Homeಅಂತರಾಷ್ಟ್ರೀಯಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ದ ಅನಿವಾರ್ಯ ಎಂದಿದ್ದಾರೆ. ಈ ಕುರಿತು ಬೇರೆ ಬೇರೆ ರಾಷ್ಟ್ರಗಳ ಮುಖಂಡರು ಹೇಳಿದ್ದು ಇಲ್ಲಿದೆ.

ರಷ್ಯಾ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದೆ – ಇಂಗ್ಲೆಂಡ್

ಉಕ್ರೇನ್‌ನಲ್ಲಿನ ಭೀಕರ ಘಟನೆಗಳಿಂದ ದಿಗ್ಭ್ರಮೆಗೊಂಡಿದ್ದೇನೆ ಮತ್ತು ಮುಂದಿನ ಹಂತಗಳನ್ನು ಚರ್ಚಿಸಲು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದೇನೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ಮೇಲೆ ಈ ಅಪ್ರಚೋದಿತ ದಾಳಿಯನ್ನು ನಡೆಸುವ ಮೂಲಕ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ನಮ್ಮ ಮಿತ್ರರಾಷ್ಟ್ರಗಳು ಈ ಕುರಿತು ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತವೆ”. – ಬೋರಿಸ್ ಜಾನ್ಸನ್, ಇಂಗ್ಲೆಂಡ್ ಪ್ರಧಾನಿ.

ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ- ಜಪಾನ್

“ಉಕ್ರೇನ್ ಮೇಲಿನ ರಷ್ಯಾದ ದಾಳಿಯು ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ. ನಾವು ರಷ್ಯಾವನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಯಥಾಸ್ಥಿತಿಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಗಳನ್ನು ಅನುಮತಿಸುವುದಿಲ್ಲ. ಇದನ್ನು ತಡೆಯಲು ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯದೊಂದಿಗೆ ಸೇರಿ ಪ್ರಯತ್ನಗಳನ್ನು ಸಂಘಟಿಸುತ್ತೇವೆ ಮತ್ತು ಇದನ್ನು ತ್ವರಿತವಾಗಿ ನಿಭಾಯಿಸುತ್ತೇವೆ” – ಫ್ಯೂಮಿಯೊ ಕಿಶಿಡಾ, ಜಪಾನ್ ಪ್ರಧಾನಿ.

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ವಿಧಿಸುತ್ತೇವೆ – ಆಸ್ಟ್ರೇಲಿಯಾ

“ರಷ್ಯಾ ಯುದ್ಧವನ್ನು ಆಯ್ಕೆ ಮಾಡಿದೆ. ಇಂತಹ ಕ್ರೂರ ಆಕ್ರಮಣ ಮತ್ತು ಏಕಪಕ್ಷೀಯ ಪ್ರತಿಕೂಲ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಕೂಡಲೇ ರಷ್ಯಾ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇನೆ. ಈ ಅತಿರೇಕದ ಕೃತ್ಯಗಳಿಗೆ ರಷ್ಯಾದ ಅಧಿಕಾರಿಗಳು ಮತ್ತು ಘಟಕಗಳನ್ನು ನಾವು ಹೊಣೆಗಾರರನ್ನು ಗುರುತಿಸುತ್ತೇವೆ ಮತ್ತು ಆಸ್ಟ್ರೇಲಿಯಾವು ರಷ್ಯಾ ವಿರುದ್ಧ ಮತ್ತಷ್ಟು ಆರ್ಥಿಕ ನಿರ್ಬಂಧಗಳನ್ನು ವಿಧಿಸುತ್ತದೆ” – ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್

ಫ್ರಾನ್ಸ್ ಖಂಡಿಸುತ್ತದೆ

“ಉಕ್ರೇನ್ ವಿರುದ್ಧ ಯುದ್ಧ ಮಾಡುವ ರಷ್ಯಾದ ನಿರ್ಧಾರವನ್ನು ಫ್ರಾನ್ಸ್ ದೃಢವಾಗಿ ಖಂಡಿಸುತ್ತದೆ. ರಷ್ಯಾ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಕೊನೆಗೊಳಿಸಬೇಕು.- ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಉಕ್ರೇನ್ ಜನರೊಂದಿಗೆ ನಿಲ್ಲುತ್ತೆನೆ- ಅಮೆರಿಕ

ರಷ್ಯಾದ ಮಿಲಿಟರಿ ಪಡೆಗಳಿಂದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ದಾಳಿಯಿಂದ ಬಳಲುತ್ತಿರುವ ಉಕ್ರೇನ್ ಜನರೊಂದಿಗೆ ನಿಲ್ಲುತ್ತೇನೆ. ಈ ದಾಳಿಯು ತರುವ ಸಾವು ಮತ್ತು ವಿನಾಶಕ್ಕೆ ರಷ್ಯಾ ಮಾತ್ರ ಕಾರಣವಾಗಿದೆ ಮತ್ತು ಪ್ರಪಂಚವು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಇದಕ್ಕೆ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ”. ಜೋ ಬೈಡನ್, ಅಮೆರಿಕ ಅಧ್ಯಕ್ಷ

