Homeಮುಖಪುಟರಷ್ಯಾ ಅಧ್ಯಕ್ಷೀಯ ಚುನಾವಣೆ: ಯುದ್ಧ ವಿರೋಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

ರಷ್ಯಾ ಅಧ್ಯಕ್ಷೀಯ ಚುನಾವಣೆ: ಯುದ್ಧ ವಿರೋಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

- Advertisement -
- Advertisement -

ಉಕ್ರೇನ್ ಮೇಲಿನ ದಾಳಿ ವಿರೋಧಿಸಿದ್ದ ರಷ್ಯಾದ ರಾಜಕಾರಣಿಯ ನಾಮಪತ್ರವನ್ನು ಅಲ್ಲಿನ ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ದಾಖಲೆಗಳಲ್ಲಿ ದೋಷದ ಕಾರಣ ನೀಡಿ ರಷ್ಯಾದ ಕೇಂದ್ರ ಚುನಾವಣಾ ಆಯೋಗ ನಾಮಪತ್ರ ತಿರಸ್ಕರಿಸಿದೆ.

ಮಾಜಿ ಸಂಸತ್ ಸದಸ್ಯೆ ಯೆಕತೆರಿನಾ ಡುಂಟ್ಸೋವ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಯೆಕತೆರಿನಾ ಉಕ್ರೇನ್‌ ಮೇಲಿನ ರಷ್ಯಾ ದಾಳಿಯನ್ನು ವಿರೋಧಿಸಿದ್ದರು. ಶಾಂತಿಗಾಗಿ ಕರೆ ನೀಡಿದ್ದರು. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದ ಡುಂಟ್ಸೋವ, ಶಾಂತಿಯುತ, ಸ್ನೇಹಪರ ಮತ್ತು ಗೌರವ ತತ್ತ್ವದ ಮೇಲೆ ಎಲ್ಲರೊಂದಿಗೆ ಸಹಕರಿಸಲು ಸಿದ್ಧವಾಗಿರುವ ಮಾನವೀಯ ರಷ್ಯಾ ಕಟ್ಟುವ ದೃಷ್ಟಿಕೋನ ಹೊಂದಿದ್ದಾರೆ.

ಡಿಸೆಂಬರ್ 23 ರಂದು ಕೇಂದ್ರ ಚುನಾವಣಾ ಆಯೋಗವು ನನ್ನ ಬೆಂಬಲಿಗರ ಗುಂಪು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಿದೆ ಎಂದು ಡುಂಟ್ಸೋವ ಟೆಲಿಗ್ರಾಮ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.

ಡುಂಟ್ಸೋವ ಅವರಿಗೆ ಸಂಬಂಧಿಸಿದ ಟೆಲಿಗ್ರಾಮ್ ಚಾನೆಲ್ ಪ್ರಕಾರ, ಚುನಾವಣಾ ಆಯೋಗವು ಅವರ ನಾಮಪತ್ರದಲ್ಲಿ ಹೆಸರುಗಳ ಕಾಗುಣಿತದಲ್ಲಿನ ತಪ್ಪುಗಳು ಸೇರಿದಂತೆ 100 ದೋಷಗಳನ್ನು ಕಂಡುಹಿಡಿದಿದೆ.

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ರಷ್ಯಾದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಡುಂಟ್ಸೋವ ಅವರು ತಿಳಿಸಿದ್ದಾರೆ.

ರಷ್ಯಾದ ಕಾನೂನಿನ ಪ್ರಕಾರ ಪಕ್ಷೇತರ ಅಭ್ಯರ್ಥಿಯ ನಾಮಪತ್ರಕ್ಕೆ ಕನಿಷ್ಟ 500 ಬೆಂಬಲಿಗರು ನಾಮನಿರ್ದೇಶನ ಮಾಡಬೇಕು. ಈ ಪ್ರಕಾರ ತಾನು 500 ಬೆಂಬಲಿಗರ ನಾಮನಿರ್ದೇಶನ ಹೊಂದಿದ್ದ ನಾಮಪತ್ರವನ್ನು ಡಿಸೆಂಬರ್ 20ರಂದು ಸಲ್ಲಿಸಿದ್ದೆ. ಡಿಸೆಂಬರ್ 23ರಂದು ನನ್ನ ನಾಮನಿರ್ದೇಶನದ ಗುಂಪನ್ನು ಮಾನ್ಯ ಮಾಡಲು ಚುನಾವಣಾ ಆಯೋಗ ನಿರಾಕರಿಸಿದೆ. ಈಗ ಮತ್ತೊಮ್ಮೆ ಬೆಂಬಲಿಗರ ಗುಂಪಿನಿಂದ ನಾಮನಿರ್ದೇಶನ ಮಾಡಲು ಸಮಯವಿಲ್ಲದ ಕಾರಣ, ತನ್ನನ್ನು ಅಭ್ಯರ್ಥಿಯಾಗಿ ಹೆಸರಿಸುವಂತೆ `ಯಬ್ಲೋಕೊ’ ಪಕ್ಷದ ಮುಖಂಡರಿಗೆ ಕೋರಿಕೆ ಸಲ್ಲಿಸಿದ್ದೇನೆ ಎಂದು ಡುಂಟ್ಸೋವ ಹೇಳಿದ್ದಾರೆ.

ಯಬ್ಲೋಕೊ ಪಕ್ಷದ ಸ್ಥಾಪಕ ಗ್ರೆಗೊರಿ ಯವ್ಲಿಂಸ್ಕಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ. ಆದರೆ, ಅವರು ಡುಂಟ್ಸೋವ ಅವರನ್ನು ಬೆಂಬಲಸುವ ಕುರಿತು ಇನ್ನೂ ನಿರ್ಧಾರವಾಗಿಲ್ಲ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ರಷ್ಯಾದ ಕಾನೂನಿನ ಅಡಿಯಲ್ಲಿ, ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವುದಾದರೆ ಕನಿಷ್ಠ 500 ಬೆಂಬಲಿಗರು ನಾಮನಿರ್ದೇಶನ ಮಾಡಬೇಕು ಮತ್ತು 40ಕ್ಕೂ ಹೆಚ್ಚಿನ ಪ್ರದೇಶಗಳಿಂದ ಕನಿಷ್ಠ 300,000 ಬೆಂಬಲದ ಸಹಿಗಳನ್ನು ಸಂಗ್ರಹಿಸಬೇಕು.

ಇದನ್ನೂ ಓದಿ : ಚೀನಾ: ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ, 6,300 ಜನರಿಗೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...