Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

ರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

- Advertisement -
- Advertisement -

ಪರಸ್ಪರ ಸಂಘರ್ಷದಲ್ಲಿ ತೊಡಗಿರುವ ರಷ್ಯಾ ಮತ್ತು ಉಕ್ರೇನ್ ರಾಷ್ಟ್ರಗಳು ತಲಾ 1000 ಯುದ್ದ ಕೈದಿಗಳ ವಿನಿಮಯ ಪ್ರಕ್ರಿಯೆಯನ್ನು ಭಾನುವಾರ (ಮೇ.25) ಪೂರ್ಣಗೊಳಿಸಿವೆ. ಈ ವಿಚಾರವನ್ನು ರಷ್ಯಾದ ರಕ್ಷಣಾ ಸಚಿವಾಲಯ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಚಿತಪಡಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆಯುತ್ತಿರುವ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯುದ್ಧ ಕೈದಿಗಳನ್ನು ವಿನಿಮಯ ಮಾಡಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಮೂರು ದಿನಗಳ ಕೈದಿಗಳ ವಿನಿಮಯ ಪ್ರಕ್ರಿಯೆಯು ಶುಕ್ರವಾರ (ಮೇ.23) ಪ್ರಾರಂಭಗೊಂಡಿತ್ತು. ಬಳಿಕ ಹಂತ ಹಂತವಾಗಿ ಯುದ್ದ ಕೈದಿಗಳ ವಿನಿಮಯ ನಡೆದಿದೆ. ಭಾನುವಾರ, ಎರಡೂ ಕಡೆಯವರು 303 ಕೈದಿಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

“ಇಂದು, ನಮ್ಮ ಸಶಸ್ತ್ರ ಪಡೆಗಳು, ರಾಷ್ಟ್ರೀಯ ಗಾರ್ಡ್, ರಾಜ್ಯ ಗಡಿ ಕಾವಲು ಸೇವೆ ಮತ್ತು ರಾಜ್ಯ ವಿಶೇಷ ಸಾರಿಗೆ ಸೇವೆಯ ಯೋಧರು ಮನೆಗೆ ಮರಳುತ್ತಿದ್ದಾರೆ” ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಟೆಲಿಗ್ರಾಮ್ ಅಪ್ಲಿಕೇಶನ್‌ನಲ್ಲಿ ಬರೆದುಕೊಂಡಿದ್ದಾರೆ.

ಮೇ 16ರಂದು ಉಭಯ ರಾಷ್ಟ್ರಗಳ ನಡುವೆ ನಡೆದ ಮೊದಲ ನೇರ ಮಾತುಕತೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಆದರೆ, ಯುದ್ಧ ಕೈದಿಗಳ ವಿನಿಮಯಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಅದರಂತೆ ಕೈದಿಗಳ ಹಸ್ತಾಂತರ ನಡೆದಿದೆ.

ಉಕ್ರೇನ್, ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ಶಾಂತಿ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಪೂರ್ವಭಾವಿ ಷರತ್ತುಗಳಿಲ್ಲದೆ 30 ದಿನಗಳ ಕಾಲ ದಾಳಿಯನ್ನು ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಿವೆ.

ಎರಡನೆಯ ಮಹಾಯುದ್ಧದ ನಂತರದ ಯುರೋಪಿನ ಅತ್ಯಂತ ಮಾರಕ ಸಂಘರ್ಷದಲ್ಲಿ ಎರಡೂ ಕಡೆಯ ಲಕ್ಷಾಂತರ ಸೈನಿಕರು ಗಾಯಗೊಂಡಿದ್ದಾರೆ ಅಥವಾ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ. ಎರಡೂ ಕಡೆಯವರು ಇದುವರೆಗೆ ನಿಖರವಾದ ಸಾವುನೋವುಗಳ ಅಂಕಿ ಅಂಶಗಳನ್ನು ಪ್ರಕಟಿಸಿಲ್ಲ.

ರಷ್ಯಾ ಪಡೆಗಳು ಉಕ್ರೇನಿಯನ್ ನಗರಗಳಿಗೆ ಮುತ್ತಿಗೆ ಹಾಕಿ ಬಾಂಬ್ ದಾಳಿ ನಡೆಸಿದ್ದರಿಂದ ಹತ್ತಾರು ಸಾವಿರ ಉಕ್ರೇನಿಯನ್ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ.

ಕೈದಿಗಳ ವಿನಿಮಯ ಪೂರ್ಣಗೊಂಡ ನಂತರ, ದೀರ್ಘಾವಧಿಯ ಶಾಂತಿ ಒಪ್ಪಂದಕ್ಕಾಗಿ ಕರಡು ಪ್ರಸ್ತಾವನೆಯನ್ನು ಉಕ್ರೇನ್‌ಗೆ ಸಲ್ಲಿಸಲು ರಷ್ಯಾ ಸಿದ್ಧವಾಗಲಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಪಡೆಗಳು ರಾಜಧಾನಿ ಕೈವ್ ಸೇರಿದಂತೆ ಉಕ್ರೇನಿಯನ್ ನಗರಗಳ ಮೇಲೆ ಶನಿವಾರ (ಮೇ.24) ರಾತ್ರಿಯಿಡೀ 367 ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ನಡೆಸಿದ್ದು, ಇದುವರೆಗಿನ ಸಂಘರ್ಷದ ಅತಿದೊಡ್ಡ ವೈಮಾನಿಕ ದಾಳಿಯಾಗಿದೆ. ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.

ತಮ್ಮ ವಾಯು ರಕ್ಷಣಾ ಘಟಕಗಳು ನಾಲ್ಕು ಗಂಟೆಗಳ ಅವಧಿಯಲ್ಲಿ 95 ಉಕ್ರೇನಿಯನ್ ಡ್ರೋನ್‌ಗಳನ್ನು ತಡೆಹಿಡಿದಿವೆ ಅಥವಾ ನಾಶಪಡಿಸಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಮಾಸ್ಕೋ ನಗರವನ್ನು ಗುರಿಯಾಗಿಸಿದ್ದ 12 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಭಾನುವಾರ ಹೇಳಿದ್ದಾರೆ.

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...