Homeಮುಖಪುಟರಷ್ಯಾ ಅಧ್ಯಕ್ಷೀಯ ಚುನಾವಣೆ: ಯುದ್ಧ ವಿರೋಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

ರಷ್ಯಾ ಅಧ್ಯಕ್ಷೀಯ ಚುನಾವಣೆ: ಯುದ್ಧ ವಿರೋಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

- Advertisement -
- Advertisement -

ಉಕ್ರೇನ್ ಮೇಲಿನ ದಾಳಿ ವಿರೋಧಿಸಿದ್ದ ರಷ್ಯಾದ ರಾಜಕಾರಣಿಯ ನಾಮಪತ್ರವನ್ನು ಅಲ್ಲಿನ ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ದಾಖಲೆಗಳಲ್ಲಿ ದೋಷದ ಕಾರಣ ನೀಡಿ ರಷ್ಯಾದ ಕೇಂದ್ರ ಚುನಾವಣಾ ಆಯೋಗ ನಾಮಪತ್ರ ತಿರಸ್ಕರಿಸಿದೆ.

ಮಾಜಿ ಸಂಸತ್ ಸದಸ್ಯೆ ಯೆಕತೆರಿನಾ ಡುಂಟ್ಸೋವ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಯೆಕತೆರಿನಾ ಉಕ್ರೇನ್‌ ಮೇಲಿನ ರಷ್ಯಾ ದಾಳಿಯನ್ನು ವಿರೋಧಿಸಿದ್ದರು. ಶಾಂತಿಗಾಗಿ ಕರೆ ನೀಡಿದ್ದರು. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದ ಡುಂಟ್ಸೋವ, ಶಾಂತಿಯುತ, ಸ್ನೇಹಪರ ಮತ್ತು ಗೌರವ ತತ್ತ್ವದ ಮೇಲೆ ಎಲ್ಲರೊಂದಿಗೆ ಸಹಕರಿಸಲು ಸಿದ್ಧವಾಗಿರುವ ಮಾನವೀಯ ರಷ್ಯಾ ಕಟ್ಟುವ ದೃಷ್ಟಿಕೋನ ಹೊಂದಿದ್ದಾರೆ.

ಡಿಸೆಂಬರ್ 23 ರಂದು ಕೇಂದ್ರ ಚುನಾವಣಾ ಆಯೋಗವು ನನ್ನ ಬೆಂಬಲಿಗರ ಗುಂಪು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಿದೆ ಎಂದು ಡುಂಟ್ಸೋವ ಟೆಲಿಗ್ರಾಮ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.

ಡುಂಟ್ಸೋವ ಅವರಿಗೆ ಸಂಬಂಧಿಸಿದ ಟೆಲಿಗ್ರಾಮ್ ಚಾನೆಲ್ ಪ್ರಕಾರ, ಚುನಾವಣಾ ಆಯೋಗವು ಅವರ ನಾಮಪತ್ರದಲ್ಲಿ ಹೆಸರುಗಳ ಕಾಗುಣಿತದಲ್ಲಿನ ತಪ್ಪುಗಳು ಸೇರಿದಂತೆ 100 ದೋಷಗಳನ್ನು ಕಂಡುಹಿಡಿದಿದೆ.

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ರಷ್ಯಾದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಡುಂಟ್ಸೋವ ಅವರು ತಿಳಿಸಿದ್ದಾರೆ.

ರಷ್ಯಾದ ಕಾನೂನಿನ ಪ್ರಕಾರ ಪಕ್ಷೇತರ ಅಭ್ಯರ್ಥಿಯ ನಾಮಪತ್ರಕ್ಕೆ ಕನಿಷ್ಟ 500 ಬೆಂಬಲಿಗರು ನಾಮನಿರ್ದೇಶನ ಮಾಡಬೇಕು. ಈ ಪ್ರಕಾರ ತಾನು 500 ಬೆಂಬಲಿಗರ ನಾಮನಿರ್ದೇಶನ ಹೊಂದಿದ್ದ ನಾಮಪತ್ರವನ್ನು ಡಿಸೆಂಬರ್ 20ರಂದು ಸಲ್ಲಿಸಿದ್ದೆ. ಡಿಸೆಂಬರ್ 23ರಂದು ನನ್ನ ನಾಮನಿರ್ದೇಶನದ ಗುಂಪನ್ನು ಮಾನ್ಯ ಮಾಡಲು ಚುನಾವಣಾ ಆಯೋಗ ನಿರಾಕರಿಸಿದೆ. ಈಗ ಮತ್ತೊಮ್ಮೆ ಬೆಂಬಲಿಗರ ಗುಂಪಿನಿಂದ ನಾಮನಿರ್ದೇಶನ ಮಾಡಲು ಸಮಯವಿಲ್ಲದ ಕಾರಣ, ತನ್ನನ್ನು ಅಭ್ಯರ್ಥಿಯಾಗಿ ಹೆಸರಿಸುವಂತೆ `ಯಬ್ಲೋಕೊ’ ಪಕ್ಷದ ಮುಖಂಡರಿಗೆ ಕೋರಿಕೆ ಸಲ್ಲಿಸಿದ್ದೇನೆ ಎಂದು ಡುಂಟ್ಸೋವ ಹೇಳಿದ್ದಾರೆ.

ಯಬ್ಲೋಕೊ ಪಕ್ಷದ ಸ್ಥಾಪಕ ಗ್ರೆಗೊರಿ ಯವ್ಲಿಂಸ್ಕಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ. ಆದರೆ, ಅವರು ಡುಂಟ್ಸೋವ ಅವರನ್ನು ಬೆಂಬಲಸುವ ಕುರಿತು ಇನ್ನೂ ನಿರ್ಧಾರವಾಗಿಲ್ಲ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ರಷ್ಯಾದ ಕಾನೂನಿನ ಅಡಿಯಲ್ಲಿ, ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವುದಾದರೆ ಕನಿಷ್ಠ 500 ಬೆಂಬಲಿಗರು ನಾಮನಿರ್ದೇಶನ ಮಾಡಬೇಕು ಮತ್ತು 40ಕ್ಕೂ ಹೆಚ್ಚಿನ ಪ್ರದೇಶಗಳಿಂದ ಕನಿಷ್ಠ 300,000 ಬೆಂಬಲದ ಸಹಿಗಳನ್ನು ಸಂಗ್ರಹಿಸಬೇಕು.

ಇದನ್ನೂ ಓದಿ : ಚೀನಾ: ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ, 6,300 ಜನರಿಗೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...