Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

ರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

- Advertisement -
- Advertisement -

ಪರಸ್ಪರ ಸಂಘರ್ಷದಲ್ಲಿ ತೊಡಗಿರುವ ರಷ್ಯಾ ಮತ್ತು ಉಕ್ರೇನ್ ರಾಷ್ಟ್ರಗಳು ತಲಾ 1000 ಯುದ್ದ ಕೈದಿಗಳ ವಿನಿಮಯ ಪ್ರಕ್ರಿಯೆಯನ್ನು ಭಾನುವಾರ (ಮೇ.25) ಪೂರ್ಣಗೊಳಿಸಿವೆ. ಈ ವಿಚಾರವನ್ನು ರಷ್ಯಾದ ರಕ್ಷಣಾ ಸಚಿವಾಲಯ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಚಿತಪಡಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆಯುತ್ತಿರುವ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯುದ್ಧ ಕೈದಿಗಳನ್ನು ವಿನಿಮಯ ಮಾಡಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಮೂರು ದಿನಗಳ ಕೈದಿಗಳ ವಿನಿಮಯ ಪ್ರಕ್ರಿಯೆಯು ಶುಕ್ರವಾರ (ಮೇ.23) ಪ್ರಾರಂಭಗೊಂಡಿತ್ತು. ಬಳಿಕ ಹಂತ ಹಂತವಾಗಿ ಯುದ್ದ ಕೈದಿಗಳ ವಿನಿಮಯ ನಡೆದಿದೆ. ಭಾನುವಾರ, ಎರಡೂ ಕಡೆಯವರು 303 ಕೈದಿಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

“ಇಂದು, ನಮ್ಮ ಸಶಸ್ತ್ರ ಪಡೆಗಳು, ರಾಷ್ಟ್ರೀಯ ಗಾರ್ಡ್, ರಾಜ್ಯ ಗಡಿ ಕಾವಲು ಸೇವೆ ಮತ್ತು ರಾಜ್ಯ ವಿಶೇಷ ಸಾರಿಗೆ ಸೇವೆಯ ಯೋಧರು ಮನೆಗೆ ಮರಳುತ್ತಿದ್ದಾರೆ” ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಟೆಲಿಗ್ರಾಮ್ ಅಪ್ಲಿಕೇಶನ್‌ನಲ್ಲಿ ಬರೆದುಕೊಂಡಿದ್ದಾರೆ.

ಮೇ 16ರಂದು ಉಭಯ ರಾಷ್ಟ್ರಗಳ ನಡುವೆ ನಡೆದ ಮೊದಲ ನೇರ ಮಾತುಕತೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಆದರೆ, ಯುದ್ಧ ಕೈದಿಗಳ ವಿನಿಮಯಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಅದರಂತೆ ಕೈದಿಗಳ ಹಸ್ತಾಂತರ ನಡೆದಿದೆ.

ಉಕ್ರೇನ್, ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ಶಾಂತಿ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಪೂರ್ವಭಾವಿ ಷರತ್ತುಗಳಿಲ್ಲದೆ 30 ದಿನಗಳ ಕಾಲ ದಾಳಿಯನ್ನು ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಿವೆ.

ಎರಡನೆಯ ಮಹಾಯುದ್ಧದ ನಂತರದ ಯುರೋಪಿನ ಅತ್ಯಂತ ಮಾರಕ ಸಂಘರ್ಷದಲ್ಲಿ ಎರಡೂ ಕಡೆಯ ಲಕ್ಷಾಂತರ ಸೈನಿಕರು ಗಾಯಗೊಂಡಿದ್ದಾರೆ ಅಥವಾ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ. ಎರಡೂ ಕಡೆಯವರು ಇದುವರೆಗೆ ನಿಖರವಾದ ಸಾವುನೋವುಗಳ ಅಂಕಿ ಅಂಶಗಳನ್ನು ಪ್ರಕಟಿಸಿಲ್ಲ.

ರಷ್ಯಾ ಪಡೆಗಳು ಉಕ್ರೇನಿಯನ್ ನಗರಗಳಿಗೆ ಮುತ್ತಿಗೆ ಹಾಕಿ ಬಾಂಬ್ ದಾಳಿ ನಡೆಸಿದ್ದರಿಂದ ಹತ್ತಾರು ಸಾವಿರ ಉಕ್ರೇನಿಯನ್ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ.

ಕೈದಿಗಳ ವಿನಿಮಯ ಪೂರ್ಣಗೊಂಡ ನಂತರ, ದೀರ್ಘಾವಧಿಯ ಶಾಂತಿ ಒಪ್ಪಂದಕ್ಕಾಗಿ ಕರಡು ಪ್ರಸ್ತಾವನೆಯನ್ನು ಉಕ್ರೇನ್‌ಗೆ ಸಲ್ಲಿಸಲು ರಷ್ಯಾ ಸಿದ್ಧವಾಗಲಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಪಡೆಗಳು ರಾಜಧಾನಿ ಕೈವ್ ಸೇರಿದಂತೆ ಉಕ್ರೇನಿಯನ್ ನಗರಗಳ ಮೇಲೆ ಶನಿವಾರ (ಮೇ.24) ರಾತ್ರಿಯಿಡೀ 367 ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ನಡೆಸಿದ್ದು, ಇದುವರೆಗಿನ ಸಂಘರ್ಷದ ಅತಿದೊಡ್ಡ ವೈಮಾನಿಕ ದಾಳಿಯಾಗಿದೆ. ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.

ತಮ್ಮ ವಾಯು ರಕ್ಷಣಾ ಘಟಕಗಳು ನಾಲ್ಕು ಗಂಟೆಗಳ ಅವಧಿಯಲ್ಲಿ 95 ಉಕ್ರೇನಿಯನ್ ಡ್ರೋನ್‌ಗಳನ್ನು ತಡೆಹಿಡಿದಿವೆ ಅಥವಾ ನಾಶಪಡಿಸಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಮಾಸ್ಕೋ ನಗರವನ್ನು ಗುರಿಯಾಗಿಸಿದ್ದ 12 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಭಾನುವಾರ ಹೇಳಿದ್ದಾರೆ.

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...