವಭಾವಿ ಷರತ್ತುಗಳಿಲ್ಲದೆ 30 ದಿನಗಳ ಕಾಲ ದಾಳಿಯನ್ನು ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಿವೆ.

ಎರಡನೆಯ ಮಹಾಯುದ್ಧದ ನಂತರದ ಯುರೋಪಿನ ಅತ್ಯಂತ ಮಾರಕ ಸಂಘರ್ಷದಲ್ಲಿ ಎರಡೂ ಕಡೆಯ ಲಕ್ಷಾಂತರ ಸೈನಿಕರು ಗಾಯಗೊಂಡಿದ್ದಾರೆ ಅಥವಾ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ. ಎರಡೂ ಕಡೆಯವರು ಇದುವರೆಗೆ ನಿಖರವಾದ ಸಾವುನೋವುಗಳ ಅಂಕಿ ಅಂಶಗಳನ್ನು ಪ್ರಕಟಿಸಿಲ್ಲ.

ರಷ್ಯಾ ಪಡೆಗಳು ಉಕ್ರೇನಿಯನ್ ನಗರಗಳಿಗೆ ಮುತ್ತಿಗೆ ಹಾಕಿ ಬಾಂಬ್ ದಾಳಿ ನಡೆಸಿದ್ದರಿಂದ ಹತ್ತಾರು ಸಾವಿರ ಉಕ್ರೇನಿಯನ್ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ.

ಕೈದಿಗಳ ವಿನಿಮಯ ಪೂರ್ಣಗೊಂಡ ನಂತರ, ದೀರ್ಘಾವಧಿಯ ಶಾಂತಿ ಒಪ್ಪಂದಕ್ಕಾಗಿ ಕರಡು ಪ್ರಸ್ತಾವನೆಯನ್ನು ಉಕ್ರೇನ್‌ಗೆ ಸಲ್ಲಿಸಲು ರಷ್ಯಾ ಸಿದ್ಧವಾಗಲಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಪಡೆಗಳು ರಾಜಧಾನಿ ಕೈವ್ ಸೇರಿದಂತೆ ಉಕ್ರೇನಿಯನ್ ನಗರಗಳ ಮೇಲೆ ಶನಿವಾರ (ಮೇ.24) ರಾತ್ರಿಯಿಡೀ 367 ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ನಡೆಸಿದ್ದು, ಇದುವರೆಗಿನ ಸಂಘರ್ಷದ ಅತಿದೊಡ್ಡ ವೈಮಾನಿಕ ದಾಳಿಯಾಗಿದೆ. ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.

ತಮ್ಮ ವಾಯು ರಕ್ಷಣಾ ಘಟಕಗಳು ನಾಲ್ಕು ಗಂಟೆಗಳ ಅವಧಿಯಲ್ಲಿ 95 ಉಕ್ರೇನಿಯನ್ ಡ್ರೋನ್‌ಗಳನ್ನು ತಡೆಹಿಡಿದಿವೆ ಅಥವಾ ನಾಶಪಡಿಸಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಮಾಸ್ಕೋ ನಗರವನ್ನು ಗುರಿಯಾಗಿಸಿದ್ದ 12 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಭಾನುವಾರ ಹೇಳಿದ್ದಾರೆ.

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...