Homeಅಂತರಾಷ್ಟ್ರೀಯಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ದ ಅನಿವಾರ್ಯ ಎಂದಿದ್ದಾರೆ. ಈ ಕುರಿತು ಬೇರೆ ಬೇರೆ ರಾಷ್ಟ್ರಗಳ ಮುಖಂಡರು ಹೇಳಿದ್ದು ಇಲ್ಲಿದೆ.

ರಷ್ಯಾ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದೆ – ಇಂಗ್ಲೆಂಡ್

ಉಕ್ರೇನ್‌ನಲ್ಲಿನ ಭೀಕರ ಘಟನೆಗಳಿಂದ ದಿಗ್ಭ್ರಮೆಗೊಂಡಿದ್ದೇನೆ ಮತ್ತು ಮುಂದಿನ ಹಂತಗಳನ್ನು ಚರ್ಚಿಸಲು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದೇನೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ಮೇಲೆ ಈ ಅಪ್ರಚೋದಿತ ದಾಳಿಯನ್ನು ನಡೆಸುವ ಮೂಲಕ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ನಮ್ಮ ಮಿತ್ರರಾಷ್ಟ್ರಗಳು ಈ ಕುರಿತು ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತವೆ”. – ಬೋರಿಸ್ ಜಾನ್ಸನ್, ಇಂಗ್ಲೆಂಡ್ ಪ್ರಧಾನಿ.

ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ- ಜಪಾನ್

“ಉಕ್ರೇನ್ ಮೇಲಿನ ರಷ್ಯಾದ ದಾಳಿಯು ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ. ನಾವು ರಷ್ಯಾವನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಯಥಾಸ್ಥಿತಿಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಗಳನ್ನು ಅನುಮತಿಸುವುದಿಲ್ಲ. ಇದನ್ನು ತಡೆಯಲು ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯದೊಂದಿಗೆ ಸೇರಿ ಪ್ರಯತ್ನಗಳನ್ನು ಸಂಘಟಿಸುತ್ತೇವೆ ಮತ್ತು ಇದನ್ನು ತ್ವರಿತವಾಗಿ ನಿಭಾಯಿಸುತ್ತೇವೆ” – ಫ್ಯೂಮಿಯೊ ಕಿಶಿಡಾ, ಜಪಾನ್ ಪ್ರಧಾನಿ.

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ವಿಧಿಸುತ್ತೇವೆ – ಆಸ್ಟ್ರೇಲಿಯಾ

“ರಷ್ಯಾ ಯುದ್ಧವನ್ನು ಆಯ್ಕೆ ಮಾಡಿದೆ. ಇಂತಹ ಕ್ರೂರ ಆಕ್ರಮಣ ಮತ್ತು ಏಕಪಕ್ಷೀಯ ಪ್ರತಿಕೂಲ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಕೂಡಲೇ ರಷ್ಯಾ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇನೆ. ಈ ಅತಿರೇಕದ ಕೃತ್ಯಗಳಿಗೆ ರಷ್ಯಾದ ಅಧಿಕಾರಿಗಳು ಮತ್ತು ಘಟಕಗಳನ್ನು ನಾವು ಹೊಣೆಗಾರರನ್ನು ಗುರುತಿಸುತ್ತೇವೆ ಮತ್ತು ಆಸ್ಟ್ರೇಲಿಯಾವು ರಷ್ಯಾ ವಿರುದ್ಧ ಮತ್ತಷ್ಟು ಆರ್ಥಿಕ ನಿರ್ಬಂಧಗಳನ್ನು ವಿಧಿಸುತ್ತದೆ” – ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್

ಫ್ರಾನ್ಸ್ ಖಂಡಿಸುತ್ತದೆ

“ಉಕ್ರೇನ್ ವಿರುದ್ಧ ಯುದ್ಧ ಮಾಡುವ ರಷ್ಯಾದ ನಿರ್ಧಾರವನ್ನು ಫ್ರಾನ್ಸ್ ದೃಢವಾಗಿ ಖಂಡಿಸುತ್ತದೆ. ರಷ್ಯಾ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಕೊನೆಗೊಳಿಸಬೇಕು.- ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಉಕ್ರೇನ್ ಜನರೊಂದಿಗೆ ನಿಲ್ಲುತ್ತೆನೆ- ಅಮೆರಿಕ

ರಷ್ಯಾದ ಮಿಲಿಟರಿ ಪಡೆಗಳಿಂದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ದಾಳಿಯಿಂದ ಬಳಲುತ್ತಿರುವ ಉಕ್ರೇನ್ ಜನರೊಂದಿಗೆ ನಿಲ್ಲುತ್ತೇನೆ. ಈ ದಾಳಿಯು ತರುವ ಸಾವು ಮತ್ತು ವಿನಾಶಕ್ಕೆ ರಷ್ಯಾ ಮಾತ್ರ ಕಾರಣವಾಗಿದೆ ಮತ್ತು ಪ್ರಪಂಚವು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಇದಕ್ಕೆ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ”. ಜೋ ಬೈಡನ್, ಅಮೆರಿಕ ಅಧ್ಯಕ್ಷ

