Homeಮುಖಪುಟರಷ್ಯಾ ಅಧ್ಯಕ್ಷೀಯ ಚುನಾವಣೆ: ಯುದ್ಧ ವಿರೋಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

ರಷ್ಯಾ ಅಧ್ಯಕ್ಷೀಯ ಚುನಾವಣೆ: ಯುದ್ಧ ವಿರೋಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

- Advertisement -
- Advertisement -

ಉಕ್ರೇನ್ ಮೇಲಿನ ದಾಳಿ ವಿರೋಧಿಸಿದ್ದ ರಷ್ಯಾದ ರಾಜಕಾರಣಿಯ ನಾಮಪತ್ರವನ್ನು ಅಲ್ಲಿನ ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ದಾಖಲೆಗಳಲ್ಲಿ ದೋಷದ ಕಾರಣ ನೀಡಿ ರಷ್ಯಾದ ಕೇಂದ್ರ ಚುನಾವಣಾ ಆಯೋಗ ನಾಮಪತ್ರ ತಿರಸ್ಕರಿಸಿದೆ.

ಮಾಜಿ ಸಂಸತ್ ಸದಸ್ಯೆ ಯೆಕತೆರಿನಾ ಡುಂಟ್ಸೋವ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಯೆಕತೆರಿನಾ ಉಕ್ರೇನ್‌ ಮೇಲಿನ ರಷ್ಯಾ ದಾಳಿಯನ್ನು ವಿರೋಧಿಸಿದ್ದರು. ಶಾಂತಿಗಾಗಿ ಕರೆ ನೀಡಿದ್ದರು. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದ ಡುಂಟ್ಸೋವ, ಶಾಂತಿಯುತ, ಸ್ನೇಹಪರ ಮತ್ತು ಗೌರವ ತತ್ತ್ವದ ಮೇಲೆ ಎಲ್ಲರೊಂದಿಗೆ ಸಹಕರಿಸಲು ಸಿದ್ಧವಾಗಿರುವ ಮಾನವೀಯ ರಷ್ಯಾ ಕಟ್ಟುವ ದೃಷ್ಟಿಕೋನ ಹೊಂದಿದ್ದಾರೆ.

ಡಿಸೆಂಬರ್ 23 ರಂದು ಕೇಂದ್ರ ಚುನಾವಣಾ ಆಯೋಗವು ನನ್ನ ಬೆಂಬಲಿಗರ ಗುಂಪು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಿದೆ ಎಂದು ಡುಂಟ್ಸೋವ ಟೆಲಿಗ್ರಾಮ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.

ಡುಂಟ್ಸೋವ ಅವರಿಗೆ ಸಂಬಂಧಿಸಿದ ಟೆಲಿಗ್ರಾಮ್ ಚಾನೆಲ್ ಪ್ರಕಾರ, ಚುನಾವಣಾ ಆಯೋಗವು ಅವರ ನಾಮಪತ್ರದಲ್ಲಿ ಹೆಸರುಗಳ ಕಾಗುಣಿತದಲ್ಲಿನ ತಪ್ಪುಗಳು ಸೇರಿದಂತೆ 100 ದೋಷಗಳನ್ನು ಕಂಡುಹಿಡಿದಿದೆ.

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ರಷ್ಯಾದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಡುಂಟ್ಸೋವ ಅವರು ತಿಳಿಸಿದ್ದಾರೆ.

ರಷ್ಯಾದ ಕಾನೂನಿನ ಪ್ರಕಾರ ಪಕ್ಷೇತರ ಅಭ್ಯರ್ಥಿಯ ನಾಮಪತ್ರಕ್ಕೆ ಕನಿಷ್ಟ 500 ಬೆಂಬಲಿಗರು ನಾಮನಿರ್ದೇಶನ ಮಾಡಬೇಕು. ಈ ಪ್ರಕಾರ ತಾನು 500 ಬೆಂಬಲಿಗರ ನಾಮನಿರ್ದೇಶನ ಹೊಂದಿದ್ದ ನಾಮಪತ್ರವನ್ನು ಡಿಸೆಂಬರ್ 20ರಂದು ಸಲ್ಲಿಸಿದ್ದೆ. ಡಿಸೆಂಬರ್ 23ರಂದು ನನ್ನ ನಾಮನಿರ್ದೇಶನದ ಗುಂಪನ್ನು ಮಾನ್ಯ ಮಾಡಲು ಚುನಾವಣಾ ಆಯೋಗ ನಿರಾಕರಿಸಿದೆ. ಈಗ ಮತ್ತೊಮ್ಮೆ ಬೆಂಬಲಿಗರ ಗುಂಪಿನಿಂದ ನಾಮನಿರ್ದೇಶನ ಮಾಡಲು ಸಮಯವಿಲ್ಲದ ಕಾರಣ, ತನ್ನನ್ನು ಅಭ್ಯರ್ಥಿಯಾಗಿ ಹೆಸರಿಸುವಂತೆ `ಯಬ್ಲೋಕೊ’ ಪಕ್ಷದ ಮುಖಂಡರಿಗೆ ಕೋರಿಕೆ ಸಲ್ಲಿಸಿದ್ದೇನೆ ಎಂದು ಡುಂಟ್ಸೋವ ಹೇಳಿದ್ದಾರೆ.

ಯಬ್ಲೋಕೊ ಪಕ್ಷದ ಸ್ಥಾಪಕ ಗ್ರೆಗೊರಿ ಯವ್ಲಿಂಸ್ಕಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ. ಆದರೆ, ಅವರು ಡುಂಟ್ಸೋವ ಅವರನ್ನು ಬೆಂಬಲಸುವ ಕುರಿತು ಇನ್ನೂ ನಿರ್ಧಾರವಾಗಿಲ್ಲ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ರಷ್ಯಾದ ಕಾನೂನಿನ ಅಡಿಯಲ್ಲಿ, ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವುದಾದರೆ ಕನಿಷ್ಠ 500 ಬೆಂಬಲಿಗರು ನಾಮನಿರ್ದೇಶನ ಮಾಡಬೇಕು ಮತ್ತು 40ಕ್ಕೂ ಹೆಚ್ಚಿನ ಪ್ರದೇಶಗಳಿಂದ ಕನಿಷ್ಠ 300,000 ಬೆಂಬಲದ ಸಹಿಗಳನ್ನು ಸಂಗ್ರಹಿಸಬೇಕು.

ಇದನ್ನೂ ಓದಿ : ಚೀನಾ: ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ, 6,300 ಜನರಿಗೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...