ಅನ್ಯಾಯ ಮತ್ತು ಅಸಮರ್ಥನೀಯ- ಇಟಲಿ

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ಅನ್ಯಾಯ ಮತ್ತು ಅಸಮರ್ಥನೀಯ. ಇಟಲಿ ಸರ್ಕಾರವು ಉಕ್ರೇನ್ ಮೇಲೆ ರಷ್ಯಾದ ದಾಳಿಯನ್ನು ಖಂಡಿಸುತ್ತದೆ. ಈ ನಾಟಕೀಯ ಕ್ಷಣದಲ್ಲಿ ಇಟಲಿ ಉಕ್ರೇನಿಯನ್ ಜನರು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ. ನಾವು ಯುರೋಪಿಯನ್ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳೊಂದಿಗೆ ತಕ್ಷಣವೇ ಪ್ರತಿಕ್ರಿಯಿಸಲು, ಏಕತೆ ಮತ್ತು ನಿರ್ಣಯದೊಂದಿಗೆ ಕೆಲಸ ಮಾಡುತ್ತಿದ್ದೇವೆ” ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಘಿ

ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ- ಪಾಕ್ ಪ್ರಧಾನಿ ಇಮ್ರಾನ್ ಖಾನ್

ಎರಡು ದಶಕಗಳ ನಂತರ ಪಾಕ್ ಪ್ರಧಾನಿಯೊಬ್ಬರು ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಸಮಯದಲ್ಲಿ ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಿಸಿದೆ. ಈ ಸಂದರ್ಭದಲ್ಲಿ ಮೊದಲ ಬಾರಿಗೆ ಭೇಟಿ ನೀಡಿದ ಪಾಕ್ ಪಿಎಂ ಇಮ್ರಾನ್ ಖಾನ್ “ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ” ಎಂದು ರಷ್ಯಾ ಅಧಿಕಾರಿಗಳಿಗೆ ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.

ಭಾರತದ ನಿಲುವು ಏನು?

ರಷ್ಯಾದ ಯುದ್ಧದ ನಿರ್ಧಾರವನ್ನು ಕಟುವಾಗಿ ಟೀಕಿಸದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಯುಎನ್ ತುರ್ತು ಸಭೆಯಲ್ಲಿ ಭಾರತವು ಎರಡು ಯುರೋಪಿಯನ್ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತ್ರ ಪ್ರಸ್ತಾಪಿಸಿದೆ ಮತ್ತು ಎರಡು ರಾಷ್ಟ್ರಗಳು ಅತ್ಯಂತ ಸಂಯಮ  ಕಾಯ್ದುಕೊಳ್ಳುವಂತೆ ಕರೆ ನೀಡಿದೆ. ಇದೇ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತದ ನಡುವಿನ ಪಾಲುದಾರಿಕೆ ಸಂಬಂಧ ಮುಂದುವರಿಯುತ್ತದೆ ಎಂದು ರಷ್ಯಾದ ರಾಯಭಾರಿ ಕಚೇರಿಯ ಉಸ್ತುವಾರಿ ರೋಮನ್ ಬಾಬುಶ್ಕಿನ್ ಹೇಳಿದ್ದಾರೆ.

“ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ರಷ್ಯಾ ಮತ್ತು ಭಾರತವು ಪರಸ್ಪರ ದೊಡ್ಡ ಯೋಜನೆಗಳನ್ನು ಹೊಂದಿದ್ದೇವೆ. ನಮ್ಮ ಪಾಲುದಾರಿಕೆಯು ಈಗ ಯಾವ ಮಟ್ಟದ್ದಲ್ಲಿದೆಯೋ, ಮುಂದೆಯೂ ಹಾಗೆಯೇ ಇರುತ್ತದೆ ಎಂದು ನಾವು ಭಾವಿಸುತ್ತೇವೆ. ಉಕ್ರೇನ್ ಜೊತೆಗಿನ ಬಿಕ್ಕಟ್ಟು ರಕ್ಷಣಾ ಕ್ಷೇತ್ರಗಳನ್ನು ಒಳಗೊಂಡಂತೆ ಭಾರತ-ರಷ್ಯಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ. ಮುಂದಿನ ತಿಂಗಳು ಗುಜರಾತ್‌ನಲ್ಲಿ ನಡೆಯಲಿರುವ ಡೆಫ್ ಎಕ್ಸ್ಪೋದಲ್ಲಿ ರಷ್ಯಾದ ಭಾಗವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...