ಅನ್ಯಾಯ ಮತ್ತು ಅಸಮರ್ಥನೀಯ- ಇಟಲಿ

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ಅನ್ಯಾಯ ಮತ್ತು ಅಸಮರ್ಥನೀಯ. ಇಟಲಿ ಸರ್ಕಾರವು ಉಕ್ರೇನ್ ಮೇಲೆ ರಷ್ಯಾದ ದಾಳಿಯನ್ನು ಖಂಡಿಸುತ್ತದೆ. ಈ ನಾಟಕೀಯ ಕ್ಷಣದಲ್ಲಿ ಇಟಲಿ ಉಕ್ರೇನಿಯನ್ ಜನರು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ. ನಾವು ಯುರೋಪಿಯನ್ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳೊಂದಿಗೆ ತಕ್ಷಣವೇ ಪ್ರತಿಕ್ರಿಯಿಸಲು, ಏಕತೆ ಮತ್ತು ನಿರ್ಣಯದೊಂದಿಗೆ ಕೆಲಸ ಮಾಡುತ್ತಿದ್ದೇವೆ” ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಘಿ

ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ- ಪಾಕ್ ಪ್ರಧಾನಿ ಇಮ್ರಾನ್ ಖಾನ್

ಎರಡು ದಶಕಗಳ ನಂತರ ಪಾಕ್ ಪ್ರಧಾನಿಯೊಬ್ಬರು ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಸಮಯದಲ್ಲಿ ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಿಸಿದೆ. ಈ ಸಂದರ್ಭದಲ್ಲಿ ಮೊದಲ ಬಾರಿಗೆ ಭೇಟಿ ನೀಡಿದ ಪಾಕ್ ಪಿಎಂ ಇಮ್ರಾನ್ ಖಾನ್ “ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ” ಎಂದು ರಷ್ಯಾ ಅಧಿಕಾರಿಗಳಿಗೆ ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.

ಭಾರತದ ನಿಲುವು ಏನು?

ರಷ್ಯಾದ ಯುದ್ಧದ ನಿರ್ಧಾರವನ್ನು ಕಟುವಾಗಿ ಟೀಕಿಸದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಯುಎನ್ ತುರ್ತು ಸಭೆಯಲ್ಲಿ ಭಾರತವು ಎರಡು ಯುರೋಪಿಯನ್ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತ್ರ ಪ್ರಸ್ತಾಪಿಸಿದೆ ಮತ್ತು ಎರಡು ರಾಷ್ಟ್ರಗಳು ಅತ್ಯಂತ ಸಂಯಮ  ಕಾಯ್ದುಕೊಳ್ಳುವಂತೆ ಕರೆ ನೀಡಿದೆ. ಇದೇ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತದ ನಡುವಿನ ಪಾಲುದಾರಿಕೆ ಸಂಬಂಧ ಮುಂದುವರಿಯುತ್ತದೆ ಎಂದು ರಷ್ಯಾದ ರಾಯಭಾರಿ ಕಚೇರಿಯ ಉಸ್ತುವಾರಿ ರೋಮನ್ ಬಾಬುಶ್ಕಿನ್ ಹೇಳಿದ್ದಾರೆ.

“ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ರಷ್ಯಾ ಮತ್ತು ಭಾರತವು ಪರಸ್ಪರ ದೊಡ್ಡ ಯೋಜನೆಗಳನ್ನು ಹೊಂದಿದ್ದೇವೆ. ನಮ್ಮ ಪಾಲುದಾರಿಕೆಯು ಈಗ ಯಾವ ಮಟ್ಟದ್ದಲ್ಲಿದೆಯೋ, ಮುಂದೆಯೂ ಹಾಗೆಯೇ ಇರುತ್ತದೆ ಎಂದು ನಾವು ಭಾವಿಸುತ್ತೇವೆ. ಉಕ್ರೇನ್ ಜೊತೆಗಿನ ಬಿಕ್ಕಟ್ಟು ರಕ್ಷಣಾ ಕ್ಷೇತ್ರಗಳನ್ನು ಒಳಗೊಂಡಂತೆ ಭಾರತ-ರಷ್ಯಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ. ಮುಂದಿನ ತಿಂಗಳು ಗುಜರಾತ್‌ನಲ್ಲಿ ನಡೆಯಲಿರುವ ಡೆಫ್ ಎಕ್ಸ್ಪೋದಲ್ಲಿ ರಷ್ಯಾದ ಭಾಗವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...